ದಾವಣಗೆರೆ ಮಹಾನಗರ ಪಾಲಿಕೆಯ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ವಿಪಕ್ಷ ಖಂಡನೆ
ದಾವಣಗೆರೆ, ಜುಲೈ 7: ದಾವಣಗೆರೆ ಮಹಾನಗರ ಪಾಲಿಕೆಗೆ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆಗೆ ಬಿಡುಗಡೆಯಾದ 125 ಕೋಟಿ ರೂ. ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಆರೋಪಿಸಿದರು.
ಕಾಂಗ್ರೆಸ್ ಸದಸ್ಯರು ಪ್ರತಿನಿಧಿಸುವ ವಾರ್ಡ್ ಗಳಿಗೆ ಅತ್ಯಲ್ಪ ಅನುದಾನ ನೀಡಲಾಗಿದೆ, ಅಲ್ಲದೇ ಕ್ರಿಯಾ ಯೋಜನೆ ರೂಪಿಸುವಲ್ಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ಗಮನಕ್ಕೂ ತಂದಿಲ್ಲ. ಆದ್ದರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕ್ರಿಯಾ ಯೋಜನೆಗೆ ಅನುಮೋದನೆ ನೀಡಬಾರದೆಂದು ಒತ್ತಾಯಿಸಿ ಪತ್ರ ಮೂಲಕ ಮನವಿ ಮಾಡಿದ್ದೇವೆಂದು ಎ.ನಾಗರಾಜ್ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂದಿನ 4 ವರ್ಷಗಳ ಅವಧಿಗೆ 125 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಆದರೆ ಅನುಮೋದನೆ ಸಲ್ಲಿಕೆಯಾಗಿರುವ ಕ್ರಿಯಾ ಯೋಜನೆಯಲ್ಲಿ ಕೆಲವು ವಾರ್ಡ್ ಗಳಿಗೆ ಅನುದಾನವನ್ನೇ ನೀಡಿಲ್ಲ. ಹಿಂದುಳಿದ ವಾರ್ಡ್ ಗಳಾಗಿರುವ 5, 16, 26, 36 ಕ್ಕೆ ಅನುದಾನ ನೀಡಿಲ್ಲ ಎಂದು ಹೇಳಿದರು.

ಮೇಯರ್ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು
ದಾವಣಗೆರೆ ಪಾಲಿಕೆಯಲ್ಲಿ 45 ವಾರ್ಡ್ ಗಳಿದ್ದು ಎಲ್ಲಾ ವಾರ್ಡ್ ಗಳಿಗೂ ಸರಿಸಮಾನವಾಗಿ ಅಂದರೆ 1.65 ಕೋಟಿ ರೂ. ಹಂಚಿಕೆ ಮಾಡಬೇಕಿತ್ತು. ಆದರೆ ಬಿಜೆಪಿ ಸದಸ್ಯರಿರುವ ಪ್ರತಿಷ್ಠಿತ ವಾರ್ಡ್ ಗಳಿಗೆ ಹೆಚ್ಚು, ಕಾಂಗ್ರೆಸ್ ಸದಸ್ಯರಿರುವ ವಾರ್ಡ್ ಗಳಿಗೆ ಅತ್ಯಲ್ಪ ಅನುದಾನ ಬಿಡುಗಡೆ ಮಾಡುವ ಮೂಲಕ ತಾರತಮ್ಯ ಮಾಡಲಾಗಿದೆ. 15 ದಿನಗಳೊಳಗಾಗಿ ಎಲ್ಲಾ ವಾರ್ಡ್ ಗಳಿಗೂ ಸಮರ್ಪಕವಾಗಿ ಅನುದಾನ ಹಂಚಿಕೆ ಮಾಡದಿದ್ದರೆ ಮೇಯರ್ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಾಸಕ ಶಾಮನೂರು ಶಿವಶಂಕರಪ್ಪ ಅವರ ಗಮನಕ್ಕೆ ತಂದಿಲ್ಲ
ಕ್ರಿಯಾ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅಧ್ಯಕ್ಷತೆಯಲ್ಲಿ ನಗರ ಪ್ರತಿನಿಧಿಸುವ ಸದಸ್ಯರಾದ ಸಂಸದರು, ಶಾಸಕರು ಕಳೆದ ಜೂನ್ 6 ರಂದು ಸಭೆ ನಡೆಸಿದ್ದಾರೆ. ಈ ಸಭೆ ನಡೆಸುವ ಬಗ್ಗೆ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ಗಮನಕ್ಕೆ ತಂದಿಲ್ಲ, ಸಮಿತಿಯ ನಡವಳಿಕೆಗಳಿಗೆ ಶಾಸಕರ ಸಹಿ ಕೂಡ ಮಾಡಿಸದೇ ಮಂಜೂರಾತಿಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.

ಉಳಿದ ವಾರ್ಡ್ ಗಳಿಗೆ 1 ರಿಂದ 3 ಕೋಟಿ ರೂ.
ಕಾಂಗ್ರೆಸ್ ಸದಸ್ಯರಿರುವ ವಾರ್ಡ್ ಗಳಿಗೆ 30 ರಿಂದ 40 ಲಕ್ಷ ರುಪಾಯಿ ಅನುದಾನ ನೀಡಲಾಗಿದೆ ಉಳಿದ ವಾರ್ಡ್ ಗಳಿಗೆ 1 ರಿಂದ 3 ಕೋಟಿ ರೂ. ವರೆಗೂ ಹಂಚಿಕೆ ಮಾಡಲಾಗಿದೆ. ಕೇವಲ 30 ಲಕ್ಷದ ಅನುದಾನದಿಂದ ಯಾವ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಈ ತಾರತಮ್ಯ ಸರಿಪಡಿಸಬೇಕು ಹಾಗೂ ಎಲ್ಲಾ ವಾರ್ಡ್ ಗಳಿಗೂ ಸಮರ್ಪಕ ಅನುದಾನ ಬಿಡುಗಡೆ ಮಾಡಬೇಕು. ಹಾಗಾಗಿ ಈ ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ ನೀಡಬಾರದೆಂದು ಮನವಿ ಮಾಡಿದರು.

ಕಾಂಗ್ರೆಸ್ ಸದಸ್ಯರು ಪ್ರತಿನಿಧಿಸುವ ವಾರ್ಡ್ ಗಳಿಗೆ 20 ಕೋಟಿ ಅನುದಾನ
ದಾವಣಗೆರೆ ಪಾಲಿಕೆಯಲ್ಲಿ 45 ಸದಸ್ಯರಿದ್ದಾರೆ. ಕಾಂಗ್ರೆಸ್ ನ 22 ಸದಸ್ಯರು ಹಾಗೂ ಬಿಜೆಪಿಯ 17 ಜೊತೆಗೆ ಪಕ್ಷೇತರರು 4 ಸದಸ್ಯರಿದ್ದಾರೆ. ನಗರ ವಿಕಾಸ ಯೋಜನೆಯ 125 ಕೋಟಿ ರೂ. ಅನುದಾನದಲ್ಲಿ ಬಿಜೆಪಿ ಸದಸ್ಯರಿರುವ ವಾರ್ಡ್ ಗೆ 51 ಕೋಟಿ 85 ಲಕ್ಷ ಅನುದಾನ ನೀಡಲಾಗಿದೆ. 22 ಕಾಂಗ್ರೆಸ್ ಸದಸ್ಯರು ಪ್ರತಿನಿಧಿಸುವ ವಾರ್ಡ್ ಗಳಿಗೆ 20 ಕೋಟಿ ಅನುದಾನ ನೀಡಲಾಗಿದೆ. ಶಾಸಕರ ಪುತ್ರಿ ಹಾಗೂ ಮೇಯರ್ ವಾರ್ಡ್ ಗಳಿಗೆ ಅತ್ಯಧಿಕ 7 ಕೋಟಿ 90 ಲಕ್ಷ ಅನುದಾನ ನೀಡಲಾಗಿದೆ ಎಂದು ವಿಪಕ್ಷ ನಾಯಕ ಎ.ನಾಗರಾಜ್ ಆರೋಪ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಸೈಯಿದ್ ಚಾರ್ಲಿ, ಮಂಜುನಾಥ್, ಅಬ್ದುಲ್ ಲತೀಫ್, ಉಮೇಶ್, ಇಟ್ಟಿಗುಡಿ ಮಂಜುನಾಥ್, ನಾಗರಾಜ್ ಪಾಮೇನಹಳ್ಳಿ, ಹರೀಶ್ ಬಸಾಪುರ ಇದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications