ಬಿಂದಾಸ್ ಸ್ಟೆಪ್ ಹಾಕಿದ ದಾವಣಗೆರೆ ತಹಶೀಲ್ದಾರ; ಕೋವಿಡ್ ನಿಯಮ ಉಲ್ಲಂಘನೆ!?
ದಾವಣಗೆರೆ, ಸೆಪ್ಟೆಂಬರ್ 13: ರಾಜ್ಯಾದ್ಯಂತ ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಡಿಜೆ ಬಳಸಬಾರದು ಎಂಬ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ. ಯಾವುದೇ ಕಾರಣಕ್ಕೂ ಡಿಜೆ ಹಾಕಿಕೊಂಡು ಗಣಪತಿ ಮೂರ್ತಿ ಮೆರವಣಿಗೆ ಮಾಡುವಂತಿಲ್ಲ. ನೃತ್ಯ ಸೇರಿದಂತೆ ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ನಿರ್ಬಂಧ ಹೇರಿದೆ.
ಈ ಆದೇಶದ ನಡುವೆಯೇ ಈಗ ದಾವಣಗೆರೆ ತಹಶೀಲ್ದಾರ ಗಿರೀಶ್ ಗಣೇಶ ಹಬ್ಬ ಆಚರಣೆ ವೇಳೆ ಹಾಡಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್. ಆರ್. ಬೀಳಗಿ ಸಹ ಡಿಜೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿ ಗಣೇಶ ಹಬ್ಬ ಆಚರಣೆಗೆ ಆದೇಶ ಹೊರಡಿಸಿದ್ದರು. ಆದರೆ ಈಗ ದಾವಣಗೆರೆ ತಾಲೂಕಿನ ತುರ್ಚಘಟ್ಟದ ನಿರ್ಗತಿಕರ ಕೇಂದ್ರದಲ್ಲಿ "ಕುಲದಲ್ಲಿ ಕೀಳಾವುದೋ ಹುಚ್ಚಪ್ಪ' ಹಾಡಿಗೆ ತಹಶೀಲ್ದಾರ ಗಿರೀಶ್ ಅಲ್ಲಿದ್ದವರ ಜೊತೆಯಲ್ಲಿ ಕುಣಿದು ಕುಪ್ಪಳಿಸಿರುವುದು ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ತಹಶೀಲ್ದಾರರಿಂದಲೇ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪ ಕೇಳಿ ಬಂದಿದ್ದು, ಡ್ಯಾನ್ಸ್ ಮಾಡಿರುವ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ಗಣೇಶ ಹಬ್ಬಕ್ಕೆ ಡಿಜೆ, ಮೆರವಣಿಗೆ ನಿರಾಕರಿಸಿದ ತಹಶೀಲ್ದಾರ ಗಿರೀಶ್ ಅವರೇ ನೃತ್ಯ ಮಾಡಿದ್ದಾರೆ. ಗಣಪತಿ ವಿಸರ್ಜನೆ ಹಿನ್ನೆಲೆ ಹಲವು ಮನೋರಂಜನಾ ಕಾರ್ಯಕ್ರಮಗಳಿಗೂ ನಿಷೇಧ ಹೇರಲಾಗಿದ್ದರೂ, ತಹಶೀಲ್ದಾರ ವರ್ತನೆಗೆ ಟೀಕೆಗಳು ಕೇಳಿ ಬರಲಾರಂಭಿಸಿವೆ.
ತುರ್ಚಘಟ್ಟ ಬಳಿ ಇರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಸ್ವತಃ ತಹಶೀಲ್ದಾರ ಗಿರೀಶ್ ನೇತೃತ್ವದಲ್ಲಿಯೇ ಮೂರ್ತಿ ಇಡಲಾಗಿತ್ತು. ಪೂಜೆ, ಪುನಸ್ಕಾರವೂ ನಡೆದಿತ್ತು. ಆದರೆ ಕೊರೊನಾ ಸೋಂಕು ಭೀತಿ ನಡುವೆಯೇ ಈ ರೀತಿಯಾದ ನೃತ್ಯ ಆಯೋಜಿಸುವ ಅವಶ್ಯಕತೆ ಇತ್ತಾ ಎಂಬ ಪ್ರಶ್ನೆ ಕಾಡಲಾರಂಭಿಸಿದೆ.
ನಿರಾಶ್ರಿತ ಕೇಂದ್ರದಲ್ಲಿನ ವಾಸಿಗಳು ನೃತ್ಯ ಶುರು ಮಾಡುತ್ತಿದ್ದಂತೆಯೇ ಗಿರೀಶ್ ಸಖತ್ತಾಗಿಯೇ ಸ್ಟೆಪ್ ಹಾಕಿ ಎಲ್ಲರನ್ನೂ ರಂಜಿಸಿದರು. ಆದರೆ ಈ ವೇಳೆ ಗಿರೀಶ್ ಮಾತ್ರ ಮಾಸ್ಕ್ ಧರಿಸಿದ್ದು, ನೃತ್ಯ ಮಾಡುತ್ತಿದ್ದವರು ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತರವನ್ನೂ ಕಾಪಾಡಿಕೊಳ್ಳದೇ ಡ್ಯಾನ್ಸ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಭಿಕ್ಷೆ ಬೇಡುವವರು, ಯಾರು ಇಲ್ಲದ ಅನಾಥರು ಇರುವ ಈ ಕೇಂದ್ರದಲ್ಲಿ ತಹಶೀಲ್ದಾರರೇ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. ಜನರಿಗೆ ಡಿಜೆ ನಿರಾಕರಿಸಿ ಆದೇಶ ಹೊರಡಿಸಿದವರಿಂದಲೇ ನಿಯಮ ಉಲ್ಲಂಘನೆಯಾಗಿದೆ. ನಿಯಮ ಪಾಲಿಸಬೇಕಾದವರಿಂದಲೇ ನಿಯಮ ಉಲ್ಲಂಘನೆ ಆಗಿದೆ ಎಂಬ ಆರೋಪವೂ ಕೇಳಿ ಬಂದಿದೆ.
Recommended Video
ಸಾಮಾನ್ಯ ಜನರಿಗೆ ಒಂದು ನ್ಯಾಯ, ಅಧಿಕಾರಿಗಳಿಗೆ ಒಂದು ನ್ಯಾಯನಾ? ಗಣಪತಿ ಮೂರ್ತಿ ಪ್ರತಿಷ್ಠಾಪಿಸಲು ನೂರೆಂಟು ಷರತ್ತು ಹಾಕುತ್ತಾರೆ. ನಾವು ನೃತ್ಯ ಮಾಡುವಂತಿಲ್ಲ. ಆದರೆ ತಹಶೀಲ್ದಾರರು ನೃತ್ಯ ಮಾಡಬಹುದಾ? ಜನರಲ್ಲಿ ಅರಿವು ಮೂಡಿಸಬೇಕಾದ, ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕಾದವರೇ ಈ ರೀತಿ ವರ್ತನೆ ಮಾಡಿದರೆ ಹೇಗೆ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications