ದಾವಣಗೆರೆಯ ಮದರ್ ತೆರೇಸಾ ಬಗ್ಗೆ ನಿಮಗೆಷ್ಟು ಗೊತ್ತು?-ಮಾಹಿತಿ, ವಿವರ
ದಾವಣಗೆರೆ, ಮಾರ್ಚ್, 16: ದಾವಣಗೆರೆಯ 'ಮದರ್ ತೆರೇಸಾ' ಅಂತಾನೇ ಖ್ಯಾತಿಯಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ (90) ಅವರು ವಯೋಸಹಜ ಹಿನ್ನೆಲೆ ಶನಿವಾರ ಸಂಜೆ (ಮಾರ್ಚ್ 16) ಇಹಲೋಕ ತ್ಯಜಿಸಿದ್ದಾರೆ. ಇನ್ನು ಹಾಗಾದರೆ ಇವರನ್ನು ಮದರ್ ತೆರೇಸಾ ಎಂದು ಯಾಕೆ ಕರೆಯುತ್ತಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿ
ಮಾಯಕೊಂಡ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗಮ್ಮ ಕೇಶವಮೂರ್ತಿ ಅವರು ಎರಡು ಬಾರಿ ಮಂತ್ರಿಯಾಗಿ ಒಮ್ಮೆ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.

ನಾಗಮ್ಮ ಕೇಶವಮೂರ್ತಿ ಅಪ್ರತಿಮ ಸೇವೆ: ಗುಂಡೂರಾವ್ ಹಾಗೂ ವೀರಪ್ಪ ಮೊಯ್ಲಿ ಸಿಎಂ ಆಗಿದ್ದ ಅವಧಿಯಲ್ಲಿ ಶಿಕ್ಷಣ ಮಂತ್ರಿಗಳಾಗಿ, ಒಮ್ಮೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿಯಾಗಿ ಅಪ್ರತಿಮ ಸೇವೆ ಸಲ್ಲಿಸಿದ್ದರು. ಇನ್ನು ಕೆಲವು ತಿಂಗಳಿನಿಂದ ಅನಾರೋಗ್ಯ ಪೀಡಿತರಾಗಿದ್ದ
ನಾಗಮ್ಮ ಕೇಶವಮೂರ್ತಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
ವೈಕುಂಠಧಾಮದಲ್ಲಿ ನಾಗಮ್ಮ ಕೇಶವಮೂರ್ತಿ ಅಂತ್ಯಕ್ರಿಯೆ: ಪುತ್ರ ಡಾ. ಸಿ.ಕೆ.ಜಯಂತ್, ಸೊಸೆ ಡಾ.ಶೀಲಾ ಜಯಂತ್ ಹಾಗೂ ಮೊಮ್ಮಗಳನ್ನು ಅಗಲಿರುವ ನಾಗಮ್ಮನವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆಯ ವೈಕುಂಠ ಧಾಮದಲ್ಲಿ ನೆರವೇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದಾವಣಗೆರೆಗೆ ಬಂದಿದ್ದು ಹೇಗೆ: ಬೆಂಗಳೂರಿನ ಎಂ.ಎನ್.ರಾಮನ್ ಮತ್ತು ಸಾಕಮ್ಮ ದಂಪತಿಗಳ ಪುತ್ರಿಯಾಗಿದ್ದ ನಾಗಮ್ಮನವರು 1951ರಲ್ಲಿ ದಾವಣಗೆರೆಯ ಉದ್ಯಮಿ, ಚನ್ನಗಿರಿ ರಂಗಪ್ಪನವರ 2ನೇ ಪುತ್ರ ಸಿ.ಕೇಶವಮೂರ್ತಿ ಅವರನ್ನು ವಿವಾಹವಾಗಿ ದಾವಣಗೆರೆಗೆ ಬಂದರು. ಇನ್ನು ನಂತರ ತಮ್ಮ ಅತ್ತೆ ರಾಧಮ್ಮ ಅವರ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿದರು.
1955ರಲ್ಲಿ ವನಿತಾ ಸಮಾಜವನ್ನು ಆರಂಭಿಸಿ ಅದರಲ್ಲಿ 52 ಅಂಗ ಸಂಸ್ಥೆಗಳನ್ನು ಸ್ಥಾಪಿಸಿದರು. 'ಸೇವೆಯೇ ಪರಮೋ ರ್ಮಹ' ಎಂಬ ಧ್ಯೇಯ ವಾಕ್ಯದಡಿ ಗರ್ಭದಲ್ಲಿರುವ ಮಗುವಿನಿಂದ ಹಿಡಿದು ಸಾಯುವ ಹಂತದವರೆಗೆ ಮಹಿಳೆಗೆ ಎಲ್ಲ ರೀತಿಯ ನೆರವು, ಸೌಲಭ್ಯ, ಸ್ವಾವಲಂಬನೆಗೆ ದಾರಿ ಹುಡುಕಿ ಕೊಟ್ಟ ನಾಗಮ್ಮನವರು ದಾವಣಗೆರೆಯ ಮದರ್ ಥೆರೇಸಾ ಎಂದೇ ಖ್ಯಾತರಾಗಿದ್ದರು.
ವನಿತಾ ಸಮಾಜದ ಆತ್ಮ ನಾಗಮ್ಮ: ವನಿತಾ ಸಮಾಜ ಅವರ ನಿಜವಾದ ಆತ್ಮವಾಗಿತ್ತು. ರಾಜಕೀಯ, ಶಿಕ್ಷಣ, ಸಮಾಜ ಸೇವೆ, ಮಹಿಳಾ ಜಾಗೃತಿ, ಸಂಗೀತ, ಸಾಹಿತ್ಯ, ಹಾಸ್ಯ, ಆಧ್ಯಾತ್ಮ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಹೀಗೆ ನಾಗಮ್ಮ ಕೇಶವಮೂರ್ತಿ ರಾಜ್ಯ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲಿಯೂ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಜನಮೆಚ್ಚಿನ ನಾಯಕಿ ಅಂತಾನೂ ಖ್ಯಾತಿ ಗಳಿಸಿದ್ದರು.
ರಾಷ್ಟ್ರ ಮಟ್ಟದಲ್ಲಿ ರಾಜಕೀಯ ಪ್ರವೇಶದ ನಂತರ ರಾಷ್ಟ್ರಮಟ್ಟದಲ್ಲಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ದೇವರಾಜ ಅರಸು, ಎಸ್.ನಿಜಲಿಂಗಪ್ಪ, ಮಾರ್ಗರೇಟ್ ಆಳ್ವ, ಗುಂಡೂರಾವ್, ವೀರಪ್ಪ ಮೊಯ್ಲಿ ಸೇರಿದಂತೆ ಅನೇಕ ಘಟಾನುಘಟಿ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸೈ ಎನಿಸಿಕೊಂಡವರಾಗಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications