ಹೋಮ ಮಾಡಿದ ರೇಣುಕಾಚಾರ್ಯ ಮೇಲೆ ಕೇಸ್ ದಾಖಲಿಸಲು ಮುಂದಾದ ತಹಶೀಲ್ದಾರ್
ದಾವಣಗೆರೆ, ಜೂನ್ 12: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ನಲ್ಲಿ ಶುಕ್ರವಾರ ಶಾಸಕ ಎಂ.ಪಿ ರೇಣುಕಾಚಾರ್ಯ ದಂಪತಿ ಹೋಮ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದ ತಾಲ್ಲೂಕು ಆಡಳಿತದ ವಿರುದ್ಧ ಕೋವಿಡ್ ಸೋಂಕಿತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Recommended Video
ತಹಶೀಲ್ದಾರ ವಿರುದ್ಧ ಘೋಷಣೆ ಕೂಗಿದ ಸೋಂಕಿತರು, ತಹಶೀಲ್ದಾರ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಅವರು ಬರುವವರೆಗೆ ಉಪಹಾರ ಸೇವಿಸುವುದಿಲ್ಲ ಎಂದು ಧರಣಿ ಕುಳಿತರು. ಕೋವಿಡ್ ಕೇರ್ ಸೆಂಟರ್ನಲ್ಲಿ ನಮಗೆಲ್ಲ ಒಳ್ಳೆಯ ತಿಂಡಿ, ಊಟ, ಉತ್ತಮ ವಾತಾವರಣ ಸೇರಿದಂತೆ ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ. ಶಾಸಕ ರೇಣುಕಾಚಾರ್ಯ ಸಹ ಇಲ್ಲೇ ತಂಗಿದ್ದಾರೆ. ಉಸ್ತುವಾರಿಯನ್ನು ಉತ್ತಮವಾಗಿಯೇ ನಿಭಾಯಿಸುತ್ತಿದ್ದಾರೆ. ಇಂಥ ವೇಳೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ನೀಡಿದರು.
ಮಾಜಿ ಶಾಸಕರ ಕುಮ್ಮಕ್ಕಿನಿಂದ ಪ್ರಕರಣ ದಾಖಲಿಸಲು ತಹಶೀಲ್ದಾರ ಮುಂದಾಗಿರುವುದು ಖಂಡನೀಯ. ಎಷ್ಟೋ ಕೋವಿಡ್ ಕೇರ್ ಸೆಂಟರ್ನಲ್ಲಿ ಉತ್ತಮ ಸೌಲಭ್ಯ ಇಲ್ಲ. ಅಲ್ಲಿ ಹೋಗಿ ಸರಿಪಡಿಸುವುದನ್ನು ಬಿಟ್ಟು ಉತ್ತಮ ಕಾರ್ಯ ಮಾಡುತ್ತಿರುವ ಜಾಗಕ್ಕೆ ಬಂದು ಯಾಕೆ ತೊಂದರೆ ಕೊಡುತ್ತೀರಾ ಎಂದು ಸೋಂಕಿತರು ಪ್ರಶ್ನೆ ಮಾಡಿದ್ದಾರೆ.

ಪ್ರಕರಣ ದಾಖಲಿಸುವಂತೆ ಶಾಸಕ ಪಟ್ಟು
ಇನ್ನು ಹೋಮ ಮಾಡಿಸಿದ್ದಕ್ಕೆ ನನ್ನ ಮೇಲೆ ಪ್ರಕರಣ ದಾಖಲಿಸುವಂತೆ ಶಾಸಕ ಎಂ.ಪಿ ರೇಣುಕಾಚಾರ್ಯ ಪಟ್ಟುಹಿಡಿದ ಪ್ರಸಂಗವೂ ನಡೆಯಿತು. "ತಾಲೂಕು ಆಡಳಿತ, ಸಿಪಿಐ ನನ್ನ ಮೇಲೆ ಕೇಸ್ ಹಾಕಲಿ. ಇಂತ ನೂರಾರು ಪ್ರಕರಣ ಎದುರಿಸಿದ್ದೇನೆ. ಎರಡು ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ. ಬರಲಿ ನೋಡೋಣ, ಬಂಧಿಸಲಿ. ಎಲ್ಲಿಗೆ ಹೋಗುತ್ತೆ ನೋಡೋಣ. ಎಸ್ಪಿ ಅವರು ಬೇಕಾದರೆ ಕೇಸ್ ಹಾಕಲಿ. ಇಲ್ಲಿಗೆ ಬಂದು ಸೋಂಕಿತರ ಯೋಗಕ್ಷೇಮ ವಿಚಾರಿಸಿದ್ದೀರಾ. ನನ್ನ ಕೊನೆಯ ಉಸಿರು ಇರುವವರೆಗೆ ಯಾವ ಅಧಿಕಾರಿಗಳು ಏನೂ ಮಾಡಕ್ಕಾಗಲ್ಲ. ನನ್ನ ಮೇಲೆ ಕೇಸ್ ಹಾಕ್ತೀರಾ. ತಾಕತ್ತಿದ್ದರೆ ಎಸ್ಪಿನೇ ಬಂದು ಕೇಸ್ ಹಾಕಲಿ ನೋಡಿಕೊಳ್ಳುತ್ತೇನೆ. ನನ್ನನ್ನು ಹೆದರಿಸ್ತೀರಾ. ಇದಕ್ಕೆ ಜಗ್ಗುವುದಿಲ್ಲ'' ಎಂದು ರೇಣುಕಾಚಾರ್ಯರಿಗೆ ಹೇಳಿದರು.
"ನಾನು ಯಾವ ಪಕ್ಷ ಅಂತಾ ನಾನು ಇಲ್ಲಿಗೆ ಬಂದಿಲ್ಲ. ಹೊನ್ನಾಳಿ- ನ್ಯಾಮತಿ ತಾಲ್ಲೂಕಿನ ಜನರ ರಕ್ಷಣೆಗೆ ಬಂದಿದ್ದೇನೆ. ಮಾಜಿ ಶಾಸಕರು ಕೇಸ್ ಹಾಕಲಿ ಎಂದು ಹೇಳಿದ್ದಾರಂತೆ. ಬಡವರ ಪರವಾಗಿ ಸದಾ ನಾನು ಇರುತ್ತೇನೆ. ನಾನು ಎಲ್ಲಿಯೂ ಹೋಗುವುದಿಲ್ಲ. ಕೋವಿಡ್ ಕೇರ್ ಸೆಂಟರ್ನಲ್ಲೇ ಇರುತ್ತೇನೆ. ಕೆಲವರಿಗೆ ಇಲ್ಲಿ ಮಾಡಿರುವ ಉತ್ತಮ ವ್ಯವಸ್ಥೆ ಮಾಡಿದ್ದನ್ನು ನೋಡಿ ಕೆಲವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ನಾನು ಸತ್ತರೂ ಇಲ್ಲಿಂದ ಹೋಗುವುದಿಲ್ಲ'' ಎಂದು ಆಕ್ರೋಶ ವ್ಯಕ್ತಪಡಿಸಿದರು.

-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications