ದಾವಣಗೆರೆಯ ಮದರ್ ತೆರೇಸಾ ಬಗ್ಗೆ ನಿಮಗೆಷ್ಟು ಗೊತ್ತು?-ಮಾಹಿತಿ, ವಿವರ
ದಾವಣಗೆರೆ, ಮಾರ್ಚ್, 16: ದಾವಣಗೆರೆಯ 'ಮದರ್ ತೆರೇಸಾ' ಅಂತಾನೇ ಖ್ಯಾತಿಯಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ (90) ಅವರು ವಯೋಸಹಜ ಹಿನ್ನೆಲೆ ಶನಿವಾರ ಸಂಜೆ (ಮಾರ್ಚ್ 16) ಇಹಲೋಕ ತ್ಯಜಿಸಿದ್ದಾರೆ. ಇನ್ನು ಹಾಗಾದರೆ ಇವರನ್ನು ಮದರ್ ತೆರೇಸಾ ಎಂದು ಯಾಕೆ ಕರೆಯುತ್ತಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿ
ಮಾಯಕೊಂಡ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗಮ್ಮ ಕೇಶವಮೂರ್ತಿ ಅವರು ಎರಡು ಬಾರಿ ಮಂತ್ರಿಯಾಗಿ ಒಮ್ಮೆ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.

ನಾಗಮ್ಮ ಕೇಶವಮೂರ್ತಿ ಅಪ್ರತಿಮ ಸೇವೆ: ಗುಂಡೂರಾವ್ ಹಾಗೂ ವೀರಪ್ಪ ಮೊಯ್ಲಿ ಸಿಎಂ ಆಗಿದ್ದ ಅವಧಿಯಲ್ಲಿ ಶಿಕ್ಷಣ ಮಂತ್ರಿಗಳಾಗಿ, ಒಮ್ಮೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿಯಾಗಿ ಅಪ್ರತಿಮ ಸೇವೆ ಸಲ್ಲಿಸಿದ್ದರು. ಇನ್ನು ಕೆಲವು ತಿಂಗಳಿನಿಂದ ಅನಾರೋಗ್ಯ ಪೀಡಿತರಾಗಿದ್ದ
ನಾಗಮ್ಮ ಕೇಶವಮೂರ್ತಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
ವೈಕುಂಠಧಾಮದಲ್ಲಿ ನಾಗಮ್ಮ ಕೇಶವಮೂರ್ತಿ ಅಂತ್ಯಕ್ರಿಯೆ: ಪುತ್ರ ಡಾ. ಸಿ.ಕೆ.ಜಯಂತ್, ಸೊಸೆ ಡಾ.ಶೀಲಾ ಜಯಂತ್ ಹಾಗೂ ಮೊಮ್ಮಗಳನ್ನು ಅಗಲಿರುವ ನಾಗಮ್ಮನವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆಯ ವೈಕುಂಠ ಧಾಮದಲ್ಲಿ ನೆರವೇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದಾವಣಗೆರೆಗೆ ಬಂದಿದ್ದು ಹೇಗೆ: ಬೆಂಗಳೂರಿನ ಎಂ.ಎನ್.ರಾಮನ್ ಮತ್ತು ಸಾಕಮ್ಮ ದಂಪತಿಗಳ ಪುತ್ರಿಯಾಗಿದ್ದ ನಾಗಮ್ಮನವರು 1951ರಲ್ಲಿ ದಾವಣಗೆರೆಯ ಉದ್ಯಮಿ, ಚನ್ನಗಿರಿ ರಂಗಪ್ಪನವರ 2ನೇ ಪುತ್ರ ಸಿ.ಕೇಶವಮೂರ್ತಿ ಅವರನ್ನು ವಿವಾಹವಾಗಿ ದಾವಣಗೆರೆಗೆ ಬಂದರು. ಇನ್ನು ನಂತರ ತಮ್ಮ ಅತ್ತೆ ರಾಧಮ್ಮ ಅವರ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿದರು.
1955ರಲ್ಲಿ ವನಿತಾ ಸಮಾಜವನ್ನು ಆರಂಭಿಸಿ ಅದರಲ್ಲಿ 52 ಅಂಗ ಸಂಸ್ಥೆಗಳನ್ನು ಸ್ಥಾಪಿಸಿದರು. 'ಸೇವೆಯೇ ಪರಮೋ ರ್ಮಹ' ಎಂಬ ಧ್ಯೇಯ ವಾಕ್ಯದಡಿ ಗರ್ಭದಲ್ಲಿರುವ ಮಗುವಿನಿಂದ ಹಿಡಿದು ಸಾಯುವ ಹಂತದವರೆಗೆ ಮಹಿಳೆಗೆ ಎಲ್ಲ ರೀತಿಯ ನೆರವು, ಸೌಲಭ್ಯ, ಸ್ವಾವಲಂಬನೆಗೆ ದಾರಿ ಹುಡುಕಿ ಕೊಟ್ಟ ನಾಗಮ್ಮನವರು ದಾವಣಗೆರೆಯ ಮದರ್ ಥೆರೇಸಾ ಎಂದೇ ಖ್ಯಾತರಾಗಿದ್ದರು.
ವನಿತಾ ಸಮಾಜದ ಆತ್ಮ ನಾಗಮ್ಮ: ವನಿತಾ ಸಮಾಜ ಅವರ ನಿಜವಾದ ಆತ್ಮವಾಗಿತ್ತು. ರಾಜಕೀಯ, ಶಿಕ್ಷಣ, ಸಮಾಜ ಸೇವೆ, ಮಹಿಳಾ ಜಾಗೃತಿ, ಸಂಗೀತ, ಸಾಹಿತ್ಯ, ಹಾಸ್ಯ, ಆಧ್ಯಾತ್ಮ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಹೀಗೆ ನಾಗಮ್ಮ ಕೇಶವಮೂರ್ತಿ ರಾಜ್ಯ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲಿಯೂ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಜನಮೆಚ್ಚಿನ ನಾಯಕಿ ಅಂತಾನೂ ಖ್ಯಾತಿ ಗಳಿಸಿದ್ದರು.
ರಾಷ್ಟ್ರ ಮಟ್ಟದಲ್ಲಿ ರಾಜಕೀಯ ಪ್ರವೇಶದ ನಂತರ ರಾಷ್ಟ್ರಮಟ್ಟದಲ್ಲಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ದೇವರಾಜ ಅರಸು, ಎಸ್.ನಿಜಲಿಂಗಪ್ಪ, ಮಾರ್ಗರೇಟ್ ಆಳ್ವ, ಗುಂಡೂರಾವ್, ವೀರಪ್ಪ ಮೊಯ್ಲಿ ಸೇರಿದಂತೆ ಅನೇಕ ಘಟಾನುಘಟಿ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸೈ ಎನಿಸಿಕೊಂಡವರಾಗಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications