ದಾವಣಗೆರೆಯಲ್ಲಿ ಖೋಟಾ ನೋಟು ಗ್ಯಾಂಗ್ ಅಂದರ್
ದಾವಣಗೆರೆ , ಜನವರಿ 29: ಖೋಟಾ ನೋಟು ಚಲಾವಣೆ ಮಾಡಲು ವಿವಿಧ ಗ್ರಾಮಗಳಲ್ಲಿ ನಡೆಯುವ ಜಾತ್ರೆಗಳು ಹಾಗೂ ಸಂತೆಗಳಲ್ಲಿ ಗ್ರಾಮೀಣ ಭಾಗದ ಮುಗ್ಧ ಜನರು ಹಾಗೂ ವೃದ್ಧರಿಗೆ ನೋಟು ಚಲಾವಣೆ ಮಾಡುತ್ತಿದ್ದ ಗ್ಯಾಂಗ್ ಅನ್ನು ಬಂಧಿಸುವಲ್ಲಿ ದಾವಣಗೆರೆ ಪೊಲೀಸರು ಯಶ್ವಸಿಯಾಗಿದ್ದಾರೆ.
ಇದೇ ಜನವರಿ 26 ರಂದು ದಾವಣಗೆರೆಯ ಲೋಲೇಶ್ವರ ಜಾತ್ರೆಯ ಸಮಯದಲ್ಲಿ ಚಲಾವಣೆ ಮಾಡುತ್ತಿದ್ದ ಸಂದರ್ಭ ಸಾರ್ವಜನಿಕರಾದ ಮಲ್ಲಿಕಾರ್ಜುನ , ಕುರುವಪ್ಪ ಹಾಗೂ ಸೋಮಶೇಖರಪ್ಪ ಎನ್ನುವರು ಆರೋಪಿ ಹನುಮಂತಪ್ಪನನ್ನು ಹಿಡಿದು ಠಾಣೆಗೆ ಒಪ್ಪಿಸಿದ್ದರು.
ಆರೋಪಿಗಳು ಹೂವಿನ ಹಡಗಲಿ, ಕೊಟ್ಟೂರು ಹಾಗೂ ಸುತ್ತಮುತ್ತಲ ಪ್ರದೇಶಗಳ ಜಾತ್ರೆ ಹಾಗೂ ಸಂತೆಗಳಲ್ಲಿ ಖೋಟಾ ನೋಟುಗಳನ್ನು ಚಲಾವಣೆ ಆಗಿರುವ ಅನುಮಾನವಿದೆ. ಕುರಿ ಹಾಗೂ ಜಾನುವಾರುಗಳನ್ನು ಖರೀದಿ ಮಾಡಿ ನಂತರ ಖೋಟಾ ನೋಟುಗಳನ್ನು ನೀಡುತ್ತಿದ್ದರು. ಆರೋಪಿಗಳು ನಕಲಿ ನೋಟುಗಳನ್ನು ಇಟ್ಟುಕೊಂಡು ವ್ಯಾಪಾರಕ್ಕೆ ಹೋಗುತ್ತಾರೆ, ರೈತರು ಕೇಳಿದ ಬೆಲೆಗೆ ಜಾನುವಾರುಗಳನ್ನು ಕೊಂಡು ನಕಲಿ ನೋಟ್ ಗಳನ್ನು ನೀಡಿ ಹೋಗುತ್ತಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಹನುಮಂತಪ್ಪ, ಪುಟ್ಟಪ್ಪ ಎನ್ನುವವರ ಮೇಲೆ ಖೋಟಾ ನೋಟು ಪ್ರಕರಣಗಳು ದಾಖಲಾಗಿವೆ. ಇನ್ನು ಈ ಗ್ಯಾಂಗ್ ನಲ್ಲಿ ಇನ್ನೂ ಸಾಕಷ್ಟು ಜನರಿದ್ದು ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳು ರೈತರಿಗೆ ನೀಡುವ ನೋಟುಗಳಲ್ಲಿ ಮಹಾತ್ಮ ಗಾಂಧಿ ಚಿತ್ರ ಸರಿಯಾಗಿ ಕಾಣಿಸುವುದಿಲ್ಲ, ಅಲ್ಲದೇ ನೋಟು ತೀರಾ ತೆಳುವಾಗಿ ಇರುತ್ತವೆ. ಹಳ್ಳಿಯ ಮುಗ್ಧ ಜನರನ್ನು ಟಾರ್ಗೆಟ್ ಮಾಡಿ ಹೆಚ್ಚು ಖೋಟಾ ನೋಟುಗಳನ್ನು ಜನರಿಗೆ ನೀಡಿ ಮೋಸ ಮಾಡುತ್ತಿದ್ದರು.

ಇನ್ನು ಮುಂದೆ ರೈತರಿಗೆ ಹಾಗೂ ಮುಗ್ಧ ಜನರು ವ್ಯಾಪಾರ ಮಾಡುವಾಗ ನೋಟುಗಳನ್ನು ಪರಿಶೀಲನೆ ಮಾಡಿ ತೆಗೆದುಕೊಳ್ಳಬೇಕು, ಏನಾದರೂ ಅನುಮಾನಗಳು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು ಎಂದು ದಾವಣನಗೆರೆ ಜಿಲ್ಲಾ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications