ದಾವಣಗೆರೆಯಲ್ಲಿ ಮುನ್ನೆಚ್ಚರಿಕೆಯಾಗಿ ಲಾಡ್ಜ್ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಸಭೆ
ದಾವಣಗೆರೆ, ಮಾರ್ಚ್ 31: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೇನ್ ನಲ್ಲಿರುವವರಿಗಾಗಿ ಅವಶ್ಯಕತೆಯಿದ್ದರೆ ಬಳಸಿಕೊಳ್ಳಲು ಬೆಂಗಳೂರಲ್ಲಿ 20 ಸಾವಿರ ಲಾಡ್ಜ್ ರೂಮ್ ತಯಾರು ಮಾಡಿಕೊಳ್ಳಲಾಗಿದೆ. ಅದರಂತೆ ನಮ್ಮ ಜಿಲ್ಲೆಯಲ್ಲಿ ಅಂತಹ ಸಂದರ್ಭ ಎದುರಾದರೆ ಜಿಲ್ಲೆಯ ಲಾಡ್ಜ್ ಗಳಲ್ಲಿನ ರೂಮ್ ಬಳಸಿಕೊಳ್ಳಲು ತಯಾರಿ ಮಾಡಿಕೊಳ್ಳಬೇಕೆಂಬ ಆದೇಶವಿದೆ" ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಇಂದು ಜಿಲ್ಲಾಡಳಿತ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ನಗರದ ಲಾಡ್ಜ್ ಮಾಲೀಕರಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 3 ಕೊರೊನಾ ಪಾಸಿಟಿವ್ ಬಂದಿದೆ. ಮುಂದಿನ ದಿನಗಳಲ್ಲಿ ವೈರಸ್ ಪ್ರಕರಣಗಳು ಹೆಚ್ಚಾದರೆ ನಗರದಲ್ಲಿನ ಲಾಡ್ಜ್ ಗಳನ್ನು ಬಳಸಿಕೊಳ್ಳಲು ಜಿಲ್ಲಾಡಳಿತ ಮುಂದಾಗಬಹುದು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ಸನ್ನದ್ಧರಾಗಬೇಕು ಎಂದು ಲಾಡ್ಜ್ ಮಾಲೀಕರಿಗೆ ಸೂಚಿಸಿದರು. ಈ ಬಗ್ಗೆ ಮಾಲೀಕರಿಗೆ ಯಾವುದೇ ಭಯ ಬೇಡ. ಹೋಂ ಕ್ವಾರಂಟೈನ್ ಲ್ಲಿರುವವರು ರೋಗಿಗಳಲ್ಲ. ನಿಗಾವಣೆಯಲ್ಲಿರುವರಷ್ಟೇ. ಇವರಲ್ಲಿ ಯಾರಿಗಾದರೂ ನೆಗಡಿ, ಕೆಮ್ಮು, ಶೀತ ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ಸೇರಿಸಲಾಗುವುದು ಎಂದು ತಿಳಿಸಿದರು.

ಲಾಡ್ಜ್ಗಳಲ್ಲಿ ಮೂಲ ವ್ಯವಸ್ಥೆ ಕಲ್ಪಿಸಿಕೊಡಲು ಮಾಲೀಕರು ಸಿದ್ಧರಿರಬೇಕು. ಸರ್ಕಾರದಿಂದ ಹಣ ಒದಗಿಸಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ 11 ಕಲ್ಯಾಣ ಮಂಟಪಗಳನ್ನು ಜಿಲ್ಲಾಡಳಿತದ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ. ವಿವಿಧ ತಾಲ್ಲೂಕು ವಲಯದಲ್ಲಿಯೂ ಕಲ್ಯಾಣ ಮಂಟಪವನ್ನು ಸುಪರ್ದಿಗೆ ತೆಗೆದುಕೊಳ್ಳಲು ತಹಶೀಲ್ದಾರ್ ಗೆ ತಿಳಿಸಲಾಗಿದೆ ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications