Deepavali 2023: ದಾವಣಗೆರೆಯಲ್ಲಿ ಪಟಾಕಿ ಮಳಿಗೆ ಮಾಲೀಕರಿಗೆ ಜಿಲ್ಲಾಧಿಕಾರಿಯಿಂದ ಪ್ರಮುಖ ಸೂಚನೆಗಳು
ದಾವಣಗೆರೆ, ಅಕ್ಟೋಬರ್, 26: ದೀಪಾವಳಿ ಹಬ್ಬದ ಸಮಯದಲ್ಲಿ ಸಾರ್ವಜನಿಕವಾಗಿ ಯಾವುದೇ ಅವಘಡಗಳು ಸಂಭವಿಸದಂತೆ ಜನರು ಹಸಿರು ಪಟಾಕಿ ಬಳಸಿ ಪರಿಸರ ಸ್ನೇಹಿಯಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ.ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಮಾರಾಟದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೀಪಾವಳಿ ಹಬ್ಬದ ಸಮಯದಲ್ಲಿ ಸಾರ್ವಜನಿಕವಾಗಿ ಯಾವುದೇ ಅವಘಡಗಳು ಸಂಭವಿಸದಂತೆ ಜನರು ಸಂಭ್ರಮ, ಸಂತೋಷದಿಂದ ಹಬ್ಬ ಆಚರಿಸಬೇಕಾಗಿದೆ. ಈ ಬಾರಿಯ ಹಬ್ಬದಲ್ಲಿ ಹೆಚ್ಚು ಶಬ್ಧ ಬರುವಂತಹ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಟಾಕಿ ಮಾರಾಟಗಾರರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು ಮತ್ತು ಮಾರಾಟವನ್ನು ನಿಗಧಿತ ಪ್ರದೇಶದಲ್ಲಿಯೇ ಮಾರಾಟ ಮಾಡಬೇಕೆಂದು ಸೂಚನೆ ನೀಡಿದರು.
ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ತಂಡವನ್ನು ರಚಿಸಲಾಗಿದ್ದು, ಅವರು ನೀಡಿದ ವರದಿಯನ್ವಯ ಸ್ಥಳವನ್ನು ಗುರುತಿಸಿ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ದಾವಣಗೆರೆ ನಗರ ಸ್ಮಾರ್ಟ್ ಸಿಟಿಯಾಗಿದ್ದು, ಹೈಸ್ಕೂಲ್ ಮೈದಾನದಲ್ಲಿ ಈ ಹಿಂದೆ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಖಾಸಗಿ ಬಸ್ ನಿಲ್ದಾಣ, ಕೆ. ಎಸ್. ಆರ್. ಟಿ.ಸಿ.ಬಸ್ ನಿಲ್ದಾಣ, ಶಾಲೆ ಇರುವುದರಿಂದ ಮತ್ತು ಮೈದಾನವು ಚಿಕ್ಕದಾಗುವುದರಿಂದ ಇಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲು ಮಾರ್ಗಸೂಚಿಯನ್ವಯ ಅವಕಾಶ ಇಲ್ಲದ ಹಿನ್ನೆಲೆ ಹರಿಹರ ರಸ್ತೆಯ ಜೆ.ಎಂ.ಐ.ಟಿ ಪಕ್ಕದ ಖಾಸಗಿ ಜಮೀನು ಅಥವಾ ಸೂಕ್ತವಾದ ಸ್ಥಳವನ್ನು ಗುರುತಿಸಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ವಿವವರಿಸಿದರು.
ಇನ್ನು ಹರಿಹರ, ಹೊನ್ನಾಳಿ, ಮೆಬೆನ್ನೂರು, ನ್ಯಾಮತಿ, ಚನ್ನಗಿರಿ, ಜಗಳೂರು, ನಲ್ಲೂರು ಗ್ರಾಮದಲ್ಲಿ ಪಟಾಕಿ ಮಾರಾಟಕ್ಕೆ ಪ್ರತ್ಯೇಕವಾದ ಸ್ಥಳವನ್ನು ಗುರುತಿಸಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು.
ನಿಗದಿತ ಅವಧಿಯಲ್ಲಿ ಪರವಾನಗಿ
ಪಟಾಕಿ ಮಾರಾಟಕ್ಕೆ ಪರವಾನಗಿ ಪಡೆಯುವುದು ಕಡ್ಡಾಯವಾಗಿದ್ದು ಜಿ.ಎಸ್.ಟಿ. ಹೊಂದಿರಬೇಕು. ಪರವಾನಗಿಯನ್ನು ಅಡೆತಡೆಗಳಿಲ್ಲದೆ ನೀಡಲು ಕ್ರಮ ವಹಿಸಲಾಗುತ್ತದೆ. ಪರವಾನಗಿ ಪಡೆದವರು ನಿಗಧಿತ ಸ್ಥಳದಲ್ಲಿ ಮಾರಾಟ ಮಾಡಲು ನವಂಬರ್ 9 ರಿಂದ 15 ರವರೆಗೆ ಮಾತ್ರ ಪಟಾಕಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸುರಕ್ಷತೆ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು.
ಪಟಾಕಿ ಮಾರಾಟ ಮಳಿಗೆಯನ್ನು 10*10 ರ ಅಳತೆಯಲ್ಲಿ ನಿರ್ಮಿಸಬೇಕು ಹಾಗೂ ಪಟಾಕಿ ಮಾರಾಟಕ್ಕೆ ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಅವಕಾಶ ಕಲ್ಪಿಸಲಾಗಿದೆ. ಜನನಿಬಿಡ ಪ್ರದೇಶಗಳಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಬಾರದು ಎಂದರು. ಇನ್ನು ಹಬ್ಬದ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸಿಡಿಸುವುದರಿಂದ ಉಂಟಾಗುವ ಶಬ್ಧಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಹಸಿರು ಪಟಾಕಿಗೆ ಉತ್ತೇಜನ ನೀಡಲಾಗಿದೆ ಎಂದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಮನಿ ತಿಮ್ಮಣ್ಣ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಮಲ್ಲನಾಯ್ಕ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ.ಅಶ್ವತ್ ಎಂ.ಬಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ ಕೆ.ಆರ್, ಪರಿಸರ ಅಧಿಕಾರಿ ಲಕ್ಷ್ಮಿಕಾಂತ್ ಹಾಗೂ ಪಟಾಕಿ ಮಾರಾಟಗಾರರು ಉಪಸ್ಥಿತರಿದ್ದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications