ದಾವಣಗೆರೆ ಖಾಸಗಿ ಬಸ್ ನಿಲ್ದಾಣಕ್ಕೆ ಚಿಂದೋಡಿ ಲೀಲಾ ಹೆಸರಿಡಿ, ಉಗ್ರ ಹೋರಾಟದ ಎಚ್ಚರಿಕೆ
ದಾವಣಗೆರೆ, ಡಿಸೆಂಬರ್, 07: ದಾವಣಗೆರೆಯಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಖ್ಯಾತ ನಟಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಚಿಂದೋಡಿ ಲೀಲಾರ ಹೆಸರು ಇಡಬೇಕು ಎಂದು ಸಮಗ್ರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಅವಿನಾಶ್ ಬಿ.ಅಭಿ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಳು, ಚುನಾಯಿತ ಜನಪ್ರತಿನಿಧಿಗಳು ಕ್ಷೇತ್ರದ ಅಭಿವೃದ್ಧಿಗೆ ಮನೆಯಿಂದ ಹಣ ತಂದಿಲ್ಲ. ಜನರ ತೆರಿಗೆ ಹಣದಿಂದ ಅಭಿವೃದ್ಧಿ ಮಾಡಿದ್ದಾರೆ. ಹಾಗಿದ್ದರೂ ಅವರವರ ಮನೆಯವರ, ತಂದೆ, ತಾಯಿ ಹೆಸರು ಇಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ, ಸ್ಮಾರ್ಟ್ ಸಿಟಿ ಅಧಿಕಾರಿಗಳು, ನಗರಾಭಿವೃದ್ಧಿ ಸಚಿವರು ಸೇರಿದಂತೆ ಇತರೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗುವುದು. ಇದಕ್ಕೆ ಸ್ಪಂದನೆ ಸಿಗದಿದ್ದರೆ ಬಸ್ ನಿಲ್ದಾಣ ಉದ್ಘಾಟನೆ ವೇಳೆ ಉಗ್ರ ಹೋರಾಟ ನಡೆಸಲಾಗುವುದು. ಉದ್ಘಾಟನೆ ವೇಳೆ ಚಿಂದೋಡಿಲೀಲಾ ಹೆಸರು ಹೊರತುಪಡಿಸಿ ಬೇರೆ ಯಾವುದೇ ಹೆಸರು ಇಟ್ಟರೆ ನಾಮಫಲಕಕ್ಕೆ ಮಸಿ ಬಳಿಯಲಾಗುವುದು. ಅಲ್ಲದೇ ಕಪ್ಪು ಬಾವುಟ ಪ್ರದರ್ಶಿಸಲಾಗುವುದು. ಈ ವೇಳೆ ಅಹಿತಕರ ಘಟನೆ ನಡೆದರೆ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಚಿಂದೋಡಿ ಲೀಲಾ ಹೆಸರಿಡದಿದ್ರೆ ಹೋರಾಟ
ದಾವಣಗೆರೆಯಲ್ಲಿ 1937ರಲ್ಲಿ ಜನಿಸಿ 1949ರಲ್ಲಿ ರಂಗಭೂಮಿ ಕಲಾವಿದೆಯಾಗಿ ಜನ ಮನ ಗೆದ್ದ, ಸಾವಿರಾರು ನಾಟಕಗಳ ಮೂಲಕ ಕರ್ನಾಟಕಕ್ಕೆ ಪ್ರಖ್ಯಾತಿಯಾಗಿ ಚಿರಪರಿತರಾಗಿರುವ ಲೀಲಾ ಅವರು ಸುಮಾರು 17 ಕನ್ನಡ ಚಲನಚಿತ್ರಗಳಲ್ಲಿ ನಾಯಕಿ ನಟಿಯಾಗಿ ಅಭಿನಯಿಸಿದ್ದಾರೆ. ಆ ಕಲೆಯನ್ನು ಗುರುತಿಸಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ 1989ರಲ್ಲಿ ಕರ್ನಾಟಕ ಸರ್ಕಾರ ನೀಡುವ "ರಾಜ್ಯೋತ್ಸವ ಪ್ರಶಸ್ತಿ"ಗೆ ಆಯ್ಕೆಯಾಗಿದ್ದರು. 1988ರಲ್ಲಿ ಕೇಂದ್ರ ಸರ್ಕಾರದಿಂದ "ಪದ್ಮಶ್ರೀ ಪ್ರಶಸ್ತಿ" ಪುರಸ್ಕಾರ ನೀಡಿ ಗೌರವಿಸಿದೆ ಎಂದು ತಿಳಿಸಿದರು.

1991ರಲ್ಲಿ ಮರಾಠಿಗರ ಪುಂಡಾಟಿಕೆ
ಇನ್ನು 1991ರಲ್ಲಿ ಮಹಾರಾಷ್ಟ್ರದಲ್ಲಿ ಮರಾಠಿಗರ ಪುಂಡಾಟಿಕೆನ್ನು ಬಗ್ಗು ಬಡಿಯುವ ಮೂಲಕ ಬೆಳಗಾವಿಯ ಕಾಸಬ್ಲಾಗ್ ವಾರ್ಡ್ನ ಮಹಾನಗರ ಪಾಲಿಕೆಯ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಮರಾಠಿಗರ ವಿರುದ್ಧ ಕನ್ನಡಿಗರ ಕಂಪನ್ನು ಸಾರಿ, ಕನ್ನಡಗರಿ ಹೆಮ್ಮೆಯನ್ನು ತಂದುಕೊಟ್ಟಿದ್ದರು. ಆ ಚುನಾವಣೆಯಲ್ಲಿ ಜಯಶೀಲರಾಗಿ ಐದು ವರ್ಷಗಳ ಕಾಲ ಅಧಿಕಾರ ನಡೆಸಿದ್ದರು. ನಂತರ ಅವರು ಕೆಬಿಆರ್ ಡ್ರಾಮಾ ನಾಟಕ ಕಂಪನಿಯನ್ನು ಕಟ್ಟಿ ಕನ್ನಡದ ನಾಟಕಗಳನ್ನು ನಡೆಸಲು ಮೀಸಲಾಗಿಟ್ಟಿದ್ದರು.

ಸಮಗ್ರ ರಕ್ಷಣಾ ವೇದಿಕೆ ಇಟ್ಟ ಬೇಡಿಕೆ ಏನು?
ಇಷ್ಟೆಲ್ಲಾ ಸಾಧನೆ ಮಾಡಿರುವ ಚಿಂದೋಡಿ ಲೀಲಾ ಅವರ ಹೆಸರು ಯಾವುದೇ ಮುಖ್ಯ ರಸ್ತೆಗೆ ಹಾಗೂ ವೃತ್ತಕ್ಕೆ ನಾಮಕರಣ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ನೂತನವಾಗಿ ಪುನರ್ ನಿರ್ಮಾಣ ಆಗುತ್ತಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಚಿಂದೋಡಿ ಲೀಲಾ ಅವರ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಯಾರೆಲ್ಲ ಭಾಗಿ?
ಸುದ್ದಿಗೋಷ್ಠಿಯಲ್ಲಿ ಮಾಲಾ ನಾಗರಾಜ್, ಶಾಂತಮ್ಮ, ಎಸ್.ಗಣೇಶ್, ಬಿ.ಹೆಚ್.ಮಂಜುನಾಥ್, ಆನಂದ ಇಟ್ಟಿಗುಡಿ, ಅಕ್ಬರ್ ಭಾಷಾ, ಎನ್.ಎಸ್. ಈರಣ್ಣ, ರಾಜು ಅನೆಕೊಂಡ ಸೇರಿದಂತೆ ಮತ್ತಿತರರು ಹಾಜರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications