ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇಂದ್ರ ಸಚಿವ ಸುರೇಶ್ ಅಂಗಡಿಯಿಂದ ಸಾಮಾಜಿಕ ಅಂತರ ಉಲ್ಲಂಘನೆ

|
Google Oneindia Kannada News

ದಾವಣಗೆರೆ, ಜೂನ್ 26: ದಾವಣಗೆರೆಯ ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡುವ ವೇಳೆ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯಿಂದ ಸಾಮಾಜಿಕ ಅಂತರ ಉಲ್ಲಂಘನೆಯಾಗಿದೆ.

Recommended Video

Why do we need to import even Ganesha idol from China : Nirmala sitharaman | Oneindia Kannada

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸೇರಿ ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಗುಂಪು ಗುಂಪಾಗಿ ಸೇರಿದ್ದಾರೆ. ಕೊರೊನಾ ವೈರಸ್ ಹಾಟ್ ಸ್ಪಾಟ್ ನಗರದಲ್ಲಿಯೇ ಈ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ಖಾಸಗಿ ಲ್ಯಾಬ್ ಎಡವಟ್ಟು: 6 ದಿನದ ಶಿಶು ಸಾವುದಾವಣಗೆರೆಯಲ್ಲಿ ಖಾಸಗಿ ಲ್ಯಾಬ್ ಎಡವಟ್ಟು: 6 ದಿನದ ಶಿಶು ಸಾವು

ರೈಲ್ವೆ ನಿಲ್ದಾಣಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಕಾಮಗಾರಿಯ ವೇಗ ಮತ್ತು ಗುಣಮಟ್ಟವನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಣೆಯಲ್ಲಿ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕೂಡ ಭಾಗಿಯಾಗಿದ್ದರು.

Davanagere: Social Distance Violation By Union Minister Suresh Angadi

ಇದೇ ಸಂದರ್ಭದಲ್ಲಿ ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನಕ್ಕೆ ರೆಕಮೆಂಡ್ ಮಾಡ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಸುರೇಶ್ ಅಂಗಡಿ, ಅದು ಮುಖ್ಯಮಂತ್ರಿ ವ್ಯಾಪ್ತಿಗೆ ಸೇರಿದ್ದು, ಅವರ ವಿವೇಚನೆ ಬಿಟ್ಟ ವಿಚಾರವೆಂದು ಜಾರಿಕೊಂಡರು.

Davanagere: Social Distance Violation By Union Minister Suresh Angadi

ದಾವಣಗೆರೆ: ಮದುವೆಗೆ ಹೋದವರ ಎದೆಯಲ್ಲಿ ಈಗ ಢವ ಢವ!ದಾವಣಗೆರೆ: ಮದುವೆಗೆ ಹೋದವರ ಎದೆಯಲ್ಲಿ ಈಗ ಢವ ಢವ!

ಪೆಟ್ರೋಲ್, ಡೀಸೆಲ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ, ಅದು ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಬಿಟ್ಟದ್ದು, ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಆಧರಿಸಿ ನಿರ್ಧರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದರು.

English summary
Union Railway Minister Suresh Angadi violated the social gap while Railway station work Inspection in Davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X