ಅಮೇರಿಕಾದಲ್ಲಿಯೇ ದಾವಣಗೆರೆ ಟೆಕ್ಕಿ ದಂಪತಿ ಅಂತ್ಯಕ್ರಿಯೆ: ಡೆತ್ ನೋಟ್ ಸೀಕ್ರೆಟ್ ಇನ್ನೂ ಸಸ್ಪೆನ್ಸ್..!
ದಾವಣಗೆರೆ, ಆಗಸ್ಟ್ 27: ಅಮೆರಿಕಾದ ಮ್ಯಾಕ್ ನಾಬ್ ಫ್ಯೂನರಲ್ ಹೋಮ್ 301 ಫ್ರೆಡೆರಿಕ್ ರಸ್ತೆ, ಕ್ಯಾಟೊನ್ಸ್ವಿಲ್ಲೆ, ಎಮ್ಡಿ 21228ನಲ್ಲಿ ಆತ್ಮಹತ್ಯೆಗೆ ಶರಣಾದ ದಾವಣಗೆರೆ ಜಿಲ್ಲೆ ಜಗಳೂರು ಮೂಲದ ಮೂವರ ಅಂತ್ಯಕ್ರಿಯೆಯು ಮಧ್ಯರಾತ್ರಿ 12 ಗಂಟೆಯ ಹೊತ್ತಿಗೆ ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಶನಿವಾರ ರಾತ್ರಿ 11.30ಕ್ಕೆ ಆರಂಭವಾದ ಅಂತ್ಯಕ್ರಿಯೆ ಅಂತಿಮ ವಿಧಿವಿಧಾನವು 12 ಗಂಟೆಯ ಸುಮಾರಿಗೆ ಭಾರತೀಯ ಕಾಲಮಾನದ ಪ್ರಕಾರ ನೆರವೇರಿತು. ಪೂಜೆ ಪುನಸ್ಕಾರ ನೆರವೇರಿಸಿ ಸುಮಾರು 80 ಜನರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳು ನಡೆದವು. ಮೃತದೇಹಗಳಿಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಎಂಜಿನಿಯರ್ ಯೋಗೇಶ್ ಹೊನ್ನಾಳ, ಪ್ರತಿಭಾ ಹೊನ್ನಾಳ, ಯಶ್ ಹೊನ್ನಾಳ ಅವರ ಮೃತದೇಹಗಳನ್ನು ನೋಡುತ್ತಲೇ ಯೋಗೇಶ್ ತಾಯಿ ಶೋಭಾ, ಸಹೋದರ ಪುನೀತ್ ಹಾಗೂ ಪ್ರತಿಭಾ ಹೊನ್ನಾಳರ, ತಾಯಿ ಪ್ರೇಮಾ ಹಾಗೂ ಸಹೋದರ ಗಣೇಶ್ ಕಣ್ಣೀರು ಹಾಕಿದರು.
ಮುದ್ದಾದ ಕುಟುಂಬವು ಈ ಲೋಕ ಬಿಟ್ಟು ತಣ್ಣಗೆ ಮಲಗಿರುವುದನ್ನು ನೋಡಿ ಬಿಕ್ಕಿ ಬಿಕ್ಕಿ ಅತ್ತರು. ಶೋಭಾ ಹೊನ್ನಾಳ ಹಾಗೂ ಪ್ರೇಮಾ ಅವರಂತೂ ಗೋಳಾಡಿದರು.
ಡೆತ್ನೋಟ್ ರಹಸ್ಯವೇನು..?
ಯೋಗೇಶ್ ಹೊನ್ನಾಳ ತನ್ನ ಪತ್ನಿ ಪ್ರತಿಭಾ ಹೊನ್ನಾಳ ಹಾಗೂ ಯಶ್ ಹೊನ್ನಾಳನಿಗೆ ಶೂಟ್ ಮಾಡಿ ಆ ಬಳಿಕ ತಾನೂ ಶೂಟ್ ಮಾಡಿಕೊಂಡು ಸಾವಿಗೆ ಶರಣಾಗಿರುವುದು ಬಹುತೇಕ ಖಚಿತವಾಗಿದೆ. ಯೋಗೇಶ್ ಹೊನ್ನಾಳ ತಾಯಿ ಶೋಭಾ ಹಾಗೂ ಪ್ರತಿಭಾ ಹೊನ್ನಾಳ ತಾಯಿ ಪ್ರೇಮಾ ಅವರಿಗೆ ಡೆತ್ ನೋಟ್ನಲ್ಲಿ ಏನಿದೆ ಎಂಬ ಬಗ್ಗೆ ಅಮೆರಿಕಾದ ಮೇರಿ ಲ್ಯಾಂಡ್ ರಾಜ್ಯದ ಬಾಲ್ತಿಮೇರ್ ಕೌಂಟಿ ಪೊಲೀಸರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಕಳೆದ ಆಗಸ್ಟ್ 15ರಂದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹೊನ್ನಾಳ ಗ್ರಾಮದ ಯೋಗೇಶ್ ಅವರು ಪತ್ನಿ ಪ್ರತಿಭಾ ಹೊನ್ನಾಳ ಹಾಗೂ ಪುತ್ರ ಯಶ್ ಹೊನ್ನಾಳನಿಗೆ ಶೂಟ್ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದು, ಮೂರು ದಿನಗಳ ಬಳಿಕ ಬೆಳಕಿಗೆ ಬಂದಿತ್ತು.
ಯೋಗೇಶ್ ಹೊನ್ನಾಳ ತಾಯಿ ಶೋಭಾ, ಸಹೋದರ ಹಾಗೂ ಪ್ರತಿಭಾ ಯೋಗೇಶ್ ಹೊನ್ನಾಳ ತಾಯಿ ಹಾಗೂ ಸಹೋದರ ಸದ್ಯ ಅಮೆರಿಕಾದಲ್ಲಿದ್ದು, ಸೆಪ್ಟಂಬರ್ 2ಕ್ಕೆ ದಾವಣಗೆರೆಗೆ ಬರುವ ಸಾಧ್ಯತೆ ಇದೆ. ಆ ಬಳಿಕವೇ ಡೆತ್ ನೋಟ್ ರಹಸ್ಯ ಬಯಲಾಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅಮೆರಿಕಾದಲ್ಲಿನ ಕಾನೂನಿನ ಪ್ರಕಾರವೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೃತದೇಹಗಳನ್ನು ಅಮೆರಿಕಾದಿಂದ ದಾವಣಗೆರೆಗೆ ತೆಗೆದುಕೊಂಡು ಬರುವ ಸ್ಥಿತಿಯಲ್ಲಿ ಇಲ್ಲದ ಕಾರಣ ಅಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲು ನಿರ್ಧರಿಸಲಾಗಿತ್ತು. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಮೃತದೇಹಗಳಿಗೆ ಅಂತಿಮ ಪೂಜೆ ನೆರವೇರಿಸಿ, ವಿಧಿವಿಧಾನ ನೆರವೇರಿಸಲಾಯಿತು.
ಎರಡೂ ಕುಟುಂಬಗಳು ಅಮೆರಿಕಾ ಕಾಲಮಾನದ ಪ್ರಕಾರ ಸಂಜೆ 2ರಿಂದ 4ಗಂಟೆಯವರೆಗೆ ಸುಮಾರಿಗೆ ಐಎಡಿಗೆ ಆಗಮಿಸಿದರು. ಸೋಮವಾರಕ್ಕಿಂತ ಶನಿವಾರದಂದು ಅಂತ್ಯಕ್ರಿಯೆಯ ಸೇವೆ ನಿರ್ವಹಿಸಲು ಅಮೆರಿಕಾ ಪೊಲೀಸರು ಎಲ್ಲಾ ರೀತಿಯ ಅನುವು
ಮಾಡಿಕೊಟ್ಟಿದ್ದರು. ಸ್ನೇಹಿತರು ಹಾಗೂ ನೆರೆಹೊರೆಯವರು ಹಾಜರಾಗಿದ್ದರು. ಅಮೆರಿಕಾದಲ್ಲಿ ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣ ಈ ನಿರ್ಧಾರಕ್ಕೆ ಬರಲಾಯಿತು ಎಂದು ಮೂಲಗಳು ದೃಢಪಡಿಸಿವೆ.
ಇನ್ನು ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರು ಶರಾವತಿ ಕನ್ನಡಿಗರ ಸಂಘದ ಕೆಲ ಸದಸ್ಯರು ಈ ವೇಳೆ ಹಾಜರಾಗಿದ್ದರು. ಈ ಸಂಘದ ಸದಸ್ಯರು ಯೋಗೇಶ್ ಹೊನ್ನಾಳ ಹಾಗೂ ಪ್ರತಿಭಾ ಹೊನ್ನಾಳ ಕುಟುಂಬದವರಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications