ದಾವಣಗೆರೆ: ಎಲೆಬೇತೂರಿನಲ್ಲಿ ವೃದ್ಧ ದಂಪತಿಯನ್ನು ಕೊಚ್ಚಿ ಕೊಲೆ!
ದಾವಣಗೆರೆ, ಜನವರಿ 25: ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ವೃದ್ಧ ದಂಪತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಗುರುಸಿದ್ಧಪ್ಪ ಹಾಗೂ ಸರೋಜಮ್ಮ ಕೊಲೆಗೀಡಾದ ವೃದ್ಧ ದಂಪತಿ ಎಂದು ಗುರುತಿಸಲಾಗಿದೆ. ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ತಡರಾತ್ರಿ ಹತ್ಯೆ ಮಾಡಿ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಗುರುಸಿದ್ದಪ್ಪ, ಸರೋಜಮ್ಮ ದಂಪತಿ ಎಲೆಬೇತೂರು ಗ್ರಾಮದಲ್ಲಿ ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮೂವರು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಟ್ಟಿದ್ದರು. ಮನೆಯಲ್ಲಿ ಗುರುಸಿದ್ಧಪ್ಪ, ಸರೋಜಮ್ಮ ಇಬ್ಬರೇ ವಾಸ ಆಗಿದ್ದರು. ತಡರಾತ್ರಿ ಮನೆಗೆ ನುಗ್ಗಿರುವ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಬೆಳಗ್ಗೆ ಮನೆ ಬಾಗಿಲು ತೆರೆದಿರುವುದನ್ನು ನೋಡಿದ ಮಹಿಳೆಯು ಮನೆಯೊಳಗೆ ಹೋದಾಗ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ಮಹಿಳೆ ಮಾಹಿತಿ ನೀಡಿದ್ದಾರೆ. ಹಣಕ್ಕಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿನಡೆದಿದೆ.
Recommended Video
ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಎಸ್ಪಿ ಸಿ.ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾತ್ರಿ ಮನೆಗೆ ನುಗ್ಗಿದ ಹಂತಕರು ಕೊಲೆಗೈದು ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.