Davangere Lockup Death: ಪೊಲೀಸ್ ಕಸ್ಟಡಿಯಲ್ಲಿ ಆರೋಪಿ ಸಾವು: ಪೊಲೀಸ್ ಠಾಣೆಯ ಕಿಟಕಿ ವಾಹನದ ಗಾಜು ಪೀಸ್ ಪೀಸ್
ದಾವಣಗೆರೆ ಮೇ 25: ಒಸಿ(ಮಟ್ಕಾ) ಆಡಿಸುತ್ತಿದ್ದ ಎನ್ನುವ ಆರೋಪದಲ್ಲಿ ಬಂಧಿತನಾದ ಆರೋಪಿ ಬಂಧಿಸಿದ ಕೆಲವೇ ಗಂಟೆಗಳಲ್ಲಿ ಮರಣಹೊಂದಿದ್ದಾನೆ. ಇದನ್ನು ಲಾಕಪ್ ಡೆತ್ ಎಂದು ಆರೋಪಿಸಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತರ ಗುಂಪು ದಾಳಿ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದೆ.
ಹೌದು... ಶುಕ್ರವಾರ (ಮೇ 24) ಸಂಜೆ ಚನ್ನಗಿರಿ ಠಾಣೆಯ ಪೊಲೀಸರು ಟಿಪ್ಪು ನಗರ ನಿವಾಸಿ ಆದಿಲ್ (30) ಎಂಬಾತನನ್ನು ಬಂಧಿಸಿದ್ದರು. ಬಂಧಿಸಿ ಠಾಣೆಗೆ ಕರೆ ತಂದ ತಕ್ಷಣ ಆತ ಮೂರ್ಛೆ ಹೋಗಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆರೋಪಿ ಬದುಕುಳಿದಿಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದಾಗಿ ಕೋಪಗೊಂಡ ಸುಮಾರು ನೂರು ಜನರಿದ್ದ ಉದ್ರಿಕ್ತ ಗುಂಪು ಪೊಲೀಸ್ ಠಾಣೆಯ ಮೇಲೆ ರಾತ್ರಿ ಏಕಾಏಕಿ ದಾಳಿ ಮಾಡಿದೆ.

ಆದಿಲ್ ನನ್ನು ಠಾಣೆಯಲ್ಲಿ ಕೊಲ್ಲಲಾಗಿದೆ. ಇದು ಲಾಕಪ್ ಡೆತ್. ಆದಿಲ್ ಸಾವಿಗೆ ಪೊಲೀಸರೇ ಕಾರಣ. ಆದಿಲ್ ಸಾವು ಸಹಜವಾಗಿದ್ದಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಠಾಣಿಗೆ ಕರೆದುಕೊಂಡು ಹೋಗುವ ಮುನ್ನ ಆರೋಪಿ ಆದಿಲ್ ಆರೋಗ್ಯವಾಗಿದ್ದನು ಎಂದು ಕುಟುಂಬ ವಾದಿಸಿದೆ.
ಅನಿರೀಕ್ಷಿತ ದಾಳಿಯಿಂದಾಗಿ ಏಳು ಪೊಲೀಸ್ ವಾಹನಗಳು ಹಾನಿಯಾಗಿವೆ. ಠಾಣೆಯ ಮುಂದಿದ್ದ ಧ್ವಜದ ಕಟ್ಟೆ ಸೇರಿದಂತೆ ಠಾಣೆಯ ಪೀಠೋಪಕರಣಗಳನ್ನು ದ್ವಂಸಗೊಳಿಸಲಾಗಿದೆ. ಉದ್ರಿಕ್ತರು ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಹನ್ನೊಂದು ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಕಳೆದ ದಿನ ರಾತ್ರಿ ನಡೆದ ಘಟನೆಯ ದೃಶ್ಯಗಳು ಠಾಣೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಮಾತನಾಡಿದ ದಾವಣಗೆರೆ ಎಸ್್ಪಿ ಉಮಾ ಪ್ರಶಾಂತ್, 'ಆರೋಪಿ ಆದಿಲ್ ಕುಸಿದು ಬಿದ್ದ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೇಳು ನಿಮಿಷ ಕೂಡ ಹಾದಿಯಲ್ಲಿ ಕಳೆದಿಲ್ಲ. ನಮ್ಮಲ್ಲೂ ಸಿಸಿಕ್ಯಾಮರಾ ಇದೆ. ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ. ತನಿಖೆ ನಡೆಸುತ್ತಿದ್ದೇವೆ. ಮರಣೋತ್ತರ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ನಂತರವಷ್ಟೇ ಸತ್ಯಾಸತ್ಯತೆಯ ಬಗ್ಗೆ ಹೇಳಲು ಸಾಧ್ಯ' ಎಂದರು.
ಆದಿಲ್ ತಂದೆ ಖಲೀಮ್ ಉಲ್ಲಾ ಇದು ಲಾಕಪ್ ಡೆತ್ ಎಂದು ಆರೋಪಿಸಿದ್ದಾರೆ. ಜೊತೆಗೆ ಅವರು ದೂರನ್ನೂ ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಆರೋಪಿಗೆ ಲೋ ಬಿಪಿ ಆಗಿತ್ತು ಎಂದು ಹೇಳಲಾಗುತ್ತದೆ. ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ನುಗ್ಗಿ ಸಿಕ್ಕ ಸಿಕ್ಕ ವಸ್ತುಗಳನ್ನು ನಾಶ ಮಾಡಿದ್ದಾರೆ. ಪೊಲೀಸರಿಗೆ ಗಾಯಗಳಾಗಿವೆ. ಎಲ್ಲದರ ತನಿಖೆ ಬಳಿಕ ನಾವು ನಿಸ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ಉಮಾ ಅವರು ಹೇಳಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications