Davanagere Benne Dose: ಡಿಸೆಂಬರ್ 23ರಿಂದ ಮೂರು ದಿನಗಳ ಕಾಲ ಬೆಣ್ಣೆದೋಸೆ ಹಬ್ಬ- ಸ್ಥಳ & ವಿಶೇಷತೆ ತಿಳಿಯಿರಿ
ದಾವಣಗೆರೆ, ಡಿಸೆಂಬರ್, 13: ದಾವಣಗೆರೆ ಅಂದತಕ್ಷಣ ಮೊದಲು ನೆನೆಪಿಗೆ ಬರುವುದೇ ಬೆಣ್ಣೆದೋಸೆ. ಇಲ್ಲಿನ ಬೆಣ್ಣೆದೋಸೆ ಬರೀ ಜಿಲ್ಲೆ, ರಾಜ್ಯ ಅಲ್ಲದೇ ದೇಶದಲ್ಲೇ ಪ್ರಸಿದ್ಧಿ ಪಡೆಯುವ ಮೂಲಕ ಇತಿಹಾಸದ ಪುಟಗಳಲ್ಲಿಯೂ ಅಚ್ಚೊತ್ತಿದೆ. ಇದೀಗ ಇದಕ್ಕೊಂದು ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ಡಿಸೆಂಬರ್ 23, 24, 25ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೆ ಉತ್ಸವ ಆಯೋಜನೆಗೆ ಸಂಬಂಧಿಸಿದಂತೆ ಸಿದ್ಧತೆಯ ಕುರಿತು ಏರ್ಪಡಿಸಲಾದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಹೋಟೆಲ್ ಮಾಲೀಕರೊಂದಿಗೆ ಚರ್ಚಿಸಲಾಗಿದ್ದು, ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ. ದಾವಣಗೆರೆ ನಗರದ ಎಂಬಿಎ ಮೈದಾನ ಮತ್ತು ಗ್ಲಾಸ್ಹೌಸ್ ಮುಂಭಾಗ ದೋಸೆ ಹಬ್ಬವನ್ನು ಆಯೋಜಿಸಲಾಗಿದ್ದು, ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ ಎಂದರು.

ಬೆಣ್ಣೆದೋಸೆ ಹಬ್ಬದಲ್ಲಿ ಸುಮಾರು 5 ಲಕ್ಷ ಜನರು ಭಾಗಿಯಾಗಬೇಕೆಂಬ ಗುರಿ ಹೊಂದಲಾಗಿದೆ. ಇದಕ್ಕಾಗಿ ಎರಡು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ದೋಸೆ ಹೋಟೆಲ್ ಮಾಲಿಕರೊಂದಿಗೆ ಸಭೆ ನಡೆಸಲಾಗಿದ್ದು 10ಕ್ಕಿಂತ ಹೆಚ್ಚು ಹೋಟೆಲ್ ಮಾಲಿಕರು ಭಾಗವಹಿಸುವರು. ದೋಸೆ ಹಬ್ಬವನ್ನು ಏರ್ಪಡಿಸುವ ಮೂಲಕ ದಾವಣಗೆರೆ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟವನ್ನು ಕಾಪಾಡಿಕೊಂಡು ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕಲ್ಪಿಸುವುದು ಈ ಹಬ್ಬದ ಉದ್ದೇಶವಾಗಿದೆ ಎಂದರು.
ದೋಸೆ ಹೋಟೆಲ್ಗಳಿಗೆ ಮಾನದಂಡದನ್ವಯ ಮುಂದಿನ ದಿನಗಳಲ್ಲಿ ಅಧಿಕೃತ ಟ್ಯಾಗ್ ನೀಡಲಿದ್ದು, ಇದಕ್ಕಾಗಿ ಆಹಾರ ಸುರಕ್ಷತಾ ಕಾಯಿದೆ ನಿಯಮ ಪಾಲನೆ, ಗುಣಮಟ್ಟ, ಕಲಬೆರಕೆ ರಹಿತ ಆಹಾರದ ಮಾನದಂಡಗಳನ್ನು ಅಳವಡಿಸಿಕೊಳ್ಳುವವರಿಗೆ ಈ ಟ್ಯಾಗ್ ನೀಡಲಾಗುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಣ್ಣೆದೋಸೆ ಹೋಟೆಲ್ಗಳಿಗೆ ಪ್ರಮಾಣ ಪತ್ರ
ಬೆಣ್ಣೆದೋಸೆ ಹೋಟೆಲ್ಗಳಿಗೆ ಗುಣ್ಣಮಟ್ಟದ ಖಾತರಿಯನ್ನು ಒದಗಿಸಲು ಆಹಾರ ಸುರಕ್ಷತಾ ಕಾಯಿದೆಯನ್ವಯ ಪರಿಶೀಲನೆ ನಡೆಸಿ ದೋಸೆಗೆ ಬಳಸುವ ಧಾನ್ಯಗಳು, ಬೆಣ್ಣೆ, ಎಣ್ಣೆ ಮತ್ತು ಇತರೆ ವಸ್ತುಗಳು, ಅಲ್ಲಿನ ಆರೋಗ್ಯವಂತ ಸಿಬ್ಬಂದಿಯ ತಪಾಸಣೆ ಸೇರಿದಂತೆ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ಮಾನದಂಡಗಳನ್ನು ಪರಿಶೀಲಿಸಿ ಜಿಲ್ಲಾಡಳಿತದಿಂದ ಬ್ರಾಂಡಿಂಗ್ ಪ್ರಮಾಣ ಪತ್ರವನ್ನು ನೀಡುವ ಮೂಲಕ ಪ್ರವಾಸೋದ್ಯಮಕ್ಕೆ ಈ ಹೋಟೆಲ್ಗಳನ್ನು ಜೋಡಣೆ ಮಾಡಲಾಗುತ್ತದೆ.
ಪ್ರಮಾಣ ಪತ್ರ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಪಾಲಿಕೆ ಆಯುಕ್ತರು, ಆಹಾರ ಸುರಕ್ಷತಾ ಕಾಯಿದೆ ಅಂಕಿತ ಅಧಿಕಾರಿಗಳು, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ಒಳಗೊಂಡ ಸಮಿತಿ ರಚಿಸಿ ಅಧ್ಯಯನ ವರದಿ ನೀಡಲು ಇತ್ತೀಚೆಗಷ್ಟೇ ತಿಳಿಸಲಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications