ನ್ಯೂಯಾರ್ಕಿನಲ್ಲಿ ದಾವಣಗೆರೆ ಮೂಲದ ಕೊರೊನಾ ವಾರಿಯರ್
ದಾವಣಗೆರೆ, ಏಪ್ರಿಲ್ 27: ಅಮೆರಿಕದ ನ್ಯೂಯಾರ್ಕ್ನ ಬ್ರಾಂಕ್ಸ್ ಕೇರ್ ಆಸ್ಪತ್ರೆಯಲ್ಲಿ ನೆಫ್ರಾಲಜಿ ವಿಭಾಗದಲ್ಲಿ ಭಾರತ ಮೂಲದ ಡಾ. ಕಲ್ಪನಾ ಉದಯಶಂಕರ್ ಅವರು ಸೇವೆ ಸಲ್ಲಿಸುತ್ತಿರುವುದು ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ.
Recommended Video
ದಾವಣಗೆರೆ ಮೂಲದ ಡಾ. ಕಲ್ಪನಾ ಉದಯಶಂಕರ್ ಅವರು ಕಳೆದ ಎರಡು ತಿಂಗಳಿನಿಂದ ಬ್ರಾಂಕ್ ಕೇರ್ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬ್ರಾಂಕ್ಸ್ ನಲ್ಲಿ ಎರಡು ಕಡೆಗಳಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗಳಿವೆ. ಪ್ರತಿ ಆಸ್ಪತ್ರೆಯಲ್ಲಿ 300ರಿಂದ 350 ಕೊರೊನಾ ರೋಗಿಗಳಿದ್ದಾರೆ. ಡಾ. ಕಲ್ಪನಾ ಅವರು ದಿನ ಬಿಟ್ಟು ದಿನ 12 ಗಂಟೆಗಳ ಶಿಫ್ಟ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಲ್ಪನಾ ಅವರು 30ರಿಂದ 40 ರೋಗಿಗಳಿಗೆ ಪ್ರತಿದಿನ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ ಮೂಲದಿಂದ ತಿಳಿದು ಬಂದಿದೆ.
ಡಾ. ಕಲ್ಪನಾ ಅವರು ದಾವಣೆಗೆರೆಯ ಡಾ. ಉದಯಶಂಕರ್ ಕೆ. ಶೆಟ್ರು ಅವರ ಪತ್ನಿಯಾಗಿದ್ದಾರೆ. ನಗರದ ಬಾಪೂಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದರು. ನಂತರ, ಜಮೈಕಾ ಗಯಾನಾ ಹಾಗೂ ದಕ್ಷಿಣ ಅಮೆರಿಕದ ವಿವಿಧೆಡೆಗಳಲ್ಲಿ ಕಾರ್ಯ ನಿರ್ವಹಿಸಿದ ಬಳಿಕ ಸದ್ಯ ನ್ಯೂಯಾರ್ಕಿನ ಬ್ರಾಂಕ್ಸ್ ಎಂಬಲ್ಲಿ ಆಸ್ಪತ್ರೆಯಲ್ಲಿ ವಿಶೇಷ ತಜ್ಞ ವೈದ್ಯೆಯಾಗಿದ್ದಾರೆ.

ಈಗ ನ್ಯೂಯಾರ್ಕ್ನಲ್ಲಿ ಪತಿ ಡಾ. ಉದಯಶಂಕರ್ ಜೊತೆ ನೆಲೆಸಿದ್ದಾರೆ. ನೆಫ್ರಾಲಜಿ ತಜ್ಞೆಯಾಗಿರುವ ಡಾ. ಕಲ್ಪನಾ ಅವರು ಕಳೆದ ಎರಡು ತಿಂಗಳಿನಿಂದ ಕಿಡ್ನಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ, ನ್ಯೂಯಾರ್ಕಿನಲ್ಲಿ ಕೊರೊನಾ ಸೋಂಕು ಹರಡುವುದು ಹೆಚ್ಚಾಗುತ್ತಿದ್ದಂತೆ ಕೊರೊನಾ ವಾರಿಯರ್ ಗಳ ಅಗತ್ಯ ಹೆಚ್ಚಾಗಿ ಕಂಡು ಬಂದಿದ್ದರಿಂದ ಕೊರೊನಾ ರೋಗಿಗಳ ಚಿಕಿತ್ಸೆಗೆ ಮುಂದಾಗಿದ್ದಾರೆ.

ಇದು ಸವಾಲಿನಹಾಗೂ ಕಲಿಕೆಯ ಮತ್ತು ಸಾರ್ಥಕತೆಯ ಕ್ಷಣವಾಗಿದೆ, ಕೊವಿಡ್ ಬಗ್ಗೆ ಜನರು ಮುನ್ನೆಚ್ಚರಿಕೆ ವಹಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು ಹಾಗೂ ಆಗಾಗ ಕೈ ತೊಳೆಯುತ್ತಿರಬೇಕು ಎಂದು ಡಾ. ಕಲ್ಪನಾ ಹೇಳಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications