ದಾವಣಗೆರೆಯಲ್ಲಿ ಲಾಕಪ್ ಡೆತ್ ಆರೋಪ; ಸಿಐಡಿ ತನಿಖೆ ಆರಂಭ
ದಾವಣಗೆರೆ, ಅಕ್ಟೋಬರ್ 8: ದಾವಣಗೆರೆಯ ಮಾಯಕೊಂಡ ಪೊಲೀಸರ ವಶದಲ್ಲಿದ್ದ ಮರಳಸಿದ್ದಪ್ಪ ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸಿದೆ.
ಮಾಯಕೊಂಡ ಪೊಲೀಸ್ ಠಾಣೆಗೆ ಸಿಐಡಿ ಡಿವೈಎಸ್ಪಿ ಕೆ.ಸಿ. ಗಿರೀಶ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪೊಲೀಸ್ ಠಾಣೆಯಲ್ಲಿದ್ದ ಸಿಸಿಟಿವಿ ಸೇರಿದಂತೆ ಸಾಕ್ಷ್ಯಗಳ ಪರಿಶೀಲನೆ ನಡೆಸಿದ ತಂಡ, ಮೃತದೇಹ ಪತ್ತೆಯಾಗಿದ್ದ ಸ್ಥಳವನ್ನೂ ಪರಿಶೀಲಿಸಿದ್ದಾರೆ.
ಸಿಐಡಿ ತಂಡದಿಂದ ಲಾಕಪ್ ಡೆತ್ ತನಿಖೆ ಆರಂಭಗೊಂಡಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದಿದ್ದಾರೆ. ಅ.6ರ ಮಂಗಳವಾರ ವಿಟ್ಟಲಾಪುರದ ಮರಳಸಿದ್ದಪ್ಪರದ್ದು ಲಾಕಪ್ ಡೆತ್ ಎಂಬ ಶಂಕೆ ವ್ಯಕ್ತವಾಗಿತ್ತು. ಪ್ರಕರಣ ಸಂಬಂಧ ಮಾಯಕೊಂಡ ಪಿ ಎಸ್ ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ನಿನ್ನೆ ಮೃತ ಮರಳಸಿದ್ದಪ್ಪ ಮರಣೋತ್ತರ ವರದಿ ಬಂದ ನಂತರ ಕುಟುಂಬಕ್ಕೆ ಶವ ಹಸ್ತಾಂತರ ಮಾಡಲಾಗಿದೆ.

ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದುಕೊಂಡು ಬಂದು ಪೊಲೀಸರು ಥಳಿಸಿದ ಕಾರಣ ಮರಳಸಿದ್ಧಪ್ಪ ಸಾವನ್ನಪ್ಪಿದ್ದರು ಎಂಬ ಆರೋಪ ಕುಟುಂಬದವರಿಂದ ಕೇಳಿ ಬಂದಿತ್ತು. ಮರಳಸಿದ್ದಪ್ಪ ಬಗೆಗಿನ ವೈಯಕ್ತಿಕ ಮಾಹಿತಿಯನ್ನೂ ಸಿಐಡಿ ತಂಡ ಕಲೆ ಹಾಕಿದೆ. ಗಂಡು ಮಗು ಪಡೆಯುವ ಸಲುವಾಗಿ ಮರಳಸಿದ್ಧಪ್ಪ ಎರಡನೇ ವಿವಾಹವಾಗಿದ್ದ ಎನ್ನಲಾಗಿದೆ. ತನ್ನ ಸಂಬಂಧಿಕರಲ್ಲಿಯೇ ಓರ್ವ ಯುವತಿಯನ್ನು ಮದುವೆಯಾಗಿದ್ದು, ಮೊಮ್ಮಗಳಿದ್ದರೂ ಮರಳಸಿದ್ಧಪ್ಪ 2 ನೇ ಮದುವೆಯಾಗಿದ್ದ ಎಂಬ ಕುರಿತು ಕುಟುಂಬದಲ್ಲಿ ಜಗಳವಾಗಿತ್ತು. ಈ ಬಗ್ಗೆ ಸ್ಥಳೀಯ ಮುಖಂಡರು ಇಬ್ಬರನ್ನು ಕೂರಿಸಿ ಚರ್ಚೆ ನಡೆಸಿದ್ದರು ಎನ್ನಲಾಗಿದೆ.
ಈ ಎಲ್ಲಾ ಆಧಾರಗಳನ್ನಿಟ್ಟುಕೊಂಡು ಹಾಗೂ ವಿವಿಧ ಆಯಾಮಗಳಿಂದ ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು ಠಾಣೆಯೊಳಗೆ ಥಳಿಸಿ ಮರಳಸಿದ್ಧಪ್ಪ ಸಾವನ್ನಪ್ಪಿದ ಬಳಿಕ ಬಸ್ ನಿಲ್ದಾಣದ ಬಳಿ ಮೃತದೇಹ ಸಾಗಿಸಿದ್ದರಾ ಎಂಬ ಬಗ್ಗೆಯೂ ಸಿಐಡಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications