Davanagere benne dose festival: ಈ ಮೂರು ದಿನ ಮಾತ್ರ ದಾವಣಗೆರೆ ಬೆಣ್ಣೆದೋಸೆಯನ್ನು ಅತಿ ಕಡಿಮೆ ದರದಲ್ಲಿ ತಿನ್ನಬಹುದು
ದಾವಣಗೆರೆ, ಡಿಸೆಂಬರ್, 17: ಅಂತಾರಾಷ್ಟ್ರೀಯ ಮಟ್ಟದಲ್ಲಿ ದಾವಣಗೆರೆ ಬೆಣ್ಣೆದೋಸೆಯನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಡಿಸೆಂಬರ್ 23, 24 ಮತ್ತು 25ರಂದು ದೋಸೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬೆಣ್ಣೆದೋಸೆಯನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಹೋಟೆಲ್ ಮಾಲೀಕರಿಗೆ ಸೂಚಿಸಿದರು. ಹಾಗಾದರೆ ಒಂದು ದೋಸೆಗೆ ಎಷ್ಟು ದರವನ್ನು ನಿಗದಿ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೋತ್ಸವದ ಕುರಿತಂತೆ ಬೆಣ್ಣೆ ದೋಸೆ ಹೋಟೆಲ್ ಮಾಲೀಕರೊಂದಿಗೆ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು. ದಾವಣಗೆರೆ ಬೆಣ್ಣೆ ದೋಸೆಗೆ ಬ್ರಾಂಡಿಂಗ್ ನೀಡುವ ಉದ್ದೇಶದಿಂದ ಡಿಸೆಂಬರ್ 23, 24 ಮತ್ತು 25ರಂದು ನಗರದ ಬಾಪೂಜಿ ಎಂಬಿಎ ಮೈದಾನ ಮತ್ತು ಗ್ಲಾಸ್ಹೌಸ್ ಮುಂಭಾಗದಲ್ಲಿ ದೋಸೋತ್ಸವವನ್ನು ಆಯೋಜಿಸಲಾಗಿದೆ.

ಬೆಳಗ್ಗೆ 8ರಿಂದ ದೋಸೋತ್ಸವ ಪ್ರಾರಂಭ ಆಗಲಿದ್ದು, ಒಂದು ಬೆಣ್ಣೆ ದೋಸೆಗೆ 60 ರೂಪಾಯಿ ಹಾಗೂ ಒಂದು ಪ್ಲೇಟ್ ಖಾಲಿ ದೋಸೆಗೆ 60 ರೂಪಾಯಿನಂತೆ ನಿಗದಿಪಡಿಸಲಾಗಿದೆ. ದೋಸೆ ಅಂಗಡಿ ಮಾಲೀಕರು ಕಾರ್ಯಕ್ರಮದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೇ ಸುಲಭ ವಿಧಾನ ಅನುಸರಿಸಬೇಕು. ಟೋಕನ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಡಿಸೆಂಬರ್ 23, 24ರಂದು ವೀರಶೈವ ಅಧೀವೇಶನ ಇರುವುದರಿಂದ ಜನಸಂದಣಿ ಹೆಚ್ಚಾಗಿರುವುದರಿಂದ ಗ್ರಾಹಕರಿಗೆ ಅರೆಬರೆ ಬೇಯಿಸಿದ ದೋಸೆಗಳನ್ನು ನೀಡದೇ ಉತ್ತಮ ಗುಣಮಟ್ಟದ ಬೆಣ್ಣೆ ದೋಸೆಗಳನ್ನು ನೀಡಬೇಕು. ದೋಸೆ ಶಾಪ್ಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಕಸದ ಡಬ್ಬಿಗಳ ವ್ಯವಸ್ಥೆ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಹೋಟೆಲ್ ಮಾಲೀಕರು ತ್ಯಾಜ್ಯ ಪದಾರ್ಥಗಳನ್ನು ಆಗಿಂದಾಗ್ಗೆ ವಿಲೇವಾರಿ ಮಾಡಬೇಕು. ದೋಸೆ ತಯಾರಿಕೆಯಲ್ಲಿ ರಾಸಾಯನಿಕಗಳನ್ನು ಬಳಸಬಾರದು. ಸಂಬಂಧಿಸಿದ ಅಧಿಕಾರಿಗಳು ದೋಸೆಯ ಗುಣಮಟ್ಟ, ದೋಸೆಯ ರುಚಿ ತಪಸಾಣೆ ಸ್ಟಾಲ್ಗಳ ವ್ಯವಸ್ಥೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ದರಾಮ ಮರಿಹಾಳ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ.ಎಂ.ಬಿ. ಅಶ್ವಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್ ಷಣ್ಮುಖಪ್ಪ, ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಹೋಟೆಲ್ ಮಾಲೀಕರು ಉಪಸ್ಥಿತರಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications