ಶಾಮನೂರು ಶಿವಶಂಕರಪ್ಪ ಟ್ರಸ್ಟಿನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ದಾವಣಗೆರೆ, ಜುಲೈ 25: ಕರ್ನಾಟಕದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಾಯ ಮಾಡುವ ಆಶಯದಿಂದ 'ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್', ವಿದ್ಯಾರ್ಥಿ ವೇತನ ಬಯಸುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ದಾವಣಗೆರೆಯ ಹಿರಿಯ ಉದ್ಯಮಿ, ಉದಾರ ದಾನಿ, ಮಾಜಿ ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ
ಸಚಿವ ಹಾಗೂ ಬಾಪೂಜಿ ವಿದ್ಯಾಸಂಸ್ಥೆಯ ನಾಲ್ಕು ದಶಕಗಳ ಕಾಲದ ಗೌರವ ಕಾರ್ಯದರ್ಶಿ ಡಾ. ಶಾಮನೂರು ಶಿವಶ0ಕರಪ್ಪ ಅವರ ಹೆಸರಿನಲ್ಲಿ 'ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್' ರೂಪಗೊಂಡಿದೆ.
ಕರ್ನಾಟಕದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಾಯ ಮಾಡುವ ಆಶಯ ಹೊಂದಿದೆ. ಕಳೆದ ಏಳು ವರ್ಷಗಳಿಂದ ರಾಜ್ಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಹಿಂದಿನ ವರ್ಷ ಸುಮಾರು 900 ವಿದ್ಯಾರ್ಥಿ ವೇತನಗಳನ್ನು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ.

ಜನಕಲ್ಯಾಣ ಟ್ರಸ್ಟ್ ನಿಂದ, ಪಿಯುಸಿ ಐ.ಟಿ.ಐ, ಡಿಪ್ಲೋಮಾ/ಪದವಿ ಕಾಲೇಜು/ವೃತ್ತಿ ಶಿಕ್ಷಣ ಕಾಲೇಜು/ಕಾನೂನು ಕಾಲೇಜು/ಮ್ಯಾನೇಜ್ಮೆಂಟ್ ಮತ್ತು ಇತರೆ ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿ 2019-20 ರ ಶೈಕ್ಷಣಿಕ ಅವಧಿಯಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಆಯಾ ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನವನ್ನು ನೀಡಲಿದೆ.
ಯಾರು ಅರ್ಜಿ ಸಲ್ಲಿಸಬಹುದು?: ವಿದ್ಯಾರ್ಥಿ ವೇತನವನ್ನು ನಿರೀಕ್ಷಿಸುವ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಆಯಾ ಶಾಲಾ/ಕಾಲೇಜುಗಳ ಮುಖ್ಯಸ್ಥರ ಮೂಲಕ ಕ್ರಮಬದ್ಧವಾದ ಪ್ರಮಾಣ ಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದಲ್ಲದೆ ವಿದ್ಯಾರ್ಥಿ ವೇತನವನ್ನು ನಿರೀಕ್ಷಿಸುವ ದಾವಣಗೆರೆ ಜಿಲ್ಲೆಯ ಪತ್ರಕರ್ತರ/ಮಾಧ್ಯಮದವರ/ಪತ್ರಕರ್ತರ ಮತ್ತು ಮಾಧ್ಯಮ ಛಾಯಾಗ್ರಾಹಕರ ಮಕ್ಕಳ ಆಯಾ ಶಾಲಾ/ಕಾಲೇಜುಗಳ ಮುಖ್ಯಸ್ಥರ ಮೂಲಕ ಕ್ರಮಬದ್ಧವಾದ ಪ್ರಮಾಣ ಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ನಿಗದಿತ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗಾಗಿ ಟ್ರಸ್ಟಿನ ವೆಬ್ ತಾಣ ಎಸ್ಎಸ್ ಜನ ಕಲ್ಯಾಣ್ ಟ್ರಸ್ಟ್ .ಆರ್ಗ್ ಸಂಪರ್ಕಿಸಬಹುದು.
ಅರ್ಜಿಗಳನ್ನು ದಿನಾಂಕ 01.07.2019 ರಿಂದ 31.08.2019ರೊಳಗೆ ಮಾತ್ರ ಸಲ್ಲಿಸಬಹುದು ಎಂದು ಡಾ. ಶಾಮನೂರು ಶಿವಶಂಕರಪ್ಪ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಜಸ್ಟೀಸ್ ಶಿವರಾಜ ಪಾಟೀಲರ ಹೆಸರಿನಲ್ಲಿ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications