ಹೂತಿದ್ದ ಮೃತದೇಹ ತೆಗೆದು ಅಗ್ನಿಸ್ಪರ್ಶ: ಶವ ಮೇಲೆತ್ತುವ ವಿಚಾರಕ್ಕೆ ಗಲಾಟೆ, 28 ಜನರ ಬಂಧನ
ದಾವಣಗೆರೆ, ಸೆಪ್ಟೆಂಬರ್ 04: ಮಾಯಕೊಂಡ ಠಾಣಾ ವ್ಯಾಪ್ತಿಯ ನಲ್ಕುಂದ ಗ್ರಾಮದಲ್ಲಿ ಮೂಢನಂಬಿಕೆ ಹಿನ್ನೆಲೆಯಲ್ಲಿ ಹೂತಿದ್ದ ಶವ ಮೇಲೆತ್ತಿ ಅಗ್ನಿಸ್ಪರ್ಶ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು, ಘಟನೆ ಸಂಬಂಧ 28 ಜನರನ್ನು ಬಂಧಿಸಲಾಗಿದೆ.
ಕಳೆದ ತಿಂಗಳು ಆಗಸ್ಟ್ 4 ನೇ ತಾರೀಖಿನಂದು ನಲ್ಕುಂದ ಗ್ರಾಮದ 60 ವರ್ಷದ ಲಕ್ಷ್ಮೀದೇವಿ ಅವರು ವಯೋಸಹಜ ಖಾಯಿಲೆಯಿಂದ ಮೃತಪಟ್ಟಿದ್ದರು. ಅವರ ಜಾಗದಲ್ಲಿಯೇ ಮೃತದೇಹ ಮಣ್ಣು ಮಾಡಲಾಗಿತ್ತು. ಇದೇ ಸಮಯದಲ್ಲಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯಾಗಿತ್ತು. ಆದರೆ ನಲ್ಕುಂದ ಗ್ರಾಮದಲ್ಲಿ ಮಾತ್ರ ಮಳೆಯಾಗಿರಲಿಲ್ಲ.

ಇದರಿಂದಾಗಿ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಮೃತಪಟ್ಟಿದ್ದ ಲಕ್ಷ್ಮೀದೇವಿಗೆ ತೊನ್ನು ಇದ್ದ ಕಾರಣ ಅವರನ್ನು ಮಣ್ಣು ಮಾಡಲಾಗಿದೆ. ಈ ಕಾರಣದಿಂದಾಗಿ ಗ್ರಾಮದಲ್ಲಿ ಮಳೆಯಾಗುತ್ತಿಲ್ಲ. ಆದ್ದರಿಂದ ಮೃತ ಲಕ್ಷ್ಮೀದೇವಿಯವರ ಶವವನ್ನು ಹೊರ ತೆಗೆದು ಸುಡಲು ತೀರ್ಮಾನಿಸಿದರು. ಮಣ್ಣು ಮಾಡಿದ್ದ ಶವವನ್ನು ಮೇಲಕ್ಕೆತ್ತಲು ನಿರ್ದಿಷ್ಟ ಸಮುದಾಯದವರೇ ಮೇಲಕ್ಕೆತ್ತಬೇಕು ಎಂದು ಹೇಳಲಾಯಿತು. ಈ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಮಾತಿನ ಚಕಮಕಿ ನಡೆದು ಅದು ವಿಕೋಪಕ್ಕೆ ಹೋಗಿದೆ.
ಸೆಪ್ಟಂಬರ್ 2 ರಂದು ಸಂಜೆ ಲಕ್ಷ್ಮೀದೇವಿಯ ಮೃತದೇಹವನ್ನು ಹೊರ ತೆಗೆದು ಅದೇ ಜಾಗದಲ್ಲಿ, ಸುಡುವ ಸಮಯದಲ್ಲಿ ನಲ್ಕುಂದ ಗ್ರಾಮದ ಸ್ವಾಮಿ ಮತ್ತು ನವೀನ್ ಕುಮಾರ್ ರವರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿತ್ತು. ಇದೇ ವಿಷಯವನ್ನು ಮುಂದುವರೆಸಿಕೊಂಡು ಎರಡು ಸಮುದಾಯಗಳ ನಡುವೆ ನಲ್ಕುಂದ ಗ್ರಾಮದ ದುರುಗಮ್ಮ ದೇವಸ್ಥಾನದ ಬಳಿ ಜಗಳವಾಗಿದೆ. ಹೊಡೆದಾಟವೂ ನಡೆದಿದೆ.

ವಾದ - ವಿವಾದದ ಸಂದರ್ಭದಲ್ಲಿ ಗ್ರಾಮದ ಸಿದ್ದೇಶ್ ಎಂಬುವವರ ಮೇಲೆ ಹಲ್ಲೆ ನಡೆದಿತ್ತು. ಗಾಯಗೊಂಡಿರುವ ಅವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 28 ಮಂದಿಯನ್ನು ಬಂಧಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಎಎಸ್ಪಿ ಆರ್. ಬಿ. ಬಸರಗಿ, ಡಿವೈಎಸ್ಪಿ ಬಸವರಾಜ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು. ಎರಡು ಸಮುದಾಯಗಳಿಗೂ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.
ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಉಮಾ ಪ್ರಶಾಂತ್ ಅವರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. 'ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಮೂಢನಂಬಿಕೆ ಹಿನ್ನೆಲೆಯಲ್ಲಿ ಹೂತಿದ್ದ ಶವವನ್ನು ಮೇಲಕ್ಕೆತ್ತಿ ಸುಡಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ. ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಗ್ರಾಮದಲ್ಲಿ ಮೌಢ್ಯಾಚರಣೆ ಅನುಸರಿಸದಂತೆ ಗ್ರಾಮಸ್ಥರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲಾಗುವುದು' ಎಂದು ತಿಳಿಸಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications