ದಾವಣಗೆರೆಯಲ್ಲಿ ಮುನ್ನೆಚ್ಚರಿಕೆಯಾಗಿ ಲಾಡ್ಜ್ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಸಭೆ
ದಾವಣಗೆರೆ, ಮಾರ್ಚ್ 31: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೇನ್ ನಲ್ಲಿರುವವರಿಗಾಗಿ ಅವಶ್ಯಕತೆಯಿದ್ದರೆ ಬಳಸಿಕೊಳ್ಳಲು ಬೆಂಗಳೂರಲ್ಲಿ 20 ಸಾವಿರ ಲಾಡ್ಜ್ ರೂಮ್ ತಯಾರು ಮಾಡಿಕೊಳ್ಳಲಾಗಿದೆ. ಅದರಂತೆ ನಮ್ಮ ಜಿಲ್ಲೆಯಲ್ಲಿ ಅಂತಹ ಸಂದರ್ಭ ಎದುರಾದರೆ ಜಿಲ್ಲೆಯ ಲಾಡ್ಜ್ ಗಳಲ್ಲಿನ ರೂಮ್ ಬಳಸಿಕೊಳ್ಳಲು ತಯಾರಿ ಮಾಡಿಕೊಳ್ಳಬೇಕೆಂಬ ಆದೇಶವಿದೆ" ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಇಂದು ಜಿಲ್ಲಾಡಳಿತ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ನಗರದ ಲಾಡ್ಜ್ ಮಾಲೀಕರಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 3 ಕೊರೊನಾ ಪಾಸಿಟಿವ್ ಬಂದಿದೆ. ಮುಂದಿನ ದಿನಗಳಲ್ಲಿ ವೈರಸ್ ಪ್ರಕರಣಗಳು ಹೆಚ್ಚಾದರೆ ನಗರದಲ್ಲಿನ ಲಾಡ್ಜ್ ಗಳನ್ನು ಬಳಸಿಕೊಳ್ಳಲು ಜಿಲ್ಲಾಡಳಿತ ಮುಂದಾಗಬಹುದು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ಸನ್ನದ್ಧರಾಗಬೇಕು ಎಂದು ಲಾಡ್ಜ್ ಮಾಲೀಕರಿಗೆ ಸೂಚಿಸಿದರು. ಈ ಬಗ್ಗೆ ಮಾಲೀಕರಿಗೆ ಯಾವುದೇ ಭಯ ಬೇಡ. ಹೋಂ ಕ್ವಾರಂಟೈನ್ ಲ್ಲಿರುವವರು ರೋಗಿಗಳಲ್ಲ. ನಿಗಾವಣೆಯಲ್ಲಿರುವರಷ್ಟೇ. ಇವರಲ್ಲಿ ಯಾರಿಗಾದರೂ ನೆಗಡಿ, ಕೆಮ್ಮು, ಶೀತ ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ಸೇರಿಸಲಾಗುವುದು ಎಂದು ತಿಳಿಸಿದರು.

ಲಾಡ್ಜ್ಗಳಲ್ಲಿ ಮೂಲ ವ್ಯವಸ್ಥೆ ಕಲ್ಪಿಸಿಕೊಡಲು ಮಾಲೀಕರು ಸಿದ್ಧರಿರಬೇಕು. ಸರ್ಕಾರದಿಂದ ಹಣ ಒದಗಿಸಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ 11 ಕಲ್ಯಾಣ ಮಂಟಪಗಳನ್ನು ಜಿಲ್ಲಾಡಳಿತದ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ. ವಿವಿಧ ತಾಲ್ಲೂಕು ವಲಯದಲ್ಲಿಯೂ ಕಲ್ಯಾಣ ಮಂಟಪವನ್ನು ಸುಪರ್ದಿಗೆ ತೆಗೆದುಕೊಳ್ಳಲು ತಹಶೀಲ್ದಾರ್ ಗೆ ತಿಳಿಸಲಾಗಿದೆ ಎಂದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications