ಜಗಳ ಬಿಡಿಸಲು ದೇವರ ಕೋಣಕ್ಕೆ ಡಿಎನ್ಎ ಪರೀಕ್ಷೆ ಮಾಡಿಸಿದ ಪೊಲೀಸರು
ದಾವಣಗೆರೆ, ಅಕ್ಟೋಬರ್ 18: ದೇವರಿಗೆ ಬಿಟ್ಟಿದ್ದ ಕೋಣವೊಂದಕ್ಕೆ ಸಂಬಂಧಪಟ್ಟಂತೆ ಎರಡು ಗ್ರಾಮಗಳ ನಡುವೆ ಜಗಳ ಶುರುವಾಗಿದ್ದು, ಇದೀಗ ಆ ಕೋಣಕ್ಕೆ ಡಿಎನ್ ಎ ಪರೀಕ್ಷೆ ಮಾಡಿಸುವ ಮಟ್ಟಕ್ಕೆ ಆ ಜಗಳ ತಲುಪಿದೆ. ಎರಡು ದಿನಗಳ ಹಿಂದಷ್ಟೇ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೇಲಿಮಲ್ಲೂರು ಹಾಗೂ ಶಿವಮೊಗ್ಗ ತಾಲ್ಲೂಕಿನ ಹಾರ್ನಹಳ್ಳಿ ಗ್ರಾಮಸ್ಥರ ನಡುವೆ ಕೋಣಕ್ಕೆ ಸಂಬಂಧ ಪಟ್ಟಂತೆ ಜಗಳ ನಡೆದಿತ್ತು. ಇದೀಗ ಕೋಣವನ್ನು ಬಿಟ್ಟುಕೊಡಲು ಸಿದ್ಧರಿರದ ಎರಡೂ ಗ್ರಾಮಗಳು ಕಾನೂನಿನ ಮೊರೆಹೋಗಿವೆ.
ಆಗಿದ್ದಿಷ್ಟೆ. ಎರಡು ಗ್ರಾಮಗಳಲ್ಲಿದ್ದ ಎರಡು ದೇವರ ಕೋಣಗಳು ಕಣ್ಮರೆಯಾಗಿದ್ದವು. ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದ, ಗ್ರಾಮದೇವತೆ ಮಾರಿಕಾಂಬ ದೇವಿಗೆ ಬಿಟ್ಟಿದ್ದ ದೇವರ ಕೋಣ ಕಳುವಾಗಿದ್ದು, ಅದನ್ನು ಹುಡುಕಿಕೊಂಡುವಂತೆ ಗ್ರಾಮಸ್ಥರು ಹೊನ್ನಾಳಿ ಪೊಲೀಸರ ಮೊರೆ ಹೋಗಿದ್ದರು. ಬೇಲಿಮಲ್ಲೂರು ಗ್ರಾಮಸ್ಥರು ದೇವಿಗೆಂದು 7 ವರ್ಷದ ಹಿಂದೆ ಕೋಣವನ್ನು ಬಿಟ್ಟಿದ್ದರು. ಕೋಣ ಎಲ್ಲೆಡೆ ಮೇಯ್ದುಕೊಂಡು ಸುಖವಾಗಿ ಬೆಳೆದಿತ್ತು. ಅಕ್ಕಪಕ್ಕದ ಗ್ರಾಮಗಳಿಗೂ ಸುತ್ತಾಡಿ ಪುನಃ ಸ್ವಗ್ರಾಮಕ್ಕೆ ಮರಳುತ್ತಿತ್ತು. ಎರಡು ಮೂರು ದಿನಗಳಿಂದ ಕೋಣ ಕಾಣದಾಗಿತ್ತು. ನಂತರ ಒಂದು ಕೋಣ ಕಾಣಿಸಿಕೊಂಡಿದೆ.
ಶಿವಮೊಗ್ಗ ತಾಲೂಕಿನ ಹಾರ್ನಹಳ್ಳಿ ಗಾಮದವರು, ಈ ಕೋಣವನ್ನು ತಮ್ಮೂರ ಕೋಣ ಎಂದು ತಿಳಿದು ವಾಹನದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಈ ವಿಷಯ ತಿಳಿದ ಬೇಲಿಮಲ್ಲೂರಿನ ನೂರಾರು ಗ್ರಾಮಸ್ಥರು ಹಾರ್ನಹಳ್ಳಿಗೆ ಹೋಗಿ ಕೋಣ ತಮ್ಮದು ವಾಪಸು ಕೊಡಿ ಎಂದು ಕೇಳಿದ್ದಾರೆ. ನಂತರ ಎರಡೂ ಗ್ರಾಮಸ್ಥರ ಮಧ್ಯೆ ವಾಗ್ವಾದ ನಡೆದಿದೆ. ಆ ಕೋಣ ತಮ್ಮದೆಂದು ಎರಡೂ ಗ್ರಾಮಸ್ಥರು ಜಿದ್ದಿಗೆ ಬಿದ್ದಿದ್ದಾರೆ. ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಪರಿಸ್ಥಿತಿ ಕೈಮೀರುತ್ತಿದೆ ಎಂಬ ಸಂದರ್ಭದಲ್ಲಿ ಹಿರಿಯರೊಬ್ಬರು ಕಾನೂನಿನ ಮೊರೆ ಹೋಗಲು ತಿಳಿಸಿದ್ದಾರೆ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಬೇಲಿಮಲ್ಲೂರಿನ ಗ್ರಾಮಸ್ಥರೊಂದಿಗೆ ಸಿಪಿಐ ಟಿ.ವಿ. ದೇವರಾಜ್ ಚರ್ಚೆ ನಡೆಸಿದ್ದರು. ಕೋಣ ತಮ್ಮ ಗ್ರಾಮಕ್ಕೆ ಸೇರಿದ್ದು. ಅದರ ತಾಯಿತಂದೆ (ಎಮ್ಮೆ-ಕೋಣ) ನಮ್ಮ ಗ್ರಾಮದಲ್ಲೇ ಇವೆ. ಅವುಗಳ ಹಾಗೂ ಹಾರ್ನಹಳ್ಳಿಯಲ್ಲಿರುವ ಕೋಣದ ಡಿಎನ್ಎ ಪರೀಕ್ಷೆ ನಡಿಸಿದರೆ ಸತ್ಯಾಂಶ ಹೊರಬರುತ್ತದೆ ಎಂದು ಗ್ರಾಮಸ್ಥರು ಹೊಸ ಆಲೋಚನೆಯನ್ನು ಹೊರಹಾಕಿದರು.
ಇದಕ್ಕೆ ಒಪ್ಪಿದ ಪೊಲೀಸರು, "ಕೋಣದ ಡಿಎನ್ಎ ಪರೀಕ್ಷೆ ಮಾಡಿಸಿ ಅದು ಯಾವ ಗ್ರಾಮದವರಿಗೆ ಸೇರಿದ್ದು ಎಂದು ತೀರ್ಮಾನಿಸಲಾಗುವುದು. ಅಲ್ಲಿವರೆಗೆ ಕೋಣವನ್ನು ಶಿವಮೊಗ್ಗದ ಗೋಶಾಲೆಯಲ್ಲಿ ಇರಿಸಲಾಗುವುದು" ಎಂದು ಗ್ರಾಮಸ್ಥರನ್ನು ಸಮಾಧಾನ ಪಡಿಸಿದ್ದಾರೆ. ಕೋಣದ ಡಿಎನ್ಎ ಟೆಸ್ಟ್ ಮಾದರಿಯನ್ನು ಹೈದರಾಬಾದ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ದೇವರ ಕೋಣ ಯಾರಿಗೆ ಸೇರಿದ್ದು ಎನ್ನುವುದು ತಿಳಿಯಲಿದೆ.
ಕೇವಲ ಮನುಷ್ಯರಿಗೆ ಸೀಮಿತವಾಗಿದ್ದ ಡಿಎನ್ಎ ಪರೀಕ್ಷೆ ಈಗ ದೇವರ ಕೋಣಕ್ಕೂ ಒದಗಿ ಬಂದಿದೆ. ಕೋಣ ಯಾವ ಗ್ರಾಮಕ್ಕೆ ಸೇರಿದ್ದು ಎಂಬುದೂ ನಿರ್ಧಾರವಾಗಲಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications