ಜಗಳ ಬಿಡಿಸಲು ದೇವರ ಕೋಣಕ್ಕೆ ಡಿಎನ್ಎ ಪರೀಕ್ಷೆ ಮಾಡಿಸಿದ ಪೊಲೀಸರು
ದಾವಣಗೆರೆ, ಅಕ್ಟೋಬರ್ 18: ದೇವರಿಗೆ ಬಿಟ್ಟಿದ್ದ ಕೋಣವೊಂದಕ್ಕೆ ಸಂಬಂಧಪಟ್ಟಂತೆ ಎರಡು ಗ್ರಾಮಗಳ ನಡುವೆ ಜಗಳ ಶುರುವಾಗಿದ್ದು, ಇದೀಗ ಆ ಕೋಣಕ್ಕೆ ಡಿಎನ್ ಎ ಪರೀಕ್ಷೆ ಮಾಡಿಸುವ ಮಟ್ಟಕ್ಕೆ ಆ ಜಗಳ ತಲುಪಿದೆ. ಎರಡು ದಿನಗಳ ಹಿಂದಷ್ಟೇ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೇಲಿಮಲ್ಲೂರು ಹಾಗೂ ಶಿವಮೊಗ್ಗ ತಾಲ್ಲೂಕಿನ ಹಾರ್ನಹಳ್ಳಿ ಗ್ರಾಮಸ್ಥರ ನಡುವೆ ಕೋಣಕ್ಕೆ ಸಂಬಂಧ ಪಟ್ಟಂತೆ ಜಗಳ ನಡೆದಿತ್ತು. ಇದೀಗ ಕೋಣವನ್ನು ಬಿಟ್ಟುಕೊಡಲು ಸಿದ್ಧರಿರದ ಎರಡೂ ಗ್ರಾಮಗಳು ಕಾನೂನಿನ ಮೊರೆಹೋಗಿವೆ.
ಆಗಿದ್ದಿಷ್ಟೆ. ಎರಡು ಗ್ರಾಮಗಳಲ್ಲಿದ್ದ ಎರಡು ದೇವರ ಕೋಣಗಳು ಕಣ್ಮರೆಯಾಗಿದ್ದವು. ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದ, ಗ್ರಾಮದೇವತೆ ಮಾರಿಕಾಂಬ ದೇವಿಗೆ ಬಿಟ್ಟಿದ್ದ ದೇವರ ಕೋಣ ಕಳುವಾಗಿದ್ದು, ಅದನ್ನು ಹುಡುಕಿಕೊಂಡುವಂತೆ ಗ್ರಾಮಸ್ಥರು ಹೊನ್ನಾಳಿ ಪೊಲೀಸರ ಮೊರೆ ಹೋಗಿದ್ದರು. ಬೇಲಿಮಲ್ಲೂರು ಗ್ರಾಮಸ್ಥರು ದೇವಿಗೆಂದು 7 ವರ್ಷದ ಹಿಂದೆ ಕೋಣವನ್ನು ಬಿಟ್ಟಿದ್ದರು. ಕೋಣ ಎಲ್ಲೆಡೆ ಮೇಯ್ದುಕೊಂಡು ಸುಖವಾಗಿ ಬೆಳೆದಿತ್ತು. ಅಕ್ಕಪಕ್ಕದ ಗ್ರಾಮಗಳಿಗೂ ಸುತ್ತಾಡಿ ಪುನಃ ಸ್ವಗ್ರಾಮಕ್ಕೆ ಮರಳುತ್ತಿತ್ತು. ಎರಡು ಮೂರು ದಿನಗಳಿಂದ ಕೋಣ ಕಾಣದಾಗಿತ್ತು. ನಂತರ ಒಂದು ಕೋಣ ಕಾಣಿಸಿಕೊಂಡಿದೆ.
ಶಿವಮೊಗ್ಗ ತಾಲೂಕಿನ ಹಾರ್ನಹಳ್ಳಿ ಗಾಮದವರು, ಈ ಕೋಣವನ್ನು ತಮ್ಮೂರ ಕೋಣ ಎಂದು ತಿಳಿದು ವಾಹನದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಈ ವಿಷಯ ತಿಳಿದ ಬೇಲಿಮಲ್ಲೂರಿನ ನೂರಾರು ಗ್ರಾಮಸ್ಥರು ಹಾರ್ನಹಳ್ಳಿಗೆ ಹೋಗಿ ಕೋಣ ತಮ್ಮದು ವಾಪಸು ಕೊಡಿ ಎಂದು ಕೇಳಿದ್ದಾರೆ. ನಂತರ ಎರಡೂ ಗ್ರಾಮಸ್ಥರ ಮಧ್ಯೆ ವಾಗ್ವಾದ ನಡೆದಿದೆ. ಆ ಕೋಣ ತಮ್ಮದೆಂದು ಎರಡೂ ಗ್ರಾಮಸ್ಥರು ಜಿದ್ದಿಗೆ ಬಿದ್ದಿದ್ದಾರೆ. ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಪರಿಸ್ಥಿತಿ ಕೈಮೀರುತ್ತಿದೆ ಎಂಬ ಸಂದರ್ಭದಲ್ಲಿ ಹಿರಿಯರೊಬ್ಬರು ಕಾನೂನಿನ ಮೊರೆ ಹೋಗಲು ತಿಳಿಸಿದ್ದಾರೆ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಬೇಲಿಮಲ್ಲೂರಿನ ಗ್ರಾಮಸ್ಥರೊಂದಿಗೆ ಸಿಪಿಐ ಟಿ.ವಿ. ದೇವರಾಜ್ ಚರ್ಚೆ ನಡೆಸಿದ್ದರು. ಕೋಣ ತಮ್ಮ ಗ್ರಾಮಕ್ಕೆ ಸೇರಿದ್ದು. ಅದರ ತಾಯಿತಂದೆ (ಎಮ್ಮೆ-ಕೋಣ) ನಮ್ಮ ಗ್ರಾಮದಲ್ಲೇ ಇವೆ. ಅವುಗಳ ಹಾಗೂ ಹಾರ್ನಹಳ್ಳಿಯಲ್ಲಿರುವ ಕೋಣದ ಡಿಎನ್ಎ ಪರೀಕ್ಷೆ ನಡಿಸಿದರೆ ಸತ್ಯಾಂಶ ಹೊರಬರುತ್ತದೆ ಎಂದು ಗ್ರಾಮಸ್ಥರು ಹೊಸ ಆಲೋಚನೆಯನ್ನು ಹೊರಹಾಕಿದರು.
ಇದಕ್ಕೆ ಒಪ್ಪಿದ ಪೊಲೀಸರು, "ಕೋಣದ ಡಿಎನ್ಎ ಪರೀಕ್ಷೆ ಮಾಡಿಸಿ ಅದು ಯಾವ ಗ್ರಾಮದವರಿಗೆ ಸೇರಿದ್ದು ಎಂದು ತೀರ್ಮಾನಿಸಲಾಗುವುದು. ಅಲ್ಲಿವರೆಗೆ ಕೋಣವನ್ನು ಶಿವಮೊಗ್ಗದ ಗೋಶಾಲೆಯಲ್ಲಿ ಇರಿಸಲಾಗುವುದು" ಎಂದು ಗ್ರಾಮಸ್ಥರನ್ನು ಸಮಾಧಾನ ಪಡಿಸಿದ್ದಾರೆ. ಕೋಣದ ಡಿಎನ್ಎ ಟೆಸ್ಟ್ ಮಾದರಿಯನ್ನು ಹೈದರಾಬಾದ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ದೇವರ ಕೋಣ ಯಾರಿಗೆ ಸೇರಿದ್ದು ಎನ್ನುವುದು ತಿಳಿಯಲಿದೆ.
ಕೇವಲ ಮನುಷ್ಯರಿಗೆ ಸೀಮಿತವಾಗಿದ್ದ ಡಿಎನ್ಎ ಪರೀಕ್ಷೆ ಈಗ ದೇವರ ಕೋಣಕ್ಕೂ ಒದಗಿ ಬಂದಿದೆ. ಕೋಣ ಯಾವ ಗ್ರಾಮಕ್ಕೆ ಸೇರಿದ್ದು ಎಂಬುದೂ ನಿರ್ಧಾರವಾಗಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications