ವಿದೇಶದಲ್ಲಿ ದಾವಣಗೆರೆ ಟೆಕ್ಕಿ ದಂಪತಿ ಅಸ್ವಾಭಾವಿಕ ಸಾವು: ಡೆತ್ ನೋಟ್ ಪತ್ತೆ
ದಾವಣಗೆರೆ, ಆಗಸ್ಟ್ 25: ಅಮೆರಿಕಾದ ಮೇರಿ ಲ್ಯಾಂಡ್ ರಾಜ್ಯದ ಬಾಲ್ತಿಮೇರ್ನಲ್ಲಿ ದಾವಣಗೆರೆ ಮೂಲದ ಮೂವರ ಸಾವಿಗೆ ಕಾರಣ ಏನೆಂಬುದು ದಿನ ಕಳೆದಂತೆ ಸ್ಪಷ್ಟವಾಗತೊಡಗಿದೆ. ಬಾಲ್ಟಿಮೋರ್ ಕೌಂಟಿ ಪೊಲೀಸರು ಸದ್ಯಕ್ಕೆ ಕುಟುಂಬಸ್ಥರಿಗೆ ನೀಡಿರುವ ಮಾಹಿತಿ ಪ್ರಕಾರ ಮಾನಸಿಕ ಖಿನ್ನತೆಯಿಂದ ಯೋಗೇಶ್ ಹೊನ್ನಾಳ ಬಳಲುತ್ತಿದ್ದರು.
ಇದೇ ಕಾರಣಕ್ಕೆ ಪತ್ನಿ ಪ್ರತಿಭಾ ಹೊನ್ನಾಳ ಹಾಗೂ ಪುತ್ರ ಯಶ್ ಹೊನ್ನಾಳನಿಗೆ ಶೂಟ್ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವುದಾಗಿ ಸದ್ಯಕ್ಕೆ ಮಾಹಿತಿ ನೀಡಿದ್ದಾರೆ. ಇನ್ನು ಸಂಬಂಧಿಕರೊಬ್ಬರು ಬಾಲ್ತಿಮೇರ್ಗೆ ಹೋದರೂ ಬಾಲ್ಟಿಮೋರ್ ಪೊಲೀಸರು ಮಾತ್ರ ಯಾವುದೇ ನಿಖರತೆ ಕಾರಣ ಹೇಳಿಲ್ಲ. ಈ ಹಿನ್ನೆಲೆಯಲ್ಲಿ ಯೋಗೇಶ್ ಹೊನ್ನಾಳ ತಾಯಿ ಶೋಭಾ ಹೊನ್ನಾಳ ಹಾಗೂ ಅವರ ಸಹೋದರ ನಿನ್ನೆ ಚೆನ್ನೈನಿಂದ ಅಮೆರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಸದ್ಯಕ್ಕೆ ಅಲ್ಲಿಗೆ ಹೋಗಿ ತಲುಪಿದ್ದು, ಪೊಲೀಸರು ಸ್ಪಷ್ಟ ಮಾಹಿತಿ ಕೊಡಲಿದ್ದಾರೆ.

ಅಮೆರಿಕಾ ಕಾನೂನಿನ ಪ್ರಕಾರ ಸಂಬಂಧಿಕರಿಗೆ ಯಾವುದೇ ಮಾಹಿತಿ ನೀಡುವುದಿಲ್ಲ. ತಂದೆ, ತಾಯಿ, ಸಹೋದರ ಸೇರಿದಂತೆ ಕುಟುಂಬಸ್ಥರಿಗೆ ಸ್ಪಷ್ಟ ಮಾಹಿತಿ ನೀಡಲಾಗುತ್ತದೆ. ಈ ಕಾರಣಕ್ಕಾಗಿ ಚೆನ್ನೈನಿಂದ ಯೋಗೇಶ್ ಹೊನ್ನಾಳ ತಾಯಿ ಹಾಗೂ ಅವರ ಸಹೋದರ ಪ್ರಯಾಣ ಬೆಳೆಸಿರುವುದಾಗಿ ಕುಟುಂಬದ ಮೂಲಗಳು ಸ್ಪಷ್ಟಪಡಿಸಿವೆ.
ಡೆತ್ ನೋಟ್ ಪತ್ತೆ
ಬಾಲ್ಟಿಮೋರ್ ಕೌಂಟಿ ಪೊಲೀಸರು ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ. ಸಂಬಂಧಿಕರಿಗೆ ಇದನ್ನು ಕೊಟ್ಟಿಲ್ಲ. ಕುಟುಂಬಸ್ಥರಿಗೆ ಮಾತ್ರ ಹಸ್ತಾಂತರ ಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಮೂವರ ಪಾಸ್ ಪೋರ್ಟ್, ಬೆಂಗಳೂರಿನಲ್ಲಿ ಖರೀದಿಸಿದ್ದ ಫ್ಲ್ಯಾಟ್ ಸೇರಿದಂತೆ ಇತರೆ ಆಸ್ತಿಗೆ ಸಂಬಂಧಿತ ದಾಖಲೆಗಳು, ಮನೆಯಲ್ಲಿನ ಪರಿಕರಗಳು ಸೇರಿದಂತೆ ಎಲ್ಲವನ್ನೂ ಹಸ್ತಾಂತರ ಮಾಡಲಿದ್ದಾರೆ. ಡೆತ್ ನೋಟ್ನಲ್ಲಿ ಏನೆಲ್ಲಾ ಬರೆಯಲಾಗಿದೆ ಎಂಬುದರ ಬಗ್ಗೆ ಮಾಹಿತಿ ಸ್ಪಷ್ಟ ಆಗಿಲ್ಲ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಯೋಗೇಶ್ ಹೊನ್ನಾಳ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬುದು ಗೊತ್ತಾಗಿದೆ.

ಎರಡೂ ಕುಟುಂಬದವರು ಹೇಳುವ ಪ್ರಕಾರ ಪತಿ ಹಾಗೂ ಪತ್ನಿ ನಡುವೆ ಯಾವುದೇ ಕಲಹ ಇರಲಿಲ್ಲ. ಇಬ್ಬರೂ ಅನೋನ್ಯವಾಗಿದ್ದರು. ಕುಟುಂಬದ ಅಂದ ಮೇಲೆ ಸಣ್ಣಪುಟ್ಟ ಗಲಾಟೆ ಆಗಿರಬಹುದು. ಇಂಥ ಅನಾಹುತ ಆಗುವಷ್ಟು ಯಾವುದೇ ತೊಂದರೆ ಇರಲಿಲ್ಲ. ಆದರೆ, ಅಲ್ಲಿ ಏನಾಯ್ತು ಎನ್ನುವುದು ಇಲ್ಲಿ ಕುಳಿತು ಹೇಳಲು ಆಗದು. ಡೆತ್ ನೋಟ್ ನಲ್ಲೇನಿದೆ? ಮಾನಸಿಕ ಖಿನ್ನತೆಗೆ ಒಳಗಾಗುವಂಥದ್ದು ಏನಾಗಿತ್ತು..? ಬೇರೆ ಯಾವ ಕಾರಣ ಇರಬಹುದು ಎಂಬುದು ಅಮೆರಿಕಾ ಪೊಲೀಸರು ಸ್ಪಷ್ಟಪಡಿಸಿದ ಬಳಿಕ ಗೊತ್ತಾಗಲಿದೆ. ಅದೇ ರೀತಿಯಲ್ಲಿ ಯೋಗೇಶ್ ಹೊನ್ನಾಳ ತಾಯಿ ಕೂಡ ಅಲ್ಲಿಗೆ ಹೋಗಿದ್ದರೆ. ಇಲ್ಲಿಗೆ ಬಂದ ಬಳಿಕ ಸಾವಿಗೆ ಕಾರಣವೇನು ಎಂಬುದು ಸ್ಪಷ್ಟವಾಗುವುದಂತೂ ನಿಜ.
ಮೃತದೇಹ ಹಸ್ತಾಂತರಕ್ಕೆ ತಯಾರು
ಯೋಗೇಶ್ ಹೊನ್ನಾಳ, ಪ್ರತಿಭಾ ಹೊನ್ನಾಳ, ಯಶ್ ಹೊನ್ನಾಳ ಮೃತದೇಹಗಳನ್ನು ಅಮೆರಿಕಾದಿಂದ ದಾವಣಗೆರೆಗೆ ಕರೆತರಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯೋಗೇಶ್ ಹೊನ್ನಾಳ ತಾಯಿ ಹಾಗೂ ಸಹೋದರ ಅಮೆರಿಕಾಕ್ಕೆ ಪ್ರಯಾಣ ಬೆಳೆಸಿರುವುದರಿಂದ ಅಮೆರಿಕಾದಲ್ಲಿನ ಕಾನೂನು ಹಾಗೂ ನಿಯಮದಂತೆ ಮೃತದೇಹಗಳ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಅಮೆರಿಕಾದಲ್ಲಿರುವ ಯೋಗೇಶ್ ಹೊನ್ನಾಳ ಸಂಬಂಧಿಕರು ಕೊಟ್ಟಿರುವ ಮಾಹಿತಿ ಪ್ರಕಾರ ಸೋಮವಾರ ಅಥವಾ ಮಂಗಳವಾರ ಮೃತದೇಹಗಳನ್ನು ತರಲಾಗುವುದು. ಇಲ್ಲದಿದ್ದರೆ ಸ್ವಲ್ಪ ತಡವಾದರೂ ಆಗಬಹುದು. ಶೋಭಾ ಹಾಗೂ ಅವರ ಪುತ್ರ ತೆರಳಿರುವುದರಿಂದ ಭಾರತಕ್ಕೆ ಮೃತದೇಹಗಳನ್ನು ತರುವುದು ಖಚಿತ ಎಂದು ಹೇಳಲಾಗುತ್ತಿದೆ.
ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದ ಜಿ. ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಅವರು ಮೃತದೇಹಗಳನ್ನು ತರಲು ಎಲ್ಲಾ ರೀತಿಯ ಪ್ರಯತ್ನ ಹಾಗೂ ಸಹಕಾರ ನೀಡಿದ್ದು, ಐದಾರು ದಿನಗಳೊಳಗೆ ಮೃತದೇಹಗಳು ದಾವಣಗೆರೆ ತರಲಾಗುತ್ತಿದೆ.
ಅಮೆರಿಕಾದಲ್ಲಿ ಮೂವರ ಸಾವಿನ ಸುದ್ದಿ ತಿಳಿದ ದಿನದಿಂದಲೂ ಕುಟುಂಬಸ್ಥರು ಹಾಗೂ ಸಂಬಂಧಿಕರು ಮೃತದೇಹಗಳನ್ನು ದಾವಣಗೆರೆಗೆ ತರಿಸಿಕೊಡುವಂತೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ್ದ ಸಿದ್ದರಾಮಯ್ಯ ಅವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಒಟ್ಟಾರೆ ಈಗ ಮೃತದೇಹಗಳನ್ನು ದಾವಣಗೆರೆಗೆ ತರಲಾಗುತ್ತಿದ್ದು, ಸಾವಿಗೆ ಮಾನಸಿಕ ಖಿನ್ನತೆ ಎಂದು ಹೇಳಲಾಗುತ್ತಿದೆಯಾದರೂ ಮಾನಸಿಕ ಖಿನ್ನತೆಗೆ ಯಾಕೆ ಒಳಗಾಗಿದ್ದರು ಎಂಬುದು ಬಹಿರಂಗವಾಗಬೇಕಿದೆ ಅಷ್ಟೇ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications