ದಾವಣಗೆರೆ ವಿವಿ ಉಪಕುಲಪತಿಯಿಂದ ನಿಯಮ ಮೀರಿದ ನೇಮಕಾತಿ?
ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ವಿವಾದದಲ್ಲಿ. ನಿವೃತ್ತಿಯ ಅಂಚಿನಲ್ಲಿ ನೇಮಕಾತಿ ನಡೆಸುತ್ತಿರುವುದರಿಂದ ವಿವಾದ.
ದಾವಣಗೆರೆ, ಆಗಸ್ಟ್ 30: ನಿವೃತ್ತಿಯ ಅಂಚಿನಲ್ಲಿರುವ ದಾವಣಗೆರೆಯ ಉಪಕುಲಪತಿ ಡಾ.ಬಿ.ಬಿ. ಕಲಿವಾಳ ಅವರು ನಿಯಮ ಮೀರಿ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
Recommended Video

ಕಳೆದ ವರ್ಷ ಜುಲೈ 15ರಂದು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಹೊರಡಿಸಿರುವ, ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು, ''ಯಾವುದೇ ವಿಶ್ವವಿದ್ಯಾಲಯದಲ್ಲಿ ನಿವೃತ್ತಿಯ ಅಂಚಿನಲ್ಲಿರುವ ಉಪ ಕುಲಪತಿಗಳು ಅಧಿಕಾರಾವಧಿ ಮುಗಿಯಲು 6 ತಿಂಗಳು ಬಾಕಿ ಇರುವಾಗ ಯಾವುದೇ ನೇಮಕಾತಿ ಮಾಡಬಾರದು'' ಎಂದು ಆದೇಶಿಸಿದ್ದಾರೆ.

ಇದೇ ವರ್ಷ ಡಿಸೆಂಬರ್ 31ರಂದು ಕಲಿವಾಳ ನಿವೃತ್ತಿಯಾಗಲಿರುವುದರಿಂದ ರಾಜ್ಯಪಾಲರ ಆದೇಶ ಅವರಿಗೂ ಅನ್ವಯವಾಗುತ್ತದೆ. ಆದರೆ, ರಾಜ್ಯಪಾಲರ ಈ ಆದೇಶವನ್ನು ಗಾಳಿಗೆ ತೂರಿರುವ ಅವರು, ತಮ್ಮಿಚ್ಛೆಯಂತೆ ನೇಮಕಾತಿಗಳನ್ನು ನಡೆಸುತ್ತಿದ್ದು, 111 ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿಗೆ ಚಾಲನೆ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಅಧಿಕಾರಾವಧಿ ಮುಗಿಯುವ ಹಿಂದಿನ ಆರು ತಿಂಗಳಲ್ಲಿ ಯಾವುದೇ ನೇಮಕಾತಿ ಸಲ್ಲದು ಎಂದು ರಾಜ್ಯಪಾಲರು ಆದೇಶಿಸಿದ್ದರೂ, ಕಲಿವಾಳ ಅವರು, ಸಿಬ್ಬಂದಿ ಕೊರೆತೆಯ ಕಾರಣ ನೀಡಿ 18 ಬೋಧಕ, 7 ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಒಪ್ಪಿಗೆ ಕೇಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಇದನ್ನು ವಿಶೇಷ ಮನವಿ ಎಂದು ಪರಿಗಣಿಸಿದ ರಾಜ್ಯಪಾಲರು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮನವಿಗೆ ಒಪ್ಪಿಗೆ ನೀಡಿದ್ದರು.
ಇದನ್ನೇ ಉಪಯೋಗಿಸಿಕೊಂಡು, ಈ ಸಿಬ್ಬಂದಿಗಳ ಜತೆಗೆ, 10 ಪ್ರಾಧ್ಯಾಪಕರು, 30 ಸಹ ಪ್ರಾಧ್ಯಾಪಕರು, 71 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications