"ಬಡವರಿಗೆ ನೀಡುವ ಆಹಾರ ಕಿಟ್ ನಲ್ಲೂ ತಾರತಮ್ಯ ಏಕೆ?"
ದಾವಣಗೆರೆ, ಮೇ 25: ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡ ಕಾರ್ಮಿಕರು ಕೆಲಸವಿಲ್ಲದೆ, ಹಣ ಇಲ್ಲದೇ ಜೀವನ ನಡೆಸಲು ಕಷ್ಟವಾಗಿದ್ದು, ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸಿ, ಸರ್ಕಾರದಿಂದ ಘೋಷಣೆ ಮಾಡಿರುವ ಪರಿಹಾರ ಧನವನ್ನು ಒದಗಿಸಿಕೊಡುವಂತೆ ಜಿಲ್ಲಾ ಆಸರೆ ಕಟ್ಟಡ ಅಸಂಘಟಿತ ಕಾರ್ಮಿಕರ ಸಂಘ, ಕಾರ್ಮಿಕ ಇಲಾಖೆಗೆ ಹಾಗೂ ಕಾರ್ಮಿಕ ಸಚಿವರಿಗೆ ಆಗ್ರಹಿಸಿದೆ.
Recommended Video
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ. ಚಂದ್ರಶೇಖರ್, ಜಿಲ್ಲೆಯಲ್ಲಿ ಸುಮಾರು ನಾಲ್ಕು ಸಾವಿರಕ್ಕಿಂತ ಅಧಿಕ ಕಟ್ಟಡ ಕಾರ್ಮಿಕರಿದ್ದು, ಬಡ ಕಾರ್ಮಿಕರು ಕೆಲಸವಿಲ್ಲದೇ ತೊಂದರೆಗೀಡಾಗಿದ್ದಾರೆ. ಬಡಜನರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆಯನ್ನು ಇಲ್ಲಿನ ದಕ್ಷಿಣ ಮತ್ತು ಉತ್ತರದ ಶಾಸಕರಿಬ್ಬರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಕಾರ್ಮಿಕರಿಗೆ ತಲುಪಬೇಕಾದ ಆಹಾರ ಧಾನ್ಯಗಳ ಕಿಟ್ ವಿತರಣೆಯಲ್ಲಿ ಬಿಜೆಪಿ ಕಾರ್ಯಕರ್ತರು ತಾರತಮ್ಯ ಮಾಡಿ ವಿತರಿಸುತ್ತಿದ್ದಾರೆ. ಇಲ್ಲಿನ ಉತ್ತರ ಶಾಸಕರು ಖಾಸಗಿ ಶಾಲೆಯೊಂದರಲ್ಲಿ ಆಹಾರ ಕಿಟ್ ಗಳನ್ನು ಇರಿಸಿಕೊಂಡಿದ್ದಾರೆ. ಕಾರ್ಯಕರ್ತರಿಗೆ ಕಿಟ್ ಕೊಡುವಂತೆ ಕೇಳಿದರೆ ಕಾರ್ಮಿಕ ಇಲಾಖೆ ನೀಡುವ ಕಾರ್ಡಿನ ನೆಪವೊಡ್ಡಿ ವಾಪಸ್ ಕಳಿಸುತ್ತಾರೆ. ಬಡವರಿಗೆ ಕೊಡುವ ಆಹಾರದಲ್ಲೂ ಹೀಗೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಬಡಕಾರ್ಮಿಕರಿಗೆ ಆಹಾರಧಾನ್ಯಗಳ ಕಿಟ್ ಗಳನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು. ಕಾರ್ಮಿಕ ಇಲಾಖೆಯು ಸರ್ಕಾರ ಘೋಷಿಸಿರುವ ಪರಿಹಾರ ಮೊತ್ತವನ್ನು ಕೂಡಲೇ ನ್ಯಾಯಯುತವಾಗಿ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು. ಗೋಷ್ಠಿಯಲ್ಲಿ ಪರಮೇಶ್ವರಪ್ಪ, ಅಬ್ಧುಲ್, ಸಿದ್ದೇಶ್ ಮತ್ತಿತರರು ಇದ್ದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications