ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಹೀಗೆಲ್ಲಾ ಮಾತಾಡಬೇಕಾ?; ರೇಣುಕಾಚಾರ್ಯ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

Recommended Video

ಕೈ ನಾಯಕರು ನಿರ್ಜೀವವಾಗಿದ್ದಾರೆ: ರೇಣುಕಾಚಾರ್ಯ | M. P. Renukacharya

ದಾವಣಗೆರೆ, ಸೆಪ್ಟೆಂಬರ್ 16: "ಬಿಜೆಪಿ ಪಕ್ಷದಲ್ಲಿ ಸಂಘಟನೆ ಇದೆ, ಯಾರಿಗೂ ಅಸಮಾಧಾನವಾಗಿಲ್ಲ" ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ನಮ್ಮ ಸರ್ಕಾರ ಬಂದಿದೆ: ವಿವಾದ ತಂದ ರೇಣುಕಾಚಾರ್ಯ ಹೇಳಿಕೆಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ನಮ್ಮ ಸರ್ಕಾರ ಬಂದಿದೆ: ವಿವಾದ ತಂದ ರೇಣುಕಾಚಾರ್ಯ ಹೇಳಿಕೆ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ನಡೆದ ಶಾಲಾ‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ರೇಣುಕಾಚಾರ್ಯ ಮಾಧ್ಯಮಗಳ ಜೊತೆ ಮಾತನಾಡಿ, "ಎಲ್ಲಾ ಶಾಸಕರು, ಸಚಿವರು ಸಂಘಟನೆ ಮಾಡಿ ಯಡಿಯೂರಪ್ಪನವರ ಕೈ ಬಲಗೊಳಿಸುತ್ತಿದ್ದಾರೆ. ರಾಜ್ಯಾಧ್ಯಕ್ಷರು ಕೂಡ ಸಂಘಟನೆ ಮಾಡಲು ಕರೆ ಕೊಟ್ಟಿದ್ದಾರೆ. ರಾಜ್ಯಾಧ್ಯಕ್ಷರ ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ಕಾರ ಸುಭದ್ರವಾಗಿ ನಡೆಯಲಿದೆ" ಎಂದು ಹೇಳಿದರು.

Congress Is Sinking Ship Said Renukaacharya In Nyamati

"ಮಾಜಿ‌ ಸಿಎಂ ಸಿದ್ದರಾಮಯ್ಯನವರು ಯಡಿಯೂರಪ್ಪ ಹಾಗೂ ಅಮಿತ್ ಶಾ ಬಗ್ಗೆ ಹಗುರವಾಗಿ ‌ಮಾತನಾಡಿದ್ದು ಸರಿಯಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲಾ ನೆರವು ನೀಡುತ್ತದೆ. ಕಾಂಗ್ರೆಸ್ ಪಕ್ಷದ ಕೇಂದ್ರ ಹಾಗೂ ರಾಜ್ಯದ ನಾಯಕರು ನಿರ್ಜೀವವಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ‌ಪಕ್ಷ ಮುಳುಗುತ್ತಿರುವ ಹಡಗು. ಅವರು ಈ ರೀತಿ ಮಾತನಾಡುವುದು ಸರಿಯಲ್ಲ. ಸಿದ್ದರಾಮಯ್ಯನವರೇ ನೀವು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ" ಎಂದು ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದರು.

English summary
"Siddaramaiah had spoken lightly about Yeddyurappa and Amit Shah. it is not right. and moreover congress is a sinking ship. is there necessity to speak like this?" asked MP Renukacharya in davangere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X