100 ದಿನ ಭದ್ರಾ ನೀರು ಹರಿಸಬೇಕು, ಐಸಿಸಿ ಸಭೆ ರದ್ದು ಮಾಡಬೇಕು: ಭಾರತ ರೈತ ಒಕ್ಕೂಟ ಪಟ್ಟು

ದಾವಣಗೆರೆ, ಸೆಪ್ಟೆಂಬರ್‌ 06: ರಾಜ್ಯ ಸರ್ಕಾರ ಈ ಹಿಂದೆ ತೀರ್ಮಾನಿಸಿದಂತೆ 100 ದಿನಗಳವರೆಗೆ ನಿರಂತರ ಭದ್ರಾ ನೀರು ಹರಿಸಬೇಕು. ಐಸಿಸಿ ಸಭೆ ರದ್ದು ಮಾಡಬೇಕು ಮತ್ತು ಶೇಕಡ 70 ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶ ದಾವಣಗೆರೆ ಜಿಲ್ಲೆಯಲ್ಲಿ ಇರುವುದರಿಂದ ದಾವಣಗೆರೆ ಜಿಲ್ಲೆ ಜನ ಪ್ರತಿನಿಧಿಯೊಬ್ಬರನ್ನು ತಾತ್ಕಾಲಿಕ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಐಸಿಸಿ ಸಭೆ ದಾವಣಗೆರೆಯಲ್ಲಿ ನಡೆಯಬೇಕು ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿ, ರೈತರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಭಾರತೀಯ ರೈತ ಒಕ್ಕೂಟದಡಿಯಲ್ಲಿ ನಗರದ ಶ್ರೀ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ರೈತರು ಸಭೆ ನಡೆಸಿ, ನಂತರ ಎಸಿ ಕಚೇರಿ ಮುಂಭಾಗ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು. ನಂತರ ಎಸಿ ದುರ್ಗಾಶ್ರೀಯವರಿಗೆ ಮನವಿ ಪತ್ರ ಅರ್ಪಿಸಿದರು.

Davangere Farmers Demand For Continuous Bhadra Water Should Be Provided For 100 Days

ಈ ಸಂದರ್ಭದಲ್ಲಿ ಹರಿಹರ ಶಾಸಕ ಬಿ.ಪಿ ಹರೀಶ್ ಮಾತನಾಡಿ, 'ಅಕ್ರಮ ಪಂಪ್ ಸೆಟ್ ಅಳವಡಿಸಿಕೊಂಡು ಅಡಿಕೆ ತೋಟ ಮಾಡಿರುವ ಕೆಲವು ರೈತರು ಭದ್ರಾ ನಾಲೆಗಳಲ್ಲಿ ನಿರಂತರ ನೀರು ಹರಿಸಿದರೆ ಮುಂದಿನ ಬೇಸಿಗೆಯಲ್ಲಿ ತೋಟ ನಿರ್ವಹಣೆಗೆ ಅನಾನುಕೂಲವಾಗುತ್ತದೆ ಎಂಬ ಕಾರಣಕ್ಕೆ ನೀರು ಹರಿಸುವ ವೇಳಾಪಟ್ಟಿಯನ್ನು ಪರಿಷ್ಕರಿಸಲು ಒತ್ತಾಯಿಸುತ್ತಿದ್ದಾರೆ. ಇವರ ಒತ್ತಡಕ್ಕೆ ಮಣಿದ ಸರ್ಕಾರ ಸಭೆ ಕರೆದಿದೆ. ದಾವಣಗೆರೆ ಜಿಲ್ಲೆಯ ಜನ ಪ್ರತಿನಿಧಿಗಳು ಈ ಸಭೆಗೆ ಹೋಗಬಾರದು' ಎಂದು ಹೇಳಿದರು.

ರೈತ ಮುಖಂಡ ಕೊಳೇನಹಳ್ಳಿ ಬಿ.ಎಂ ಸತೀಶ್ ಮಾತನಾಡಿ, 'ಆಹಾರ ಬೆಳೆ ಬೆಳೆಯಲು ಭದ್ರಾ ಜಲಾಶಯ ನಿರ್ಮಾಣ ಮಾಡಲಾಗಿದೆ. ಆದರೆ ಭತ್ತದ ಬೆಳೆಗಿಂತ ಅಡಿಕೆ ಬೆಳೆಗೆ ನೀರು ಬೇಕು ಎಂದು ಒತ್ತಾಯಿಸುವುದು ಸರಿಯಲ್ಲ. ಸರ್ಕಾರ ತರಾತುರಿಯಲ್ಲಿ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನವರನ್ನು ತಾತ್ಕಾಲಿಕ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಭೆ ಕರೆದಿರುವುದು ಭತ್ತದ ಬೆಳೆಗಾರರಿಗೆ ಮರಣ ಶಾಸನವಾಗಿದೆ' ಎಂದು ಹೇಳಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಬೆಳವನೂರು ನಾಗೇಶ್ವರರಾವ್ ಮಾತನಾಡಿ 'ಸರ್ಕಾರ 100 ದಿನ ನಿರಂತರವಾಗಿ ನೀರು ಹರಿಸುವುದಾಗಿ ಅಧಿಸೂಚನೆ ಹೊರಡಿಸಿದ್ದರಿಂದ ರೈತರು ಭತ್ತದ ನಾಟಿ ಮಾಡಿದ್ದಾರೆ. ಈಗಾಗಲೇ 2 ಬಾರಿ ಗೊಬ್ಬರ ಹಾಕಿದ್ದು, ಒಂದು ಎಕರೆಗೆ ಸುಮಾರು 35 ಸಾವಿರದಷ್ಟು ಸಾಲ ಸೋಲ ಮಾಡಿ ಬಂಡವಾಳ ಸುರಿದಿದ್ದಾರೆ. ಈಗ ನೀರು ಹರಿಸುವ ವೇಳಾಪಟ್ಟಿಯನ್ನು ಪರಿಷ್ಕರಿಸುತ್ತೇವೆ ಎನ್ನುವುದು ಮಕ್ಕಳಾಟವಾಗಿದೆ' ಎಂದು ಖಂಡಿಸಿದರು.

Davangere Farmers Demand For Continuous Bhadra Water Should Be Provided For 100 Days

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಮನೂರು ಲಿಂಗರಾಜುರವರು ಮಾತನಾಡಿ 'ಈಗಾಗಲೇ ನೀರು ಹರಿಸಲು ಪ್ರಾರಂಭಿಸಿ 25 ದಿನಗಳಾಗಿವೆ. ಇನ್ನು 75 ದಿನ ನೀರು ಹರಿಸಲು 23 ಟಿಎಂಸಿ ನೀರು ಬೇಕು. ಜಲಾಶಯದಲ್ಲಿ ಕುಡಿಯುವ ನೀರಿಗೆ 7 ಟಿಎಂಸಿ ನೀರು ಮೀಸಲಿಟ್ಟರೂ 33 ಟಿಎಂಸಿ ನೀರಿನ ಸಂಗ್ರಹ ಇದೆ. ಆದ್ದರಿಂದ ಸರ್ಕಾರ ರೈತರೊಂದಿಗೆ ಹುಡುಗಾಟಿಕೆ ಮಾಡಬಾರದು' ಎಂದು ಎಚ್ಚರಿಸಿದರು.

ಸಭೆಯಲ್ಲಿ ಬಲ್ಲೂರು ರವಿಕುಮಾರ್, ಕುಂದುವಾಡದ ಹೆಚ್ ಎನ್ ಗುರುನಾಥ್, ಕೊಂಡಜ್ಜಿ ಶಾನುಭೋಗರ ನಾಗರಾಜರಾವ್, ಕುಂದುವಾಡದ ಮಹೇಶ್, ಜಿಮ್ಮಿ ಹನುಮಂತಪ್ಪ, ಗೋಪನಾಳ ಕರಿಬಸಪ್ಪ, ಕುಂದುವಾಡದ ಗಣೇಶಪ್ಪ, ಕಕ್ಕರಗೊಳ್ಳ ಕಲ್ಲಿಂಗಪ್ಪ, ಬಾತಿ ವೀರೇಶ್ ದೊಗ್ಗಳ್ಳಿ, ಶಿರಮನಹಳ್ಳಿ ಎ ಎಂ ಮಂಜುನಾಥ, ಕಕ್ಕರಗೊಳ್ಳ ಸಿದ್ದಲಿಂಗಪ್ಪ, ಕಲ್ಪನಳ್ಳಿ ರೇವಣಸಿದ್ದಪ್ಪ ಮುಂತಾದವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+