ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಲ್ಯದ ಕಷ್ಟದ ದಿನಗಳನ್ನು ನೆನೆದ ದಾವಣಗೆರೆ ಜಿಲ್ಲಾಧಿಕಾರಿ

|
Google Oneindia Kannada News

ದಾವಣಗೆರೆ, ಜನವರಿ 09: ಬಾಲ್ಯದಲ್ಲಿ ತಾನು ಅನುಭವಿಸಿದ ಬಡತನ ಹಾಗೂ ಕಷ್ಟದ ದಿನಗಳನ್ನು ನೆನೆದು ಭಾವುಕರಾಗಿದ್ದಾರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ.

Recommended Video

ಕೋಟಿ ಸಿಕ್ಕಿದ್ದೇ ತಡ ವಿಂಡೀಸ್ ಬ್ಯಾಟ್ಸ್ ಮೆನ್ ಫುಲ್ ಸ್ಟೆಪ್.

ನಾನು 5 ವರ್ಷದ ವಯಸ್ಸಿನವನಾಗಿದ್ದಾಗ ನನ್ನ ತಂದೆ ಅಕಾಲಿಕ ಮರಣ ಹೊಂದಿದ ಸಂದರ್ಭದಲ್ಲಿ, ನಮಗೆ ಕಿತ್ತು ತಿನ್ನುವ ಬಡತನ. ಆ ಸಮಯದಲ್ಲಿ ನನ್ನ ತಾಯಿ ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸಿದಾಗ ಅನೇಕ ದಿನಗಳವರೆಗೆ ನನ್ನ ತಾಯಿಗೆ ಸಂಬಂಧಪಟ್ಟ ಅಧಿಕಾರಿಗಳು ಅಲೆದಾಡಿಸಿದರು.

"ನಾನೇ ಡಿಸಿಎಂ ಆಗ್ತೀನಿ" ಎಂದು ನಕ್ಕು ನುಣುಚಿಕೊಂಡ ರೇಣುಕಾಚಾರ್ಯ

ಕೊನೆಗೆ ನನ್ನ ತಾಯಿ 25 ರುಪಾಯಿ ವಿಧವಾ ವೇತನ ಪಡೆಯಲು ನೂರು ರುಪಾಯಿಗಳನ್ನು ಲಂಚವಾಗಿ ನೀಡಿದ ಮೇಲೆ ನನ್ನ ತಾಯಿಗೆ ವಿಧವಾ ವೇತನದ ಆದೇಶ ಪತ್ರವನ್ನು ಸಿಗುವಂತಾಯಿತು ಎಂದರು.

Davangere DC Remembers The Difficult Days Of Childhood

ಇದನ್ನೆಲ್ಲ ಗಮನಿಸಿದ ನನಗೆ ನನ್ನ ತಾಯಿಗೆ ಆದ ಅನ್ಯಾಯ ಸಮಾಜದ ಬೇರೆ ತಾಯಂದಿರಿಗೆ ಆಗಬಾರದು ಎಂದು ಸಂಕಲ್ಪ ಮಾಡಿದೆ. ಆಗಿನಿಂದಲೇ ಕಷ್ಟಪಟ್ಟು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಹಂತ ಹಂತವಾಗಿ ಬೆಳೆದು ಇಂದು ನಾನು ಜಿಲ್ಲಾಧಿಕಾರಿಯಾಗಿದ್ದೇನೆ ಎಂದುನ ಅನುಭವ ಹಂಚಿಕೊಂಡರು.

ನನ್ನ ಮೊದಲ ಗುರಿ ನನ್ನ ತಾಯಿ ಅನುಭವಿಸಿದ ಕಷ್ಟವನ್ನು ಬೇರೆ ತಾಯಂದಿರು ಅನುಭವಿಸಬಾರದು, ಈ ಹಿನ್ನೆಲೆಯಲ್ಲಿ ನಾನು ಜಿಲ್ಲಾಧಿಕಾರಿಯಾದ ತಕ್ಷಣ "ಪಿಂಚಣಿ ಅದಾಲತ್ ಕಾರ್ಯಕ್ರಮ"ವನ್ನು ಜಾರಿಗೆ ತಂದಿದ್ದೇನೆ ಎಂದರು.

ದಾವಣಗೆರೆಯಲ್ಲಿ ಜ.10ರಿಂದ ಶರಣ ಸಂಸ್ಕೃತಿ ಉತ್ಸವದಾವಣಗೆರೆಯಲ್ಲಿ ಜ.10ರಿಂದ ಶರಣ ಸಂಸ್ಕೃತಿ ಉತ್ಸವ

ಇದರ ಉದ್ದೇಶ ತಹಶೀಲ್ದಾರ್ ಕಚೇರಿ ಜನರ ಮನೆ ಬಾಗಿಲಿಗೆ ಬರಬೇಕು ಎಂಬುದು. ಇದರ ಅರ್ಥ ನಮ್ಮ ಅಧಿಕಾರಿಗಳು ಜನರ ಮನೆ ಬಾಗಿಲಿಗೆ ಹೋಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸರ್ಕಾರದಿಂದ ಸಿಗಬೇಕಾಗಿರುವ ವಿವಿಧ ಪಿಂಚಣಿ ಯೋಜನೆಗಳನ್ನು ತಲುಪಿಸುವುದಾಗಿದೆ.

ಈ ನನ್ನ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಿಲ್ಲೆಯ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಚಾಚೂ ತಪ್ಪದೆ ನಿರ್ವಹಿಸಬೇಕೆಂದು ಸೂಚಿಸಿದ್ದೇನೆಂದು ದಾವಣಗೆರೆ ಜಿಲ್ಲಾಧಿಕಾರಿ ಶ್ರೀ ಮಹಾಂತೇಶ ಬೀಳಗಿ ಹೇಳಿದರು.

English summary
Davanagere District Collector Mahantesha Bilagi is remembered of the poverty and hard days he suffered as a child.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X