ಶಾಮನೂರು ಶಿವಶಂಕರಪ್ಪಗೆ ಕೋವಿಡ್ ಸೋಂಕು
ದಾವಣಗೆರೆ, ಆಗಸ್ಟ್ 09 : ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪಗೆ ಕೋವಿಡ್ ಸೋಂಕು ತಗುಲಿದೆ. ಪ್ರಸ್ತುತ ಅವರು ಬೆಂಗಳೂರಿನಲ್ಲಿದ್ದಾರೆ.
89 ವರ್ಷದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು. ಶಾಮನೂರು ಶಿವಶಂಕರಪ್ಪ ಪುತ್ರ ಎಸ್. ಎಸ್. ಮಲ್ಲಿಕಾರ್ಜುನ ಅವರಿಗೆ ಕೋವಿಡ್ ಸೋಂಕು ತಗುಲಿರುವುದು 5 ದಿನಗಳ ಹಿಂದೆ ಖಚಿತವಾಗಿತ್ತು. ಆದ್ದರಿಂದ, ಕುಟುಂಬ ಸದಸ್ಯರ ಪರೀಕ್ಷೆ ಮಾಡಿಸಲಾಗಿತ್ತು.
ಶನಿವಾರ ಶಾಮನೂರು ಶಿವಶಂಕರಪ್ಪ ಅವರ ಕೋವಿಡ್ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ಶಾಮನೂರು ಶಿವಶಂಕರಪ್ಪ ಬೆಂಗಳೂರಿನಲ್ಲಿದ್ದು, 'ಸ್ಪರ್ಶ' ಆಸ್ಪತ್ರೆಗೆ ದಾಖಲಾಗಿದ್ದಾರೆ.

"ನಾನು ಬೆಂಗಳೂರಿನಲ್ಲಿದ್ದು ಕೋವಿಡ್ ವರದಿ ಪಾಸಿಟಿವ್ ಬಂದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ" ಎಂದು ಶಾಮನೂರು ಶಿವಶಂಕರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಶನಿವಾರ 132 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 3283.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications