ದಾವಣಗೆರೆ: ಮಗಳು, ಮೊಮ್ಮಗಳ ರಂಗಿನಾಟಕ್ಕೆ ಅಜ್ಜನ ಕೊಲೆ: ಕಂಬಿ ಎಣಿಸುತ್ತಿರುವ ಆರೋಪಿಗಳು
ದಾವಣಗೆರೆ, ಮಾರ್ಚ್ 19: ಮಗಳು ಹಾಗೂ ಮೊಮ್ಮಗಳ ಅನೈತಿಕ ಸಂಬಂಧ ನೋಡಿದ ಅಜ್ಜನನ್ನು ಕೊಲೆ ಮಾಡಿ ತುಂಗಭದ್ರಾ ಕಾಲುವೆಗೆ ಬಿಸಾಕಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಳಗಟ್ಟೆ ಗ್ರಾಮದಲ್ಲಿ ನಡೆದಿದೆ.
ಮಂಜಪ್ಪ (65) ಕೊಲೆಯಾದ ವೃದ್ದನಾಗಿದ್ದು, ಮಗಳು ಉಷಾ ಹಾಗೂ ಮೊಮ್ಮಗಳು ಸಿಂಧು ಒಂದೇ ಮನೆಯಲ್ಲಿ ವಾಸವಾಗಿದ್ದರು. ಮನೆಯ ಯಜಮಾನನಾದ 68 ವರ್ಷದ ತಂದೆ ಮಂಜಪ್ಪ ತನ್ನ ಕೆಲಸವನ್ನು ತಾನು ಮಾಡಿಕೊಂಡು ಆರಾಮವಾಗಿದ್ದನು. ಆದರೆ ಮಗಳು ಉಷಾ ಹಾಗು ಉಷಾಳ ಮಗಳು ಸಿಂಧುಳ ಕೆಟ್ಟ ಚಟಕ್ಕೆ ವೃದ್ಧ ಮಂಜಪ್ಪ ಬಲಿಯಾಗಿದ್ದಾನೆ.
ಹೊನ್ನಾಳಿ ತಾಲೂಕಿನ ಕುಳಗಟ್ಟೆ ಗ್ರಾಮದ ಶ್ರೀನಿವಾಸ ಎಂಬ ವ್ಯಕ್ತಿಯ ಜೊತೆ ಸೇರಿಕೊಂಡು ಮಂಜಪ್ಪನನ್ನು ಅಮಾನುಷವಾಗಿ ಕೊಲೆ ಮಾಡಿ ಅಡಿಕೆ ತೋಟದ ಬಳಿ ಇರುವ ತುಂಗಭದ್ರಾ ನಾಲೆಯಲ್ಲಿ ಬಿಸಾಕಿದ್ದಾರೆ.

ಅಲ್ಲದೆ, ಉಷಾ ಹಾಗೂ ಸಿಂಧು ಅನೈತಿಕ ಸಂಬಂಧಕ್ಕೆ ಕಟ್ಟು ಬಿದ್ದಿದ್ದರು. ಮದುವೆಯಾಗಿ ಒಂದು ಮಗುವಿರುವ ಶ್ರೀನಿವಾಸನ ಜೊತೆ ಉಷಾ ಹಾಗು ಸಿಂಧು ಇಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ಅನೈತಿಕ ಸಂಬಂಧದ ರುಚಿ ಹತ್ತಿದ್ದ ತಾಯಿ, ಮಗಳು ಶ್ರೀನಿವಾಸ್ ಜೊತೆ ಕಣ್ಣಮುಚ್ಚಾಲೆ ಆಟವಾಡುತ್ತಿದ್ದರು.

ಇದೆಲ್ಲವನ್ನು ಕಣ್ಣಾರೆ ನೋಡಿದ ವೃದ್ಧ ಮಂಜಪ್ಪ, ತಾಯಿ-ಮಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವೃದ್ಧ ಮಂಜಪ್ಪನ ಇಲ್ಲಸಲ್ಲದ ಮಾತುಗಳಿಂದ ಕ್ರೋಧಗೊಂಡಿದ್ದರು. ಈ ಅಜ್ಜನ ಕಾಟ ಸಹಿಸಿಕೊಳ್ಳುವುದಕ್ಕಿಂತ ಈತನ ಯಮಪುರಿಗೆ ಅಟ್ಟುವುದೇ ಲೇಸೆಂದು ತೋಟಕ್ಕೆ ಕರೆದುಕೊಂಡು ಹೋಗಿ ಮದ್ಯ ಕುಡಿಸಿದ್ದಾರೆ. ಶ್ರೀನಿವಾಸನು ಅಜ್ಜನ ತಲೆಗೆ ಹೊಡೆದು ಕಾಲುವೆ ನೀರಿಗೆ ಹಾಕಿ ಬಂದಿದ್ದ ಎನ್ನಲಾಗಿದೆ.

ಅನೈತಿಕ ಸಂಬಂಧಕ್ಕೆ ಕಟ್ಟುಬಿದ್ದಿದ್ದ ಉಷಾ ಹಾಗು ಸಿಂಧು ಇಬ್ಬರೂ ಮಾಸ್ಟರ್ ಪ್ಲಾನ್ ಮಾಡಿ ಶ್ರೀನಿವಾಸನಿಗೆ ಸುಪಾರಿ ಕೊಟ್ಟಿದ್ದರು. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಹೊನ್ನಾಳಿ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಬೇಧಿಸಿದ್ದಾರೆ. ಮೂವರನ್ನು ವಶಕ್ಕೆ ಪಡೆದ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಗ್ರಾಮದಲ್ಲಿ ಇವರ ಕೃತ್ಯ ನೋಡಿ ಇವರಿಗೆ ಸರಿಯಾದ ಶಿಕ್ಷೆ ಆಗಬೇಕೆಂದು ಹಿಡಿಶಾಪ ಹಾಕಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications