ಬಸವಣ್ಣನವರ ವಚನಗಳ ತಿದ್ದುವ ಪ್ರಯತ್ನ ಮಾಡಬಾರದು: ಸಿದ್ಧಲಿಂಗಾ ಸ್ವಾಮೀಜಿ
ದಾವಣಗೆರೆ, ಜೂನ್ 3: ರಾಜ್ಯದಲ್ಲಿ ದಿನೇ ದಿನೇ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರುತ್ತಿದೆ. ಪ್ರಸ್ತುತ ಪಠ್ಯ ಪರಿಷ್ಕರಣೆಗೆ ಮಠಾಧೀಶರು, ಶಿಕ್ಷಣ ತಜ್ಞರು, ಸಾಹಿತಿಗಳು, ಲೇಖಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ತುಮಕೂರಿನ ಸಿದ್ಧಗಂಗ ಮಠದ ಸಿದ್ದಗಂಗಾ ಸ್ವಾಮೀಜಿ ಅವರು ಪ್ರತಿಕ್ರಿಯೆ ನೀಡಿದ್ದು, ಬಸವಣ್ಣನವರ ತತ್ವಗಳು ಪ್ರತಿಯೊಬ್ಬ ವ್ಯಕ್ತಿಗೂ ಬೇಕಾಗಿದೆ. ಅವರ ವಚನಗಳೇ ನಮಗೆ ಆಧಾರ ಆಗಿವೆ. ಆದ್ದರಿಂದ ಅದನ್ನು ತಿರುಚುವ ಪ್ರಯತ್ನ ಆಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಾಸ್ತವ ವಿಚಾರಗಳನ್ನು ಪಠ್ಯದಲ್ಲಿ ಪ್ರಕಟಿಸುವುದು ಒಳ್ಳೆಯದು. ಪಠ್ಯ ಪುಸ್ತಕ ವಿವಾದ ಬೆಳಸಬಾರದು ಎಂದು ಹೇಳಿದರು.
ಪಠ್ಯ ಪುಸ್ತಕದ ವಿವಾದ ದಿನ ಕಳೆದಂತೆ ಬೇರೆಯದ್ದೇ ಸ್ವರೂಪ ಪಡೆಯುತ್ತಿದೆ. ಈಗಾಗಲೇ ಬಹಳಷ್ಟು ತಿರುವು ಪಡೆದುಕೊಂಡಿದೆ. ಯಾವುದೇ ಕಾರಣದಿಂದ ಇಂತಹ ವಾತಾವರಣ ಸೃಷ್ಟಿಯಾಗಬಾರದು. ಮಕ್ಕಳಿಗೆ ಏನೇ ವಿಷಯ ಬೋಧನೆ ಮಾಡಿದರೂ ನೈತಿಕ ಶಿಕ್ಷಣ ಅತ್ಯಂತ ಮುಖ್ಯ ಎಂದು ಸಿದ್ದಗಂಗಾ ಸ್ವಾಮೀಜಿ ತಿಳಿಸಿದರು.

ಪಠ್ಯ ಪುಸ್ತಕದಲ್ಲಿ ನೈತಿಕ ಕೊರತೆ ಹೆಚ್ಚು ಕಾಣುತ್ತಿದೆ. ಮೂಲ ವಿಚಾರವನ್ನು ತಿದ್ದದೇ ವಾಸ್ತವ ವಿಚಾರದ ಬಗ್ಗೆ ತಿಳಿಸುವ ಕಾರ್ಯ ಮಾಡಬೇಕು. ವಾದ, ವಿವಾದಗಳು ಪೂರ್ಣಗೊಂಡು ಶಾಂತಿ ವಾತಾವರಣ ನಿರ್ಮಾಣ ಆಗಬೇಕು. ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಉಂಟಾಗಬೇಕು ಎಂದು ಹೇಳಿದರು.
ಬಸವಣ್ಣನವರು ಸಮಾಜಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಮಾನವ ಬದುಕಿಗೆ ಬೇಕಾದ ತತ್ಚವನ್ನು ಕೊಟ್ಟಿರುವುದು ಮುಖ್ಯ. ನಮ್ಮನ್ನು ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡಿದರೆ ಅದು ಬಸವಣ್ಣನವರಿಗೆ ಕೊಟ್ಟ ಗೌರವ ಆಗುತ್ತದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ಚಕ್ರತೀರ್ಥ ವಿರುದ್ಧ ಕಿಡಿ ಕಾರಿದ್ದ ಸ್ವಾಮೀಜಿಗಳು:
ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಪಠ್ಯಪುಸ್ತಕ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಮತ್ತು ಅವರ ನೇತೃತ್ವದ ಸಮಿತಿಯನ್ನು ರದ್ದುಗೊಳಿಸಬೇಕೆಂದು ಮೆಣಸೂರು ಬಸವ ಕೇಂದ್ರದ ಬಸವಯೋಗಿ ಸ್ವಾಮೀಜಿ ಮತ್ತು ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯಿಸಿದ್ದರು.
ರಾಷ್ಟ್ರಕವಿ ಕುಪೆಂಪು ಬರೆದಿರುವ ನಾಡಗೀತೆಯನ್ನು ತಿರುಚಿ ಬರೆದಿದ್ದ ಗೀತೆಯನ್ನು ಚಕ್ರತೀರ್ಥ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ವಿವಾದವಾಗಿತ್ತು. ಒಕ್ಕಲಿಗ ಸಮೂದಾಯ ಕುವೆಂಪುಗೆ ಅವಮಾನ ಮಾಡಿದ್ದಾರೆಂದು ರೋಹಿತ್ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶವ್ಯಕ್ತಪಡಿಸಿದ್ದರು.
(ಒನ್ಇಂಡಿಯಾ ಸುದ್ದಿ)
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications