ದಾವಣಗೆರೆ : ಮಹಿಳೆಯನ್ನು ಮಂಚಕ್ಕೆ ಕರೆದ ಮ್ಯಾನೇಜರ್ ಮನೆಗೆ
ದಾವಣಗೆರೆ, ಅಕ್ಟೋಬರ್ 16 : ಸಾಲ ಕೊಡಲು ಮಹಿಳೆಯನ್ನು ಮಂಚಕ್ಕೆ ಕರೆದಿದ್ದ ಉದ್ಯೋಗಿಯನ್ನು ಡಿಎಚ್ಎಫ್ಎಲ್ ಸೇವೆಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ವಜಾಗೊಳಿಸಿದೆ. ದಾವಣಗೆರೆಯಲ್ಲಿ ನಡೆದ ಈ ಘಟನೆ ಸುದ್ದಿ ವೈರಲ್ ಆಗಿತ್ತು.
ಡಿಎಚ್ಎಫ್ಎಲ್ ಬ್ಯಾಂಕ್ ಮ್ಯಾನೇಜರ್ ದೇವಣ್ಣನನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಮಂಗಳವಾರ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ. ಇಂತಹ ಘಟನೆಯನ್ನು ಖಂಡಿಸುವುದಾಗಿಯೂ ಬ್ಯಾಂಕ್ ಹೇಳಿದೆ.
ವಿಡಿಯೋ: ಸರಸಕ್ಕೆ ಕರೆದ ಬ್ಯಾಂಕ್ ಮ್ಯಾನೇಜರ್ ಗೆ ಯದ್ವಾತದ್ವಾ ಏಟು!
ದಾವಣಗೆರೆಯ ಡಿಎಚ್ಎಫ್ಎಲ್ ಬ್ಯಾಂಕ್ ಮ್ಯಾನೇಜರ್ ದೇವಣ್ಣ ಸಾಲ ಕೊಡುವುದಾಗಿ ಹೇಳಿ ಮಹಿಳೆಯನ್ನು ಮಂಚಕ್ಕೆ ಕರೆದಿದ್ದ. ಮಹಿಳೆ ಮಹಿಳಾ ಸಂಘಟನೆಗಳ ಜೊತೆ ಸೇರಿ ದೇವಣ್ಣನಿಗೆ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.
#ಮಿಟೂ ಎನ್ನುತ್ತಿರುವ ಪತ್ರಕರ್ತೆಯರು ಮುಗ್ಧರೇನಲ್ಲ: ಬಿಜೆಪಿ ನಾಯಕಿ
ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆ ಬಳಿಕ ಮ್ಯಾನೇಜರ್ನನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.
ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಿರುವ ರೇಷ್ಮಾ
ಬ್ಯಾಂಕ್ ಮ್ಯಾನೇಜರ್ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಪೊಲೀಸರು ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸುತ್ತಿದ್ದಾರೆ.