ಸ್ವಾಮೀಜಿ ಮಧ್ಯಸ್ಥಿಕೆಯಿಂದ ಕೊನೆಗೂ ಅಂತ್ಯವಾಯಿತು ಕೋಣದ ಗಲಾಟೆ
ದಾವಣಗೆರೆ, ಅಕ್ಟೋಬರ್ 19: ನಾಲ್ಕು ದಿನಗಳಿಂದ ಭಾರೀ ಸುದ್ದಿಯಾಗಿದ್ದ ದೇವರ ಕೋಣದ ಪ್ರಕರಣ ಕೊನೆಗೂ ಇತ್ಯರ್ಥವಾಗಿದೆ. ಹೊನ್ನಾಳಿಯ ಹಿರೇಕಲ್ ಮಠದ ಡಾ.ಚನ್ನಮಲ್ಲಿಕಾರ್ಜುನ ಸ್ವಾಮೀಜಿಗಳು ನಡೆಸಿದ ಶಾಂತಿ ಸಭೆಯಲ್ಲಿ ಒಂದು ಕೋಣಕ್ಕಾಗಿ ಎರಡು ಗ್ರಾಮಗಳ ನಡುವೆ ನಡೆದಿದ್ದ ಜಗಳ ಅಂತ್ಯಗೊಂಡಿದೆ.
ಇದೇ 14ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ದೇವಿಯ ಕೋಣವೊಂದನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮಸ್ಥರು ತೆಗೆದುಕೊಂಡು ಹೋಗಿದ್ದರು. ಎರಡು ಗ್ರಾಮದವರು ಇದು ನಮ್ಮ ಕೋಣ ಎಂದು ಜಗಳ ಆರಂಭಿಸಿದ್ದರು. ಜಗಳದ ಕುರಿತು ವಿಷಯ ತಿಳಿದ ಪೊಲೀಸರು ಕೋಣವನ್ನು ತಾತ್ಕಾಲಿಕವಾಗಿ ಶಿವಮೊಗ್ಗ ಗೋ ಶಾಲೆಗೆ ಸ್ಥಳಾಂತರಿಸಿದ್ದರು. ಜತೆಗೆ ಕೋಣದ ಡಿಎನ್ ಎ ಪರೀಕ್ಷೆ ಮಾಡಿಸಲು ನಿರ್ಧರಿಸಿದ್ದರು.
ನಿನ್ನೆ ಪೊಲೀಸರು ಎರಡು ಗ್ರಾಮಗಳ ಗ್ರಾಮಸ್ಥರನ್ನು ಹೊನ್ನಾಳಿ ಹಿರೇಕಲ್ ಮಠಕ್ಕೆ ಕರೆಸಿದ್ದಾರೆ. ಈ ವೇಳೆ ಉಭಯ ಗ್ರಾಮಸ್ಥರ ಸಭೆ ನಡೆಸಿ ಮಠದ ಗದ್ದುಗೆ ಮುಟ್ಟಿ ಪ್ರಮಾಣ ಮಾಡುವಂತೆ ಹಿರೇಕಲ್ ಮಠದ ಡಾ. ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹಾರನಹಳ್ಳಿ ಹಾಗೂ ಬೇಲಿಮಲ್ಲೂರು ಗ್ರಾಮಸ್ಥರಿಗೆ ಆದೇಶ ಮಾಡಿದರು.

ಎರಡು ಗ್ರಾಮದವರು ಪ್ರಮಾಣ ಮಾಡುತ್ತಿದ್ದಂತೆ ಸ್ವಾಮೀಜಿಗಳು ಕೋಣವನ್ನು ಬೇಲಿ ಮಲ್ಲೂರಿನವರು ತೆಗೆದುಕೊಂಡು ಹೋಗಲಿ ಎಂದು ಆದೇಶ ನೀಡಿದರು. ನಮ್ಮೂರ ದೇವಿಯ ಕೋಣಕ್ಕಾಗಿ ನಾವು ಹೋರಾಟ ಮಾಡಿದ್ದೆವು. ತಾಲೂಕು ಆಡಳಿತ ಕೂಡ ಮುತುವರ್ಜಿ ವಹಿಸಿ ಮಠದ ಅಂಗಳದಲ್ಲಿ ಎರಡು ಗ್ರಾಮಗಳ ಗ್ರಾಮಸ್ಥರ ಜೊತೆ ಮಾತಾಡಿ ನಮ್ಮ ಕೋಣ ನಮಗೆ ಒಪ್ಪಿಸಿದ್ದಾರೆ ಎಂದು ಬೇಲಿಮಲ್ಲೂರಿನವರು ಸಂತಸಪಟ್ಟರು. ಆದರೆ ಹಾರನಹಳ್ಳಿಯವರು ಸ್ವಲ್ಪ ಬೇಸರಗೊಂಡಿದ್ದರೂ ಒಪ್ಪಿಗೆ ಇರುವುದಾಗಿ ಹೇಳಿದರು.
ಕೊನೆಗೂ ಕಳೆದ ನಾಲ್ಕು ದಿನಗಳಿಂದ ಭಾರೀ ಸುದ್ದಿ ಮಾಡಿದ್ದ ಕೋಣದ ವಿಚಾರ ಅಂತ್ಯ ಕಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications