ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ ಫೈಟ್; ಕಾಂಗ್ರೆಸ್ ಹಾದಿ ಸುಗಮ
ದಾವಣಗೆರೆ, ನವೆಂಬರ್ 14; ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯ ಫೈಟ್ ಇವತ್ತಿಗೆ ತೆರೆಕಂಡಿದೆ. 208 ಅಭ್ಯರ್ಥಿಗಳ ಪೈಕಿ 45 ಅಭ್ಯರ್ಥಿಗಳು ಜಯಶಾಲಿಗಳಾಗಿದ್ದು, ಪಾಲಿಕೆ ಗದ್ದುಗೆ ಹಿಡಿಯಲು ಸೆಣಸಾಡುತ್ತಿದ್ದಾರೆ.
ಪಾಲಿಕೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿತ್ತು. ಕೊನೆಗೆ ಕಾಂಗ್ರೆಸ್ 22, ಬಿಜೆಪಿ 17, ಜೆಡಿಎಸ್ 1 ಹಾಗೂ 5 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಪಾಲಿಕೆ ಅಧಿಕಾರ ಹಿಡಿಯಲು 23 ಸ್ಥಾನಗಳು ಬೇಕಾಗಿದ್ದು, ಕಾಂಗ್ರೆಸ್ ಅಧಿಕಾರವನ್ನು ವಹಿಸಿಕೊಳ್ಳಲು ಎಲ್ಲಾ ಅವಕಾಶಗಳು ಇವೆ.

ಬಂಡಾಯ ಅಭ್ಯರ್ಥಿಗೆ ಗೆಲುವು
ಬಂಡಾಯ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ 45ನೇ ವಾರ್ಡ್ ನ ಅಭ್ಯರ್ಥಿ ಉದಯ್ ಕುಮಾರ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಗೆ ಬೆಂಬಲ ನೀಡಿದರೆ ಅಧಿಕಾರ ಹಿಡಿಯಲು ಕಾಂಗ್ರೆಸ್ ಗೆ ಸುಲಭದ ದಾರಿಯಾಗಲಿದೆ. ಕೇವಲ 17 ಸ್ಥಾನಗಳನ್ನು ಗೆಲ್ಲಿಸಿಕೊಂಡ ಬಿಜೆಪಿ ವಿರೋಧ ಪಕ್ಷವಾಗಲಿದೆ. ಘಟಾನುಘಟಿಗಳೂ ಕಣಕ್ಕಿಳಿದಿದ್ದು, ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪನವರ ಬಂಟ ದಿನೇಶ್ ಕೆ ಶೆಟ್ಟಿ 17ನೇ ವಾರ್ಡ್ ನಿಂದ ಸೋಲು ಅನುಭವಿಸಿದ್ದು, ಬಿಜೆಪಿಯ ಅಜಯ್ ಕುಮಾರ್ ಗೆಲುವಿನ ನಗೆ ಬೀರಿದ್ದಾರೆ.

ಪತಿ ಪತ್ನಿ ಇಬ್ಬರಿಗೂ ಒಲಿದ ಗೆಲುವು
ಬಿಜೆಪಿಯ ಮಾಜಿ ಸಚಿವ ಹಾಗೂ ಶಾಸಕ ಎಸ್ ಎ ರವೀಂದ್ರನಾಥ್ ಪುತ್ರಿ ವೀಣಾ ನಂಜಪ್ಪ 40ನೇ ವಾರ್ಡ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತಿದ್ದ ಪತಿ-ಪತ್ನಿ ಇಬ್ಬರೂ ಗೆಲುವು ಸಾಧಿಸಿದ್ದು, ಪತಿ 28ನೇ ವಾರ್ಡ್ ಜೆ.ಎನ್.ಶ್ರೀನಿವಾಸ್ ಜಯ ಗಳಿಸಿದ್ದರೆ, ಪತ್ನಿ ಶ್ವೇತಾ ಶ್ರೀನಿವಾಸ್ 37ನೇ ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದಾರೆ.

ಅತಿ ಚಿಕ್ಕ ವಯಸ್ಸಿನ ಪಾಲಿಕೆ ಸದಸ್ಯ ರಾಕೇಶ್
ಬಿಜೆಪಿ ಜಿಲ್ಲಾಧ್ಯಕ್ಷರ ಪುತ್ರ 26 ವರ್ಷದ ರಾಕೇಶ್ ಜಾಧವ್ ಜಯಗಳಿಸಿದ್ದು, 10ನೇ ವಾರ್ಡ್ ನಲ್ಲಿ ಮಾಜಿ ಮೇಯರ್ ಅನಿತಾಬಾಯಿ ಪತಿ ಮಾಲತೇಶ್ ರಾವ್ ಜಾಧವ್ ವಿರುದ್ಧ ಗೆಲುವು ಸಾಧಿಸಿ ಅತಿ ಚಿಕ್ಕ ವಯಸ್ಸಿನ ಪಾಲಿಕೆ ಸದಸ್ಯರಾಗಿದ್ದಾರೆ.

ಮೇಯರ್ ಪಟ್ಟಕ್ಕಾಗಿ ಕಸರತ್ತು
ಇನ್ನು ಮೇಯರ್ ಪಟ್ಟಕ್ಕಾಗಿ ಎರಡು ಪಕ್ಷಗಳು ಕಸರತ್ತು ನಡೆಸುತ್ತಿವೆ. ಅಲ್ಲದೆ 17ನೇ ವಾರ್ಡ್ ನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಜಿ. ರವಿ ಎನ್ನುವರು ಕೇವಲ ಎರಡು ಮತಗಳನ್ನು ಪಡೆದ ಅಭ್ಯರ್ಥಿಯಾಗಿದ್ದು, ಪಕ್ಷೇತರ ಅಭ್ಯರ್ಥಿಗಳಲ್ಲಿ ಕೇವಲ ಎರಡು ಮತಗಳು ಪಡೆದು ಇಡೀ ಪಾಲಿಕೆ ಚುನಾವಣೆಯಲ್ಲಿ ಅತಿ ಕಡಿಮೆ ಮತ ಪಡೆದ ಅಭ್ಯರ್ಥಿಯಾಗಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications