ಅಮೆರಿಕಾದಲ್ಲಿ ಸಾವನ್ನಪ್ಪಿದ ಈ ಮೂವರ ಮೃತದೇಹಗಳು ದಾವಣಗೆರೆಗೆ ಬರುವುದಿಲ್ಲ, ಏಕೆ ಗೊತ್ತಾ?, ಇಲ್ಲಿದೆ ಮಾಹಿತಿ
ಸಾವು ಕಂಡ ಮೂವರ ಮೃತದೇಹಗಳು ದಾವಣಗೆರೆಗೆ ಬರಲ್ಲ: ಮಧ್ಯರಾತ್ರಿ 12ಕ್ಕೆ ಅಮೆರಿಕಾದ ಕ್ಯಾಟೊನ್ಸ್ವಿಲ್ಲೆನಲ್ಲಿ ಅಂತ್ಯಸಂಸ್ಕಾರ.. ಯಾಕೆ ಬರಲಿಲ್ಲ ಗೊತ್ತಾ...?
ದಾವಣಗೆರೆ, ಆಗಸ್ಟ್, 26: ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ಇತ್ತೀಚೆಗಷ್ಟೇ ಅಮೆರಿಕಾದಲ್ಲಿ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ತವರಿಗೆ ತರಿಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದರು. ಆದರೆ ಇದೀಗ ಮೃತದೇಹಗಳನ್ನು ತವರಿಗೆ ತರಲಾಗುತ್ತಿಲ್ಲ. ಅಮೇರಿಕಾದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೇರಿ ಲ್ಯಾಂಡ್ ರಾಜ್ಯದ ಬಾಲ್ತಿಮೇರ್ನಲ್ಲಿ ಸಾವನ್ನಪ್ಪಿದ ದಾವಣಗೆರೆ ಮೂಲದ ಮೂವರ ಮೃತದೇಹಗಳ ಅಂತ್ಯಸಂಸ್ಕಾರ ಇಂದು ರಾತ್ರಿ 11.30ರಿಂದ 12 ಗಂಟೆಯ ಸುಮಾರಿಗೆ ಭಾರತೀಯ ಕಾಲಮಾನದ ಪ್ರಕಾರ ನೆರವೇರಲಿದೆ. ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಅಲ್ಲಿಯೇ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಳೆದ ಆಗಸ್ಟ್ 15ರಂದು ಅಮೆರಿಕಾದ ಮೇರಿ ಲ್ಯಾಂಡ್ ರಾಜ್ಯದ ಬಾಲ್ತಿಮೇರ್ನಲ್ಲಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹೊನ್ನಾಳ ಗ್ರಾಮದ ಯೋಗೇಶ್ ಅವರು ಪತ್ನಿ ಪ್ರತಿಭಾ ಹೊನ್ನಾಳ ಹಾಗೂ ಪುತ್ರ ಯಶ್ ಹೊನ್ನಾಳನಿಗೆ ಶೂಟ್ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು, ಅಲ್ಲಿನ ಪೊಲೀಸರು ಇದನ್ನು ಬಹಿರಂಗಪಡಿಸಿಲ್ಲ.
ಯೋಗೇಶ್ ಹೊನ್ನಾಳ ತಾಯಿ ಶೋಭಾ, ಸಹೋದರ ಹಾಗೂ ಪ್ರತಿಭಾ ಯೋಗೇಶ್ ಹೊನ್ನಾಳ ತಾಯಿ ಹಾಗೂ ಸಹೋದರ ಅಮೆರಿಕಾ ತಲುಪಿದ್ದಾರೆ. ಇವರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ. ಆದರೆ ಭಾರತಕ್ಕೆ ಮೂವರ ಮೃತದೇಹಗಳನ್ನು ತರುವುದಕ್ಕೆ ನಡೆಸಿದ ಪ್ರಯತ್ನ ಕೈಗೂಡಲಿಲ್ಲ. ಕೇಂದ್ರ ವಿದೇಶಾಂಗ ಇಲಾಖೆ, ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದ ಜಿ. ಎಂ. ಸಿದ್ದೇಶ್ವರ ಅವರು ಮೃತದೇಹಗಳನ್ನು ದಾವಣಗೆರೆ ತೆಗೆದುಕೊಂಡು ಬರಲು ಎಲ್ಲಾ ರೀತಿಯ ಸಹಕಾರ ಕೊಟ್ಟಿದ್ದರು.
ಆದರೆ ಬಾಲ್ತಿಮೇರ್ನ ಆರೋಗ್ಯ ಇಲಾಖೆಯು ಮೃತದೇಹಗಳನ್ನು ವೈದ್ಯಕೀಯತೆ ಪ್ರಕಾರ ಕಳುಹಿಸಿಕೊಡಲು ಕಷ್ಟವಾಗುತ್ತದೆ ಎಂಬ ಕಾರಣ ನೀಡಿ ಅಲ್ಲಿಯೇ ಅಂತ್ಯಸಂಸ್ಕಾರ ನಡೆಸುವಂತೆ ಹೇಳಿದ್ದಾರೆ. ಆಗಸ್ಟ್ 15 ರಂದು ಮೂರು ಮೃತದೇಹಗಳು ಪತ್ತೆಯಾಗಿದ್ದವು. ಘಟನೆ ನಡೆದು ಎರಡರಿಂದ ಮೂರು ದಿನಗಳ ಬಳಿಕ ಈ ವಿಚಾರ ಗೊತ್ತಾಗಿತ್ತು. ಅಷ್ಟೊತ್ತಿಗೆ ಮೃತದೇಹಗಳು ಕೊಳೆತು ಹೋಗಿದ್ದವು.
ಇನ್ನು ಘಟನೆ ನಡೆದ ಬಳಿಕ ಮೃತದೇಹಗಳನ್ನು ಕೋಲ್ಡ್ ಸ್ಟೋರೇಜ್ನಲ್ಲಿಟ್ಟಿದ್ದರೂ ಮೃತದೇಹಗಳು ಪೂರ್ತಿಯಾಗಿ ಕೊಳೆತು ಹೋಗಿವೆ. ಹಾಗಾಗಿ ಮೃತದೇಹಗಳನ್ನು ಕಳುಹಿಸಿಕೊಡಲು ಕಷ್ಟವಾಗುತ್ತದೆ ಎಂದು ಬಾಲ್ಟಿಮೋರ್ ಕೌಂಟಿ ಪೊಲೀಸರು ಹಾಗೂ ಅಲ್ಲಿನ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಅಂತ್ಯಸಂಸ್ಕಾರ ನಡೆಯುವುದು ಎಲ್ಲಿ?
ಎರಡೂ ಕುಟುಂಬಗಳು ಅಮೆರಿಕಾ ಕಾಲಮಾನದ ಪ್ರಕಾರ ಸಂಜೆ 2ರಿಂದ 4ಗಂಟೆಯವರೆಗೆ ಸುಮಾರಿಗೆ IADಗೆ ಆಗಮಿಸಲಿರುವ ಕಾರಣ ಸೋಮವಾರಕ್ಕಿಂತ ಶನಿವಾರದಂದು ಅಂತ್ಯಕ್ರಿಯೆಯ ಸೇವೆಗಳನ್ನು ನಿರ್ವಹಿಸಲು ನಾವು ಎಲ್ಲಾ ಕಾರ್ಯಸಾಧ್ಯ ಆಯ್ಕೆಗಳನ್ನು ಪರಿಶೀಲಿಸಿದ್ದೇವೆ. ಈ ಮೂಲಕ ನಾವು ಶೋಕದ ಅವಧಿಯನ್ನು ಕಡಿಮೆ ಮಾಡಬಹುದು. ಕುಟುಂಬವು ಇತರ ಆದ್ಯತೆಗಳ ಮೇಲೆ ಕೇಂದ್ರೀಕರಿಸಬಹುದು. ಸ್ನೇಹಿತರು ಮತ್ತು ನೆರೆಹೊರೆಯವರು ಹಾಜರಾಗಬಹುದು ಎಂದು ಸೂಚಿಸಲಾಗಿದೆ.
ಅಂತ್ಯಕ್ರಿಯೆಯ ಸಮಯದ ವಿರವ
ನಾವು ಅಂತ್ಯಕ್ರಿಯೆಯ ಮನೆಯ ಲಭ್ಯತೆ ಮತ್ತು ಪಾದ್ರಿಯನ್ನು ಹೊಂದಿದ್ದೇವೆ. ಆದ್ದರಿಂದ ಶನಿವಾರದಂದು ಮ್ಯಾಕ್ ನಾಬ್ ಫ್ಯೂನರಲ್ ಹೋಮ್ 301 ಫ್ರೆಡೆರಿಕ್ ರಸ್ತೆ, ಕ್ಯಾಟೊನ್ಸ್ವಿಲ್ಲೆ, MD 21228 ಇಲ್ಲಿ ನೆರವೇರಿಸಲು ನಿರ್ಧರಿಸಲಾಗಿದೆ. ಯಾರಾದರೂ ಬರಲು ಯೋಜಿಸುತ್ತಿದ್ದರೆ, ದಯವಿಟ್ಟು ಮಧ್ಯಾಹ್ನ 1:30ಕ್ಕೆ ಸ್ಥಳದಲ್ಲಿರುವಂತೆ ಸೂಚಿಸಲಾಗಿದೆ. ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 11 ಗಂಟೆಗೆ ಆರಂಭವಾಗುವ ಅಂತಿಮ ವಿಧಿವಿಧಾನ ಮಧ್ಯರಾತ್ರಿ ಸುಮಾರು ಒಂದೂವರೆಯಿಂದ 2 ಗಂಟೆಯೊಳಗೆ ನೆರವೇರುವ ಸಾಧ್ಯತೆಯಿದೆ.
80 ರಿಂದ 100 ಮಂದಿಗೆ ಮಾತ್ರ ಅವಕಾಶ
ಯೋಗೇಶ್ ಹೊನ್ನಾಳ, ಪ್ರತಿಭಾ ಹೊನ್ನಾಳ ಹಾಗೂ ಪುತ್ರ ಯಶ್ ಹೊನ್ನಾಳ ಮೃತದೇಹಗಳನ್ನು ವೀರಶೈವ ಲಿಂಗಾಯತ ವಿಧಿವಿಧಾನಗಳ ಪ್ರಕಾರ ನೆರವೇರಿಸಲು ಅನುವು ಮಾಡಿಕೊಡಲಾಗಿದೆ. ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಸುಮಾರು 80 ರಿಂದ 100 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಂದಿ ಸೇರುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.
ಯೋಗೇಶ್ ತಾಯಿ ಶೋಭಾ, ಸಹೋದರ ಪುನೀತ್ ಹಾಗೂ ಪ್ರತಿಭಾ ಹೊನ್ನಾಳರ ತಾಯಿ ಪ್ರೇಮಾ ಹಾಗೂ ಸಹೋದರ ಗಣೇಶ್ ಈಗಾಗಲೇ ಅಮೆರಿಕಾ ತಲುಪಿದ್ದಾರೆ. ಅಮೆರಿಕಾದಲ್ಲಿಯೇ ನೆಲೆಸಿದ್ದ ಸೋಮಶೇಖರ್ ಅವರು, ಏಳು ದಿನಗಳ ಹಿಂದೆಯೇ ಘಟನಾ ಸ್ಥಳಕ್ಕೆ ತೆರಳಿದ್ದರು. ಆದರೆ ಅಲ್ಲಿನ ಪೊಲೀಸರು ಮೃತದೇಹ ನೋಡಲು ಅವಕಾಶ ಕಲ್ಪಿಸಿರಲಿಲ್ಲ. ಡೆತ್ ನೋಟ್ ಅನ್ನು ನೀಡಿರಲಿಲ್ಲ. ಯೋಗೇಶ್ ಕುಟುಂಬಸ್ಥರು ಹಾಗೂ ಪ್ರತಿಭಾ ಕುಟುಂಬಸ್ಥರಿಗೆ ಮಾತ್ರ ನೀಡುವುದಾಗಿ ಹೇಳಿದ್ದರಿಂದ ಸಾವಿಗೆ ಇನ್ನೂ ಕಾರಣ ಏನೆಂಬುದು ನಿಗೂಢ.
ಶರಾವತಿ ಕನ್ನಡಿಗರ ಸಂಘದಿಂದ ನೆರವು
ಇನ್ನು ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರು ಶರಾವತಿ ಕನ್ನಡಿಗರ ಸಂಘ ರಚಿಸಿಕೊಂಡಿದ್ದಾರೆ. ಈ ಸಂಘದ ಸದಸ್ಯರು ಯೋಗೇಶ್ ಹೊನ್ನಾಳ ಹಾಗೂ ಪ್ರತಿಭಾ ಹೊನ್ನಾಳ ಕುಟುಂಬದವರಿಗೆ ಎಲ್ಲಾ ರೀತಿಯ ನೆರವು ನೀಡಿದ್ದಾರೆ. ಹಾಗಾಗಿ, ಅಂತ್ಯಕ್ರಿಯೆಗೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇಂದು ಮಧ್ಯರಾತ್ರಿಯ ಹೊತ್ತಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಕುಟುಂಬಸ್ಥರ ಮನವೊಲಿಕೆ ಯಶಸ್ವಿ
ಮೂರು ಮೃತದೇಹಗಳು ಕೊಳೆತು ಹೋಗಿದ್ದು, ಭಾರತಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗುವುದಿಲ್ಲ. ಇಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಿದರೆ ಒಳ್ಳೆಯದು. ಅಂತ್ಯಸಂಸ್ಕಾರ ಇಲ್ಲಿಯೇ ನೆರವೇರಿಸಿದರೆ ಒಳ್ಳೆಯದು. ಇಷ್ಟೊಂದು ದೀರ್ಘ ಪ್ರಯಾಣ, ವೈದ್ಯಕೀಯವಾಗಿಯೂ ತೆಗೆದುಕೊಂಡು ಹೋಗುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.
ಈ ಮೂಲಕ ಕುಟುಂಬಸ್ಥರ ಮನವೊಲಿಸುವಲ್ಲಿ ಅಮೆರಿಕಾದ ಮೇರಿ ಲ್ಯಾಂಡ್ ರಾಜ್ಯದ ಬಾಲ್ತಿಮೇರ್ ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿ ಆಗಿದ್ದಾರೆ. ಯೋಗೇಶ್ ಹೊನ್ನಾಳ ಹಾಗೂ ಪ್ರತಿಭಾ ಹೊನ್ನಾಳ ಕುಟುಂಬಸ್ಥರು ಸಹ ಇದಕ್ಕೆ ಸಹಮತಿ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿರುವ ಯೋಗೇಶ್ ಹೊನ್ನಾಳ ಸಂಬಂಧಿಕರು, ಪ್ರತಿಭಾ ಹೊನ್ನಾಳ ತಂದೆ ಹಾಗೂ ಕುಟುಂಬಸ್ಥರು, ಸಂಬಂಧಿಕರ ಜೊತೆ ಈ ವಿಚಾರ ಕುರಿತಂತೆ ಅಮೆರಿಕಾಕ್ಕೆ ತೆರಳಿದ್ದ ಶೋಭಾ ಹಾಗೂ ಯೋಗೇಶ್ ಸಹೋದರ, ಪ್ರತಿಭಾ ತಾಯಿ ಹಾಗೂ
ಸಹೋದರ ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ಒಟ್ಟಿನಲ್ಲಿ ಸುಂದರ ಕುಟುಂಬದ ದುರಂತ ಅಂತ್ಯ ಕಂಡಿದೆ.
ದಾವಣಗೆರೆಗೆ ಮೃತದೇಹಗಳನ್ನು ತರಲು ಎಲ್ಲಾ ರೀತಿಯ ಪ್ರಯತ್ನ ನಡೆಸಿತಾದರೂ ತರಲಾಗಲಿಲ್ಲ. ಮುದ್ದಾದ ಕುಟುಂಬವೊಂದು ಅಮೆರಿಕಾದಲ್ಲಿಯೇ ದುರಂತ ಅಂತ್ಯ ಕಂಡಿದ್ದು ಮಾತ್ರ ನಿಜಕ್ಕೂ ದುರಂತ ಹಾಗೂ ನೋವಿನ ಸಂಗತಿಯೇ ಸರಿ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications