ವಾಹನ ಸವಾರರೇ ಎಚ್ಚರ: ನಿಮಯ ಉಲ್ಲಂಘಿಸಿದ್ರೆ ಮನೆಗೆ ಬರುತ್ತೆ ನೋಟಿಸ್!
ದಾವಣಗೆರೆ, ಅಕ್ಟೊಬರ್ 16: ಜಿಲ್ಲೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದರೂ ಪೊಲೀಸರು ದಂಡ ಹಾಕಿಲ್ಲ ಎಂದು ವಾಹನ ಸವಾರರು ಖುಷಿ ಪಡಬೇಕಾಗಿಲ್ಲ. ಯಾಕೆಂದರೆ ಇನ್ನು ಮುಂದೆ ನಿಯಮ ಉಲ್ಲಂಘಿಸಿದರೆ ಮನೆಗೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.
ಜಿಲ್ಲಾ ಪೊಲೀಸ್ ಇಲಾಖೆಯು ದಾವಣಗೆರೆ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ ನಗರದಲ್ಲಿ ಸಂಚಾರಿ ವ್ಯವಸ್ಥೆ ಬಲಪಡಿಸಲು ಮುಂದಾಗಿದೆ. ಇದಕ್ಕಾಗಿ ಸಿಟಿ ಸರ್ವೆಲೆನ್ಸ್ ಪದ್ಧತಿ ಅನ್ನು ಜಾರಿಗೊಳಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಯಾರೇ ಸಂಚಾರಿ ನಿಯಮ ಉಲ್ಲಂಘಿಸಿದರೆ ಮನೆಗೆ ದಂಡದ ನೋಟಿಸ್ ಬರುತ್ತದೆ ಎಂದು ಎಚ್ಚರಿಕೆ ನೀಡಿದರು.

"ನಗರದಲ್ಲಿ 109 ಜಂಕ್ಷನ್ಗಳಲ್ಲಿ 211 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಅಪರಾಧ ಪ್ರಕರಣಗಳನ್ಬು ಪತ್ತೆ ಹಚ್ಚಲು ಅನುಕೂಲವಾಗಲಿದೆ. ನಗರದ 20 ಜಂಕ್ಷನ್ಗಳಲ್ಲಿ ಪಬ್ಲಿಕ್ ಅಡ್ರೆಸ್ ಸಿಸ್ಟಮ್ಗಳು ಕಾರ್ಯ ನಿರ್ವಹಿಸಲಿದ್ದು, ಇವುಗಳು ಕಾನೂನು ಉಲ್ಲಂಘನೆಯ ಸ್ಥಳದ ಬಗ್ಗೆ ಮಾಹಿತಿ ನೀಡುತ್ತವೆ. ಅಲ್ಲದೆ ಶಬ್ದಗಳ ಮೂಲಕ ಮಾಹಿತಿ ನೀಡುತ್ತವೆ. ದಾವಣಗೆರೆ ನಗರದ 5 ಕಡೆಗಳಲ್ಲಿ ಸೈನ್ ಬೋರ್ಡ್ಗಳನ್ನು ಅಳವಡಿಸಿದ್ದು, ವೇಗದ ಮಿತಿ, ತುರ್ತು ಕರೆಗಳ ಸಂಖ್ಯೆ, ಸಂಚಾರಿ ನಿಯಮಗಳು ಹಾಗೂ ರಸ್ತೆಯ ತಿರುವುಗಳ ಬಗ್ಗೆ ಮಾಹಿತಿ ನೀಡಲಿವೆ. ದಾವಣಗೆರೆ ನಾಗರಿಕರಿಗೆ ಹಲವು ಮಾಹಿತಿಗಳನ್ನು ಮೊಬೈಲ್ ಸರ್ವೆಲೆನ್ಸ್ ನೀಡಲಿವೆ," ಎಂದು ವಿವರಿಸಿದರು.
ಮಾತು ಮುಂದುವರಿಸಿದ ಸಿ.ಬಿ.ರಿಷ್ಯಂತ್, "ಜಿಲ್ಲೆಯಲ್ಲಿ ಸಂಚಾರಿ ನಿಯಮ ಪಾಲನೆ ಮಾಡುವವರ ಸಂಖ್ಯೆ ಕಡಿಮೆ ಆಗಿದೆ. ಪೊಲೀಸರು ದಂಡ ವಿಧಿಸಿದರೂ ಪುನರಾವರ್ತನೆ ಆಗುತ್ತಿದೆ. ಕಳೆದ 3 ತಿಂಗಳಲ್ಲಿ 29,080 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ಮನೆಗೆ ನೋಟಿಸ್ ಕಳುಹಿಸಲಾಗಿದೆ. ಸಂಚಾರಿ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಜನರು ಸಹ ಸಂಚಾರಿ ನಿಯಮ ಪಾಲನೆಗೆ ಮುಂದಾಗಬೇಕು. ಹೆಚ್ಚುತ್ತಿರುವ ಸಂಚಾರಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮನೆಗೆ ದಂಡ ವಿಧಿಸಿ, ನೋಟಿಸ್ ಕಳುಹಿಸಲಾಗುತ್ತದೆ. ಜನರು ದಂಡ ಕಟ್ಟಿದ ಬಳಿಕ ಎಚ್ಚೆತ್ತುಕೊಳ್ಳುತ್ತಾರೆ," ಎಂದು ಮಾಹಿತಿ ನೀಡಿದರು.
"ನಗರದಲ್ಲಿ ಟ್ರಾಫಿಕ್ ಸಹ ಹೆಚ್ಚಾಗುತ್ತಿದೆ. ನಿಯಂತ್ರಿಸಲು ಸಹ ಹೆಚ್ಚಿನ ಒತ್ತು ನೀಡಲಾಗುವುದು. ಸಿಸಿಟಿವಿ ಅಳವಡಿಕೆ ಮಾಡಿರುವುದರಿಂದ ಬೇಕಾಬಿಟ್ಟಿಯಾಗಿ ವಾಹನ ಓಡಿಸುವವರು ಹಾಗೂ ಸಂಚಾರಿ ನಿಯಮ ಪಾಲನೆ ಮಾಡದವರನ್ನು ಬೇಗ ಗುರುತಿಸಲು ಸಾಧ್ಯವಾಗುತ್ತದೆ," ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಕಂದಾಯ ಅಧಿಕಾರಿ ಲಕ್ಷ್ಮಿ, ಪಿಆರ್ಓ ಸುನಿಲ್ ಉಪಸ್ಥಿತರಿದ್ದರು.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications