ದಾವಣಗೆರೆ: ಭದ್ರಾ ಕಾಲುವೆಯಲ್ಲಿನ ಅನಧಿಕೃತ ಪಂಪ್ಸೆಟ್ಗಳ ತೆರವಿಗೆ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳೇನು?-ಮಾಹಿತಿ, ವಿವರ
ದಾವಣಗೆರೆ, ಮಾರ್ಚ್, 27: ಪ್ರಸಕ್ತ ವರ್ಷದ ಮುಂಗಾರು ಹಾಗೂ ಹಿಂಗಾರು ವೈಫಲ್ಯದಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಆದ್ದರಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹಾಗಾದರೆ ಕ್ರಮಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇದರಿಂದ ಸರದಿಯನ್ವಯ ನೀರು ಬಿಡಲು ಭದ್ರಾ ಕಾಡಾ ಮಂಡಳಿ ನಿರ್ಧಾರದಂತೆ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ರೈತರಿಗೆ ನೀರು ಕೊಡಲು ಕಾಲುವೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್ಸೆಟ್ಗಳ ತೆರವಿಗಾಗಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಅವರು ಅಧಿಕಾರಿಗಳ ತಂಡ ರಚಿಸಿ ಆದೇಶಿಸಿದ್ದಾರೆ.

ವಿದ್ಯುತ್ ಸಂಪರ್ಕ ಕಲ್ಪಿಸಿದ್ದಲ್ಲಿ ಇದನ್ನು ಕಡಿತಗೊಳಿಸುವುದು ಮತ್ತು ಡೀಸೆಲ್ ಜನರೇಟರ್ ಅಳವಡಿಸಿದ್ದಲ್ಲಿ ಅದನ್ನು ಕಡಿತ ಮಾಡುವುದು ಮತ್ತು ನಾಲೆಯಲ್ಲಿ ನೀರೆತ್ತಲು ಅಳವಡಿಸಿದ ಎಲ್ಲಾ ಪೈಪ್ಗಳನ್ನು ತೆರವು ಮಾಡಲು, ಒಂದು ವೇಳೆ ತೆರವು ಮಾಡದಿದ್ದಲ್ಲಿ ವಶಕ್ಕೆ ಪಡೆಯಲು ಕಂದಾಯ, ಪಾಲಿಕೆ, ಪೊಲೀಸ್, ನೀರಾವರಿ ಇಲಾಖೆ ಹಾಗೂ ಬೆಸ್ಕಾಂ ಇಂಜಿನಿಯರ್ಗಳ ತಂಡವನ್ನು ರಚಿಸಲಾಗಿದೆ.
ದಾವಣಗೆರೆ ತಾಲೂಕು ತಹಶೀಲ್ದಾರರು, ಉಪ ತಹಶೀಲ್ದಾರರು, ಪಾಲಿಕೆ ಸಿಬ್ಬಂದಿ, ವೃತ್ತ ನಿರೀಕ್ಷಕರು, ಮಾಯಕೊಂಡ, ಗ್ರಾಮಾಂತರ, ಹದಡಿ, ಮಾಯಕೊಂಡ, ಕಾರ್ಯಪಾಲಕ ಇಂಜಿನಿಯರ್, ನೀರಾವರಿ ನಿಗಮ, ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಹರಿಹರ ತಾಲೂಕು ತಹಶೀಲ್ದಾರ್, ಉಪ ತಹಶೀಲ್ದಾರ್ ಹಾಗೂ ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಿಗರು, ಹರಿಹರ, ಮಲೆಬೆನ್ನೂರು ಹರಿಹರ ಗ್ರಾಮಾಂತರ ವೃತ್ತ ನಿರೀಕ್ಷಕರು, ಉಪ ನಿರೀಕ್ಷಕರು, ಭದ್ರಾ ನಾಲಾ ವಿಭಾಗದ ಇಂಜಿನಿಯರ್, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಂಗಳನ್ನು ರಚನೆ ಮಾಡಲಾಗಿದೆ.
ಚನ್ನಗಿರಿ ತಾಲೂಕ ತಹಶೀಲ್ದಾರರು, ಉಪ ತಹಶೀಲ್ದಾರರು, ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಿಗರು, ಸಂತೇಬೆನ್ನೂರು, ಚನ್ನಗಿರಿ, ಬಸವಾಪಟ್ಟಣ ಠಾಣಾ ವೃತ್ತ ನಿರೀಕ್ಷಕರು, ಉಪ ನಿರೀಕ್ಷಕರು, ಭದ್ರಾ ನಾಲಾ ವಿಭಾಗದ ಇಂಜಿನಿಯರ್, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳ ತಂಡಗಳನ್ನು ರಚನೆ ಮಾಡಿ ತಕ್ಷಣದಿಂದಲೇ ಕಾರ್ಯಾಚರಣೆ ಮಾಡಲು ಆದೇಶಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications