Get Updates
Get notified of breaking news, exclusive insights, and must-see stories!

ನೀತಿ ಸಂಹಿತೆ ಜಾರಿ: ಇದುವರೆಗೂ ದಾವಣಗೆರೆ ಜಿಲ್ಲೆಯೊಂದರಲ್ಲೇ ನಗದು ಸೇರಿ 93,42,496 ರೂ. ಮೌಲ್ಯದ ವಸ್ತುಗಳು ಜಪ್ತಿ, ಮಾಹಿತಿ

ದಾವಣಗೆರೆ, ಏಪ್ರಿಲ್‌, 08: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಚುನಾವಣಾ ಅಕ್ರಮಗಳು ಕಂಡುಬದಲ್ಲಿ ಫೋಟೋ ತೆಗೆದು ಸಿ-ವಿಜಲ್ ದೂರ ಆ್ಯಪ್‌ನಲ್ಲಿ ಅಪ್‍ಲೋಡ್ ಮಾಡಬಹುದು. ಚುನಾವಣಾ ಆಯೋಗ ಈ ದೂರುಗಳ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಅವರು ತಿಳಿಸಿದರು.

ದಾವಣಗೆರೆ ನಗರದ ಪ್ರೆಸ್ ಕ್ಲಬ್‍ನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣಾ ಅಕ್ರಮಗಳ ಕುರಿತಂತೆ ದೂರು ದಾಖಲಿಸಿದವರ ಮಾಹಿತಿಯನ್ನು ಗೌಪ್ಯವಾಗಿರಿಸಲಾಗುವುದು. ಸಹಾಯವಾಣಿ 1950 ಸಂಖ್ಯೆಗೆ ಉಚಿತ ಕರೆ ಮಾಡಿ ಮಾಹಿತಿ ನೀಡಬಹುದು. ಹಾಗೂ ಮತದಾರರು ತಮ್ಮ ಹೆಸರು ಸೇರಿದಂತೆ ಚುನಾವಣಾ ಮಾಹಿತಿಗಾಗಿ ಮೊಬೈಲ್‍ನ ಪ್ಲೇಸ್ಟೋರ್‌ನಲ್ಲಿ ವೋಟರ್ ಹೆಲ್ಪ್‌ಲೈನ್ ಡೌನ್‍ಲೋಡ್ ಮಾಡಿಕೊಂಡು ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಮತದಾರರು ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆಯೂ ಮನವಿ ಮಾಡಿಕೊಂಡರು.

Code of Conduct: Davanagere Police seized items worth Rs 93,42,496

ಅಪರಾಧಗಳ ಬಗ್ಗೆ ತೀವ್ರ ನಿಗಾವಹಿಸಲಾಗಿದೆ

ಚುನಾವಣಾ ಅಪರಾಧಗಳ ಬಗ್ಗೆ ತೀವ್ರ ನಿಗಾವಹಿಸಲಾಗಿದೆ. ಈಗಾಗಲೇ ಜಿಲ್ಲಾದ್ಯಂತ ಆಯ್ದ ಸ್ಥಳಗಳಲ್ಲಿ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಹಾಗೆಯೇ ಪ್ರತಿ ಚಲನವಲಗಳ ಬಗ್ಗೆ ನಿಗಾವಹಿಸಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ತಂಡ, ಸ್ಥಿರ ಕಣ್ಗಾವಲು ತಂಡ, ಸೆಕ್ಟರ್ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಇದುವರೆಗೂ ಜಪ್ತಿಯಾದ ವಸ್ತುಗಳ ವಿವರ

ವಿಧಾನಸಭಾ ಸಾರ್ವತ್ರಿಕ ಚುನಾಚವಣೆಯ ನೀತಿ ಸಂಹಿತೆ ಜಾರಿಯಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 93,42,496 ರೂಪಾಯಿ ಮೊತ್ತದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 2,53,400 ರೂಪಾಯಿ ಮೊತ್ತದ 6,627 ಲೀಟರ್ ಮದ್ಯ, ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 42,6,208 ರೂಪಾಯಿ ನಗದು, 56,100 ರೂಪಾಯಿ ಮೌಲ್ಯದ 3.2 ಕೆ.ಜಿ ನಿಕೋಟಿನ್ಸ್ ಮತ್ತು ಅಕ್ರಮವಾಗಿ ಸಾಗಿಸುತ್ತಿದ್ದ 66.7 ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

Code of Conduct: Davanagere Police seized items worth Rs 93,42,496

ಯಾರಿಗೆಲ್ಲ ಅಂಚೆ ಮತದಾನದ ವ್ಯವಸ್ಥೆ?

ಚುನಾವಣಾ ಆಯೋಗ ಈ ಬಾರಿಯೂ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ರೈಲ್ವೆ, ದೂರದರ್ಶನ, ಆರೋಗ್ಯ ಇಲಾಖೆ, ಅಗ್ನಿಶಾಮಕ ಠಾಣೆ, ಕರ್ನಾಟಕ ರಾಜ್ಯ ರಸ್ತೆ ನಿಗಮ, ವಾರ್ತಾ ಇಲಾಖೆ, ಸಂಚಾರಿ ಪೊಲೀಸ್, ತುರ್ತು ಆರೋಗ್ಯ ಸೇವೆ, ಬೆಂಗಳೂರು ವಿದ್ಯುತ್ ಸರಬರಾಜು ನಿಗಮ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಭಾರತೀಯ ದೂರಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಅಗತ್ಯ ಸೇವಾನಿರತ 12 ಇಲಾಖೆಗಳಿಗೆ ಅಂಚೆ ಮತದಾನದ ವ್ಯವಸ್ಥೆ ಜಾರಿಗೆ ತಂದಿದೆ.

ಮತದಾನ ದಿನದಂದು ಚುನಾವಣಾ ಕರ್ತವ್ಯದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಂಚೆ ಮತದಾನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಅಲ್ಲದೆ ವಿಶೇಷ ಚೇತನ ಮತದಾರರಿಗೆ ಹಾಗೂ 80 ವರ್ಷ ಮೇಲ್ಪಟ್ಟ ಹಿರಿಯ ಮತದಾರರಿಗೆ ಅವರು ಇಚ್ಚಿಸಲ್ಪಟ್ಟರೆ ಮನೆಯಲ್ಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮತಗಟ್ಟೆಗಳಲ್ಲಿ ವಿಕಲಚೇತನರಿಗೆ ರ್ಯಾಂಪ್ ವ್ಯವಸ್ಥೆ, ವಾಹನ ವ್ಯವಸ್ಥೆ ಹಾಗೂ ಪ್ರತಿ ಮತಗಟ್ಟೆಯಲ್ಲೂ ಕುಡಿಯುವ ನೀರು, ಬೆಳಕು, ನೆರಳು, ಶೌಚಾಲಯ ವ್ಯವಸ್ಥೆಗಳಿರುವಂತೆ ನೋಡಿಕೊಳ್ಳಲಾಗಿದೆ.

ದಾವಣಗೆರೆ ನಗರದ ಉತ್ತರ ಮತ್ತು ದಕ್ಷಿಣ ಮತ ಕ್ಷೇತ್ರದಲ್ಲಿ ತಲಾ ಒಂದು ವಿಶೇಷ ಚೇತನರ ಮತಗಟ್ಟೆ, ದಾವಣಗೆರೆ ತಾಲೂಕಿನಲ್ಲಿ ಸ್ಥಳೀಯ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ಲಂಬಾಣಿ ತಾಂಡಾವೊಂದರಲ್ಲಿ ವಿಶೇಷ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. ಹಾಗೂ ಯುವ ಜನರೇ ನಿರ್ವಹಿಸುವ ಮತಗಟ್ಟೆ ಹಾಗೂ ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಾ.ಬಿ.ಆರ್.ರಂಗನಾಥ್ ಕುಳಗಟ್ಟೆ, ಜಿಲ್ಲಾ ವರದಿಗಾರರ ಒಕ್ಕೂಟದ ಅಧ್ಯಕ್ಷ ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಡಾ.ಸಿ.ವರದರಾಜ್, ಖಜಾಂಚಿ ಮಧುನಾಗರಾಜ ಕುಂದವಾಡ, ಮತ್ತು ಜಿಲ್ಲಾ ಮಟ್ಟದ ವರದಿಗಾರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+