Get Updates
Get notified of breaking news, exclusive insights, and must-see stories!

ದಾವಣಗೆರೆಯ ಮದರ್ ತೆರೇಸಾ ಬಗ್ಗೆ ನಿಮಗೆಷ್ಟು ಗೊತ್ತು?-ಮಾಹಿತಿ, ವಿವರ

ದಾವಣಗೆರೆ, ಮಾರ್ಚ್‌, 16: ದಾವಣಗೆರೆಯ 'ಮದರ್ ತೆರೇಸಾ' ಅಂತಾನೇ ಖ್ಯಾತಿಯಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ (90) ಅವರು ವಯೋಸಹಜ ಹಿನ್ನೆಲೆ ಶನಿವಾರ ಸಂಜೆ (ಮಾರ್ಚ್‌ 16) ಇಹಲೋಕ ತ್ಯಜಿಸಿದ್ದಾರೆ. ಇನ್ನು ಹಾಗಾದರೆ ಇವರನ್ನು ಮದರ್ ತೆರೇಸಾ ಎಂದು ಯಾಕೆ ಕರೆಯುತ್ತಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿ

ಮಾಯಕೊಂಡ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗಮ್ಮ ಕೇಶವಮೂರ್ತಿ ಅವರು ಎರಡು ಬಾರಿ ಮಂತ್ರಿಯಾಗಿ ಒಮ್ಮೆ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.

Do you know about Davanagere Mother Teresa Know details

ನಾಗಮ್ಮ ಕೇಶವಮೂರ್ತಿ ಅಪ್ರತಿಮ ಸೇವೆ: ಗುಂಡೂರಾವ್ ಹಾಗೂ ವೀರಪ್ಪ ಮೊಯ್ಲಿ ಸಿಎಂ ಆಗಿದ್ದ ಅವಧಿಯಲ್ಲಿ ಶಿಕ್ಷಣ ಮಂತ್ರಿಗಳಾಗಿ, ಒಮ್ಮೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿಯಾಗಿ ಅಪ್ರತಿಮ ಸೇವೆ ಸಲ್ಲಿಸಿದ್ದರು. ಇನ್ನು ಕೆಲವು ತಿಂಗಳಿನಿಂದ ಅನಾರೋಗ್ಯ ಪೀಡಿತರಾಗಿದ್ದ
ನಾಗಮ್ಮ ಕೇಶವಮೂರ್ತಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

ವೈಕುಂಠಧಾಮದಲ್ಲಿ ನಾಗಮ್ಮ ಕೇಶವಮೂರ್ತಿ ಅಂತ್ಯಕ್ರಿಯೆ: ಪುತ್ರ ಡಾ. ಸಿ.ಕೆ.ಜಯಂತ್, ಸೊಸೆ ಡಾ.ಶೀಲಾ ಜಯಂತ್ ಹಾಗೂ ಮೊಮ್ಮಗಳನ್ನು ಅಗಲಿರುವ ನಾಗಮ್ಮನವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆಯ ವೈಕುಂಠ ಧಾಮದಲ್ಲಿ ನೆರವೇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದಾವಣಗೆರೆಗೆ ಬಂದಿದ್ದು ಹೇಗೆ: ಬೆಂಗಳೂರಿನ ಎಂ.ಎನ್.ರಾಮನ್ ಮತ್ತು ಸಾಕಮ್ಮ ದಂಪತಿಗಳ ಪುತ್ರಿಯಾಗಿದ್ದ ನಾಗಮ್ಮನವರು 1951ರಲ್ಲಿ ದಾವಣಗೆರೆಯ ಉದ್ಯಮಿ, ಚನ್ನಗಿರಿ ರಂಗಪ್ಪನವರ 2ನೇ ಪುತ್ರ ಸಿ.ಕೇಶವಮೂರ್ತಿ ಅವರನ್ನು ವಿವಾಹವಾಗಿ ದಾವಣಗೆರೆಗೆ ಬಂದರು. ಇನ್ನು ನಂತರ ತಮ್ಮ ಅತ್ತೆ ರಾಧಮ್ಮ ಅವರ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿದರು.

1955ರಲ್ಲಿ ವನಿತಾ ಸಮಾಜವನ್ನು ಆರಂಭಿಸಿ ಅದರಲ್ಲಿ 52 ಅಂಗ ಸಂಸ್ಥೆಗಳನ್ನು ಸ್ಥಾಪಿಸಿದರು. 'ಸೇವೆಯೇ ಪರಮೋ ರ‍್ಮಹ' ಎಂಬ ಧ್ಯೇಯ ವಾಕ್ಯದಡಿ ಗರ್ಭದಲ್ಲಿರುವ ಮಗುವಿನಿಂದ ಹಿಡಿದು ಸಾಯುವ ಹಂತದವರೆಗೆ ಮಹಿಳೆಗೆ ಎಲ್ಲ ರೀತಿಯ ನೆರವು, ಸೌಲಭ್ಯ, ಸ್ವಾವಲಂಬನೆಗೆ ದಾರಿ ಹುಡುಕಿ ಕೊಟ್ಟ ನಾಗಮ್ಮನವರು ದಾವಣಗೆರೆಯ ಮದರ್ ಥೆರೇಸಾ ಎಂದೇ ಖ್ಯಾತರಾಗಿದ್ದರು.

ವನಿತಾ ಸಮಾಜದ ಆತ್ಮ ನಾಗಮ್ಮ: ವನಿತಾ ಸಮಾಜ ಅವರ ನಿಜವಾದ ಆತ್ಮವಾಗಿತ್ತು. ರಾಜಕೀಯ, ಶಿಕ್ಷಣ, ಸಮಾಜ ಸೇವೆ, ಮಹಿಳಾ ಜಾಗೃತಿ, ಸಂಗೀತ, ಸಾಹಿತ್ಯ, ಹಾಸ್ಯ, ಆಧ್ಯಾತ್ಮ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಹೀಗೆ ನಾಗಮ್ಮ ಕೇಶವಮೂರ್ತಿ ರಾಜ್ಯ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲಿಯೂ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಜನಮೆಚ್ಚಿನ ನಾಯಕಿ ಅಂತಾನೂ ಖ್ಯಾತಿ ಗಳಿಸಿದ್ದರು.

ರಾಷ್ಟ್ರ ಮಟ್ಟದಲ್ಲಿ ರಾಜಕೀಯ ಪ್ರವೇಶದ ನಂತರ ರಾಷ್ಟ್ರಮಟ್ಟದಲ್ಲಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ದೇವರಾಜ ಅರಸು, ಎಸ್.ನಿಜಲಿಂಗಪ್ಪ, ಮಾರ್ಗರೇಟ್ ಆಳ್ವ, ಗುಂಡೂರಾವ್, ವೀರಪ್ಪ ಮೊಯ್ಲಿ ಸೇರಿದಂತೆ ಅನೇಕ ಘಟಾನುಘಟಿ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸೈ ಎನಿಸಿಕೊಂಡವರಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+