ದಾವಣಗೆರೆಯ ದುಗ್ಗಮ್ಮನ ಹೆಸರಲ್ಲಿ ನಕಲಿ ಬಿಲ್ ದಂಧೆಕೋರರ ಕಾಟ
Recommended Video
ದಾವಣಗೆರೆ, ಫೆಬ್ರವರಿ 13: ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿಯ ಜಾತ್ರೆ ಸಮೀಪಿಸುತ್ತಿದ್ದಂತೆ ದೇವಿಯ ಹೆಸರಲ್ಲಿ ನಕಲಿ ಬಿಲ್ ಗಳನ್ನು ತಯಾರಿಸಿ ಭಕ್ತರಿಂದ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿರುವ ಗ್ಯಾಂಗ್ ಒಂದು ದಾವಣಗೆರೆಯಲ್ಲಿ ಸೃಷ್ಠಿಯಾಗಿದೆ.
ಫೆಬ್ರವರಿ 29 ರಿಂದ ಮಾರ್ಚ್ 8 ರ ವರೆಗೆ ನಗರ ದೇವತೆ ದುಗ್ಗಮ್ಮನ ಜಾತ್ರೆ ನಡೆಯಲಿದ್ದು, ಮೂರು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಆದರೆ ದೇವಸ್ಥಾನದ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಂದ ಹಣ ವಸೂಲಿ ಮಾಡುತ್ತಿರುವ ಗ್ಯಾಂಗ್ ಒಂದು ಹುಟ್ಟಿಕೊಂಡಿದ್ದು ಇದರಿಂದ ದೇವಸ್ಥಾನ ಟ್ರಸ್ಟಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನದ ಟ್ರಸ್ಟ್ ಹೆಸರಿನಲ್ಲಿ ಲೆಟರ್ ಹೆಡ್ ಮಾಡಿಸಿ, ಜಾತ್ರೆ ಪ್ರಯುಕ್ತ ಕುರಿ ಕಾಳಗ, ಕುಸ್ತಿ, ಹಾಗೂ ಅನ್ನಸಂತರ್ಪಣೆ ಇದೆ ಎಂದು ಲೆಟರ್ ನಲ್ಲಿ ಮುದ್ರಿಸಿ ಭಕ್ತರಿಂದ ಸಾವಿರಾರು ರೂಪಾಯಿ ಹಣ ವಸೂಲಿಗೆ ನಿಂತಿದ್ದಾರೆ.

ದೇಣಿಗೆ ಎತ್ತುವಳಿದಾರರು ದೇವಸ್ಥಾನ ಹೆಸರಲ್ಲಿ ಮಾಡಿಸಿದ ನಕಲಿ ಬಿಲ್ ನಲ್ಲಿ ದಾವಣಗೆರೆಯ ಮಾಜಿ ಶಾಸಕ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನವರ ಭಾವಚಿತ್ರಗಳನ್ನು ಮುದ್ರಿಸಲಾಗಿದೆ.

ಅಸಲಿ ಬಿಲ್ ಗಳ ತಲೆಗೆ ಹೊಡೆದಂತೆ ನಕಲಿ ಬಿಲ್ ಗಳನ್ನು ಸೃಷ್ಠಿಸಿದ್ದಾರೆ. ಇದರಿಂದ ರೋಸಿ ಹೋಗಿರುವ ದೇವಸ್ಥಾನದ ಕಮಿಟಿ, ಪೊಲೀಸ್ ಠಾಣೆಗೂ ದೂರು ನೀಡಲು ಮುಂದಾಗಿದ್ದಾರೆ. ಅಲ್ಲದೇ ಭಕ್ತರಿಗೆ ಮನವಿ ಮಾಡಿಕೊಂಡಿದ್ದು, ದೇವಸ್ಥಾನದ ಹೆಸರಿನಲ್ಲಿ ಯಾರಾದರೂ ವರ್ತಕರ ಹಾಗೂ ಸಾರ್ವಜನಿಕರ ಹತ್ತಿರ ಏನಾದರೂ ಚಂದಾ ವಸೂಲಿ ಮಾಡಲು ಬಂದರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ದೇವಸ್ಥಾನದ ಟ್ರಸ್ಟ್ ನ ಧರ್ಮದರ್ಶಿಗಳು ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications