ದಾವಣಗೆರೆ; ಜನರ ಸಮಸ್ಯೆಗೆ ಸ್ಪಂದಿಸಲು ವಾಟ್ಸಪ್ ನಂಬರ್
ದಾವಣಗೆರೆ, ಮಾರ್ಚ್ 05: ದಾವಣಗೆರೆ ಮಹಾನಗರ ಪಾಲಿಕೆ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ವಾಟ್ಸಪ್ ಮೊರೆ ಹೋಗಿದೆ. ಜನರು ಸಮಸ್ಯೆಗಳನ್ನು ತಿಳಿಸಲು ವಾಟ್ಸಪ್ ನಂಬರ್ ಬಿಡುಗಡೆ ಮಾಡಲಾಗಿದೆ.
ಶುಕ್ರವಾರ ಮಹಾನಗರ ಪಾಲಿಕೆ ಮೇಯರ್ ಎಸ್. ಟಿ. ವೀರೇಶ್ ವಾಟ್ಸಪ್ ನಂಬರ್ಗೆ ಚಾಲನೆ ನೀಡಿದರು. ಜನರು ತಮ್ಮ ದೂರುಗಳನ್ನು 8277234444 ನಂಬರ್ಗೆ ಕಳಿಸಬಹುದಾಗಿದೆ.
"ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾಗಿದ್ದು, ಸಾಮಾನ್ಯ ಜನರು ಸಹ ಮೊಬೈಲ್ ಬಳಸುತ್ತಿದ್ದಾರೆ. ಸಂವಹನ ಮಾಧ್ಯಮವಾಗಿ ವಾಟ್ಸಪ್ ವ್ಯಾಪಕವಾಗಿ ಬಳಕೆಯಲ್ಲಿದ್ದು, ಗ್ರಾಹಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಹಾಗೂ ಅಹವಾಲು ನೇರವಾಗಿ ಸ್ವೀಕರಿಸಲು ಈ ನಂಬರ್ ಬಿಡುಗಡೆ ಮಾಡಲಾಗಿದೆ" ಎಂದು ಮೇಯರ್ ಹೇಳಿದರು.

ಸಾರ್ವಜನಿಕರು ತಮ್ಮ ದೂರುಗಳನ್ನು 8277234444 ನಂಬರ್ಗೆ ವಾಟ್ಸಪ್ ಮಾಡಿ ನಗರದಲ್ಲಿರುವ ಸಮಸ್ಯೆಗಳನ್ನು ತಿಳಿಸಬಹುದು. ನಗರದಾದ್ಯಂತ ಯಾವುದೇ ಸೌಲಭ್ಯಗಳ ಪೂರೈಕೆ ಸ್ಥಗಿತಗೊಂಡಿದ್ದಲ್ಲಿ ದೂರು ನೀಡಬಹುದು, ಫೋಟೋಗಳನ್ನು ಕಳಿಸಬಹುದು. ದೂರುಗಳ ನಿರ್ವಹಣೆಗಾಗಿ ಪಾಲಿಕೆ ಕಚೇರಿಯಲ್ಲಿ ಕಂಟ್ರೋಲ್ ರೂಂ ಇದೆ, ತಕ್ಷಣ ಅಧಿಕಾರಿಗಳು ಸ್ಪಂದಿಸಲಿದ್ದಾರೆ.
ಮಹಾನಗರ ಪಾಲಿಕೆ ಕೆಲವು ವಾರ್ಡ್ಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಿತ್ತು. ಅದು ಯಶಸ್ವಿಯಾದ ಹಿನ್ನಲೆಯಲ್ಲಿ ಯೋಜನೆಯನ್ನು ನಗರದಾದ್ಯಂತ ವಿಸ್ತರಣೆ ಮಾಡಲಾಗಿದೆ.
ಹೆಮ್ಮೆಯ ವಿಚಾರ; ಮಾಧ್ಯಮಗಳ ಜೊತೆ ಮಾತನಾಡಿದ ಮೇಯರ್, "ದಾವಣಗೆರೆ ಜಿಲ್ಲೆಯು ವಾಸಯೋಗ್ಯ ನಗರವೆಂದು ದೇಶದಲ್ಲಿ 9ನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ಆದರೆ ಉಳಿದ ವಿಚಾರಗಳಲ್ಲಿ ಹಿಂದೆ ಉಳಿದಿದೆ. ದಾವಣಗೆರೆ ನಗರವನ್ನು ಸ್ವಚ್ಛವಾಗಿಡಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ" ಎಂದರು.
ಬಜೆಟ್ ಮಂಡನೆ: "ಮಾರ್ಚ್ ತಿಂಗಳ ಅಂತ್ಯದಲ್ಲಿ ಮಹಾನಗರ ಪಾಲಿಕೆ ಬಜೆಟ್ ಮಂಡನೆ ಮಾಡಲಿದ್ದು, ಅಧಿಕಾರಿಗಳು ಸೇರಿದಂತೆ ನಗರದ ಸಮಸ್ತ ಜನರು ನಗರಾಭಿವೃದ್ಧಿಗೆ ಸೂಕ್ತ ಸಲಹೆ, ಸೂಚನೆಗಳನ್ನು ವಾಟ್ಸಪ್ ನಂಬರ್ಗೆ ತಲುಪಿಸಬಹುದು" ಎಂದು ಮೇಯರ್ ಹೇಳಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications