ವಸತಿ ಸಚಿವ ಸೋಮಣ್ಣರನ್ನು ತರಾಟೆಗೆ ತೆಗೆದುಕೊಂಡ ರೈತ!
ದಾವಣಗೆರೆ, ಮೇ 31: ದಾವಣಗೆರೆ ಜಿಲ್ಲೆ ಹರಿಹರದ ಶೇರಾಪುರದಲ್ಲಿ ಕೆಎಚ್ಬಿ ಲೇಔಟ್ ಕಾಮಗಾರಿಯನ್ನು ಪರಿಶೀಲನೆಗೆ ವಸತಿ ಸಚಿವ ವಿ.ಸೋಮಣ್ಣ ಆಗಮಿಸಿದ್ದ ವೇಳೆ ರೈತರೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಶೇರಾಪುರದಲ್ಲಿ ಲೇಔಟ್ ಕಾಮಗಾರಿ ಮಾಡಿದ್ದರಿಂದ ನೀರು ಬಸಿದು ತೋಟಕ್ಕೆ ಹಾನಿ ಮಾಡುತ್ತಿದೆ. ಲೇಔಟ್ನ ಎತ್ತರ ಹೆಚ್ಚಿಸಿದ ಕಾರಣ ಸುತ್ತಮುತ್ತಲಿನ ತೋಟಗಳಿಗೆ ನೀರು ನುಗ್ಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ನೀರು ನುಗ್ಗುತ್ತಿರುವುದರಿಂದ ನಮ್ಮ ಜಮೀನುಗಳಿಗೆ ಹಾನಿಯಾಗುತ್ತಿದೆ ಎಂದು ರೈತ ರಾಜಶೇಖರ್ ಎಂಬುವರು ಸಚಿವರಗೆ ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.

ನೀರು ಸರಾಗವಾಗಿ ಹರಿದು ಹೋಗಲು ಕಾಲುವೆಯನ್ನಾದರೂ ನಿರ್ಮಿಸಬೇಕು. ಇಲ್ಲಿನ ಅಧಿಕಾರಿಗಳು ಅದು ಮಾಡಿಲ್ಲ. ಕೂಡಲೇ ಉಂಟಾಗಿರುವ ಸಮಸ್ಯೆ ಬಗೆಹರಿಸಿ ಲೇಔಟ್ನಿಂದ ಜಮೀನುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಈ ಸಮಸ್ಯೆ ಪರಿಹರಿಸದಿದರೆ ನಾವೇ ಜೆಸಿಬಿ ಮೂಲಕ ಲೇಔಟ್ನ್ನು ತೆರವುಗೊಳಿಸುತ್ತೇವೆ ಎಂದು ರೈತ ರಾಜಶೇಖರ್ ಸಚಿವ ಸೋಮಣ್ಣಗೆ ನೇರವಾಗಿ ಎಚ್ಚರಿಕೆ ನೀಡಿದರು.

ರೈತ ಹುಚ್ಚ ಎಂದ ಸೋಮಣ್ಣ
Recommended Video
ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡ ರೈತನಿಗೆ ಹುಚ್ಚ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದು, ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡ ರೈತನ ಬಗ್ಗೆ ವಿ.ಸೋಮಣ್ಣ ಲಘುವಾದ ಮಾತನಾಡಿದರು. ""ಅವನು ಯಾವನಾದರೂ ಆಗಿರಲಿ ರೀ. ಒಳ್ಳೆ ಹುಚ್ಚ ಆಡಿದಂಗೆ ಆಡ್ತಾನೆ. ಹೀಗೆ ಎಲ್ಲಾರೂ ಉಂಟೇನು. ನೀವ್ಯಾರು ಮಾತನಾಡುವುದಕ್ಕೆ ಹೋಗಬೇಡಿ. ಇವರಿಗೆ ಪುಗ್ಸಟ್ಟೆ ಕೆಲಸ ಆಗಬೇಕು. ಸುಮ್ನೆ ಎಲ್ಲರ ಮುಂದೆ ಚೇಷ್ಠೆ ಮಾಡ್ತಾನೆ'' ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications