ದಾವಣಗೆರೆ: ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿನಯ್ ಕುಮಾರ್, ರಘು ದೀಕ್ಷಿತ್ ಬೆಂಬಲ
ದಾವಣಗೆರೆ, ಜುಲೈ 15: ಶಿಷ್ಯ ವೇತನಕ್ಕಾಗಿ 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ದಾವಣಗೆರೆಯ ಜೆಜೆಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕರ್ನಾಟಕ ರಣಜಿ ತಂಡದ ಮಾಜಿ ನಾಯಕ ವಿನಯ್ ಕುಮಾರ್ ಹಾಗೂ ಗಾಯಕ ರಘು ದೀಕ್ಷಿತ್ ಬೆಂಬಲ ಸೂಚಿಸಿದ್ದಾರೆ.
Recommended Video
'ಜೆ.ಜೆ.ಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ 16 ತಿಂಗಳಿನಿಂದ ಶಿಷ್ಯ ವೇತನ ದೊರೆಕಿಲ್ಲ ಎಂಬ ಮಾಹಿತಿಯನ್ನು ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ. ನಾನು ಒಬ್ಬ ಭಾರತೀಯ ಪ್ರಜೆಯಾಗಿ ಸಂಬಂಧಪಟ್ಟವರಿಗೆ ಮನವಿ ಮಾಡಿಕೊಳ್ಳುತ್ತೇನೆ. ವೈದ್ಯರು, ಪೊಲೀಸರು ಹಾಗೂ ನರ್ಸ್ಗಳೂ ಸೇರಿ ಅನೇಕರು ಕೋವಿಡ್ ಸಂದರ್ಭಗಳಲ್ಲಿ ಮುಂಚೂಣಿಯಲ್ಲಿ ನಿಂತು ಸೈನಿಕರಂತೆ ಹೋರಾಟ ಮಾಡುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮೆಲ್ಲರ ಜವಾಬ್ದಾರಿ, ಆಡಳಿತ ಮಂಡಳಿ ಅವರ ಸಮಸ್ಯೆಯನ್ನು ಬಗೆಹರಿಸಬೇಕು' ಎಂದು ಇನ್ಸ್ಟಾಗ್ರಾಂನಲ್ಲಿ ಆರ್.ವಿನಯ್ ಕುಮಾರ್ ಮನವಿ ಮಾಡಿದ್ದಾರೆ.

ಶಿಷ್ಯ ವೇತನ ವಂಚಿತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿರುವ ಗಾಯಕ ರಘು ದೀಕ್ಷಿತ್, 'ಸರ್ಕಾರ ಮತ್ತು ಆಡಳಿತ ಮಂಡಳಿಯ ನಡುವಿನ ಟೆನ್ನಿಸ್ ಪಂದ್ಯದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಬೀದಿಗೆ ಬಿದ್ದಿದ್ದಾರೆ. 15 ದಿನಗಳಿಂದ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳು, ಶಿಷ್ಯವೇತನ ನೀಡದೇ ಇದ್ದರೂ ಮುಂಚೂಣಿಯಲ್ಲಿ ಇದ್ದುಕೊಂಡು ಕೆಲಸ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಹೃದಯವಂತಿಕೆ ಇರಲಿ' ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ.

'ಎವೈಎಫ್ಐ ಸಂಘಟನೆ ಸೋಮವಾರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದೆ. ಒಪಿಡಿ ಹಾಗೂ ತುರ್ತುಸೇವೆ ಬಹಿಷ್ಕರಿಸಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಅವು ಸ್ಥಗಿತಗೊಂಡಿಲ್ಲ. ಆಡಳಿತ ಮಂಡಳಿಯಿಂದ ಆಯ್ಕೆಯಾದ ವಿದ್ಯಾರ್ಥಿಗಳು ಅವುಗಳನ್ನು ನಡೆಸಿದ್ದಾರೆ. ಪ್ರತಿಭಟನೆ ನಡೆಸಿದ್ದರೂ ಕೋವಿಡ್ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇವೆ' ಎಂದು ಡಾ. ಹರೀಶ್ ತಿಳಿಸಿದರು.
-
ಕ್ರೀಡಾಂಗಣದಲ್ಲೇ ಇಶಾನ್ ಕಿಶಾನ್ಗೆ ಮುತ್ತಿಟ್ಟ ಅದಿತಿ ಹುಂಡಿಯಾ ಯಾರು? ಅಭಿಷೇಕ್ ಶರ್ಮಾ ಸೋದರಿ ನಂಟು ರಿವೀಲ್ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
Ish Sodhi: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಭಾರತ ಮೂಲದ ಕಿವೀಸ್ ಆಟಗಾರ ಇಶ್ ಸೋಧಿ -
ವಿರಾಟ್ ಕೊಹ್ಲಿಯ ದಶಕದ ಹಳೆಯ ದಾಖಲೆ ಅಳಿಸಿದ ಸಂಜು ಸ್ಯಾಮ್ಸನ್ -
ಸೂರ್ಯಕುಮಾರ್ ಯಾದವ್ ಹಳೆಯ ಫೋಟೋ ವೈರಲ್: ಪೆಟ್ರೋಲ್ ಬಂಕ್ನಲ್ಲಿ ನಿಂತಿದ್ದ ಆ ಹುಡುಗ ಇಂದು ವಿಶ್ವಕಪ್ ವಿಜೇತ ನಾಯಕ! -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications