ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್ಐಆರ್
ದಾವಣಗೆರೆ, ನವೆಂಬರ್, 15: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾಗಿದ್ದ ಮನೆಗಳಿಗೆ ಪರಿಹಾರ ಒದಗಿಸಲು ಪ್ರಸ್ತಾವನೆ ಸಲ್ಲಿಸುವಂತೆ ಒತ್ತಡ ಹೇರಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪರಿಹಾರ ಕೇಳಲು ಬಂದಿದ್ದ ಜನರಿಗೆ ಬೆದರಿಕೆ ಹಾಕಿದ್ದರು. ಆದ್ದರಿಂದ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳಗುತ್ತಿ ಹೋಬಳಿಯ ಗ್ರಾಮ ಲೆಕ್ಕಿಗ ಎಂ.ಎಸ್. ಪ್ರಶಾಂತ್ ಕುಮಾರ್ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಳೆದ ಅಕ್ಟೋಬರ್ 30ರಂದು ಶಾಸಕ ರೇಣುಕಾಚಾರ್ಯರ ಆಹ್ವಾನದ ಮೇರೆಗೆ ಹೊನ್ನಾಳಿ ಪಟ್ಟಣದಲ್ಲಿನ ಅವರ ನಿವಾಸಕ್ಕೆ ಹೋಗಿದ್ದೆ. ಆಗ ಕುಂಕುವ ವೃತ್ತಕ್ಕೆ ಸಂಬಂಧಿಸಿದಂತೆ ಕೊಗೆನಹಳ್ಳಿ ಗ್ರಾಮದ ದೇವರಾಜ್ ಅರಸ್ ಸೇರಿದಂತೆ ಕೆಲ ಗ್ರಾಮಸ್ಥರು ಮತ್ತು ಸಾರ್ವಜನಿಕರು ಇದ್ದರು. ಆಗ ಕೂಗನಹಳ್ಳಿ ಗ್ರಾಮಕ್ಕೆ ಸಂಬಂಧಿಸಿದಂತೆ ರೂಪಾ ಬಾಯಿ, ಸಾವಿತ್ರಿ ಬಾಯಿ, ಶಿವರಾಜ ನಾಯ್ಕ ಎಂಬುವವರ ಮನೆಗಳು ಮಳೆಯಿಂದ ಹಾನಿ ಆಗಿದ್ದವು. ಅದಕ್ಕಾಗಿ ಹಾನಿಗೀಡಾದ ಮನೆಗಳಿಗೆ ಪರಿಹಾರ ನೀಡುಲು ಕಡತ ತಯಾರಿಸಲು ಶಾಸಕರು ಹೇಳಿದರು. ಆಗ ನಾನು ಸಂಬಂಧಿಸಿದ ದಾಖಲೆ ಹಾಗೂ ವಾಸ್ತಾವಾಂಶದ ವಿವರಣೆ ನೀಡಿದೆ ಎಂದು ಉಲ್ಲೇಖಿಸಿದ್ದಾರೆ.

ಶಾಸಕರಿಂದ ಗ್ರಾಮ ಲೆಕ್ಕಿಗನಿಗೆ ಬೆದರಿಕೆ
ಆಗ ಶಾಸಕರು ವಾಸ್ತವಾಂಶ ಇಲ್ಲದೆ ಅವರಿಗೆ ಪರಿಹಾರ ಸಿಗಲ್ಲ. ನಿನ್ನ ವರದಿ ಬದಲಾಯಿಸು ಎಂದಿದ್ದರು. ಇಲ್ಲದಿದ್ದರೆ ತಾಲೂಕು ಬಿಟ್ಟು ಹೋಗು ಎಂದು ಗದರಿಸಿದ್ದರು. ಆ ವೇಳೆ ಎಲ್ಲಿಗೆ ಬೇಕಾದರೂ ಟ್ರಾನ್ಸ್ಫರ್ ಮಾಡಿ ಹೋಗಿ ಕೆಲಸ ಮಾಡುತ್ತೇನೆ ಎಂದಿದ್ದೆ. ಪುನಃ ಶಾಸಕರು ನೀನು ನಾಳೆಯಿಂದ ಡ್ಯೂಟಿಗೆ ಬರಬೇಡ. ರಜೆ ಹಾಕಿ ಹೋಗು ಎಂದು ಆದೇಶಿಸುವ ರೀತಿಯಲ್ಲಿ ಗದರಿಸಿದ್ದರು. ಆಗ ನಾನು ರಜೆ ಹಾಕುವುದು ವೈಯಕ್ತಿಕ ವಿಚಾರ ಎಂದು ಹೇಳಿದಾಗ ಶಾಸಕರು ನನಗೆ ಗೆಟ್ಔಟ್ ಎಂದು ಬೆದರಿದ್ದರು. ತಕ್ಷಣ ನಾನು ಅವರ ಮನೆಯಿಂದ ಹೊರಬಂದಿದ್ದೆ.

ಎಂ.ಎಸ್. ಪ್ರಶಾಂತ್ಗೆ ಗದರಿದ್ದ ಶಾಸಕ
ಈ ಹಿಂದೆಯೂ ಸಹ ನನ್ನ ಕೆಲಸದ ವ್ಯಾಪ್ತಿಗೆ ಬರುವ ಕುಂಕುವ ಒಡೆಯರಹತ್ತೂರು - ಕೂಗನಹಳ್ಳಿ ಮತ್ತು ಗಡೇಕಟ್ಟೆ ಗ್ರಾಮಗಳಿಗೆ ಪರಿಶೀಲನೆಗೆ ಹೋಗಿದ್ದೆ. ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು, ರಾಜಸ್ವ ನಿರೀಕ್ಷಕರು, ಪಿಡಿಒ ಅವರೊಂದಿಗೆ ಮಳೆಯಿಂದ ಹಾನಿಗೀಡಾದ ಸ್ಥಳದಲ್ಲಿ ಪರಿಶೀಲನೆ ಮಾಡುತ್ತಿದೆ. ಈ ಸಂದರ್ಭದಲ್ಲಿ ಹಾನಿಗೀಡಾದ ಕೆಲವು ಮನೆಗಳಿಗೂ ಪರಿಹಾರ ಬರುವಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. "ನಾನು ಇದಕ್ಕೆ ವಿವರಣೆ ನೀಡುವಾಗ ಹೇಯ್ ಏನೂ ಮಾತನಾಡಬೇಡ ಎಂದು ನನಗೆ ಗದರಿಸಿದ್ದರು. ಮೂರು ಲಕ್ಷ ಅದಕ್ಕೆ ಹಾಕು, 5 ಲಕ್ಷ ಇದಕ್ಕೆ ಹಾಕಿ ವರದಿ ನೀಡು" ಎಂದರು ಆರೋಪಿಸಿದ್ದಾರೆ.

ಹನುಮಂತಪ್ಪ ಸೊರಟೂರು ಆರೋಪವೇನು?
ಭಾರಿ ಮಳೆಯಿಂದ ಹಾನಿಗೀಡಾಗಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಅನೇಕ ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರು ಮಾಡುವಲ್ಲಿ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿಫಲವಾಗಿದ್ದಾರೆ. ಹೀಗೆ ಶಾಸಕರ ವಿರುದ್ಧ ಭ್ರಷ್ಟಾಚಾರ ವಿರೋಧಿ ವೇದಿಕೆ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಸೊರಟೂರು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಕುವ ಗ್ರಾಮದಲ್ಲಿ 200 ಮನೆಗಳಿದ್ದು, ಮಳೆಯಿಂದ 160 ಮನೆಗಳು ಹಾಳಾಗಿವೆ. ನಿರ್ಮಾಣಕ್ಕೆ ಮಂಜೂರಾತಿ ಮಾಡುವಂತೆ ಅಧಿಕಾರಿಗಳ ಮೇಲೆ ರೇಣುಕಾಚಾರ್ಯರು ಒತ್ತಾಯ ಹಾಕಿದ್ದಾರೆ. ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಹನುಮಂತಪ್ಪ ಸೊರಟೂರು ಆರೋಪವೇನು?
ಭಾರಿ ಮಳೆಯಿಂದ ಹಾನಿಗೀಡಾಗಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಅನೇಕ ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರು ಮಾಡುವಲ್ಲಿ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿಫಲವಾಗಿದ್ದಾರೆ. ಹೀಗೆ ಶಾಸಕರ ವಿರುದ್ಧ ಭ್ರಷ್ಟಾಚಾರ ವಿರೋಧಿ ವೇದಿಕೆ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಸೊರಟೂರು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಕುವ ಗ್ರಾಮದಲ್ಲಿ 200 ಮನೆಗಳಿದ್ದು, ಮಳೆಯಿಂದ 160 ಮನೆಗಳು ಹಾಳಾಗಿವೆ. ನಿರ್ಮಾಣಕ್ಕೆ ಮಂಜೂರಾತಿ ಮಾಡುವಂತೆ ಅಧಿಕಾರಿಗಳ ಮೇಲೆ ರೇಣುಕಾಚಾರ್ಯರು ಒತ್ತಾಯ ಹಾಕಿದ್ದಾರೆ. ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಯಾವುದೇ ಅಧಿಕಾರಿಗಳ ಮೇಲೆ ಒತ್ತಡ ಹೇರಿಲ್ಲ. ಭ್ರಷ್ಟಾಚಾರ ಮಾಡಿಲ್ಲ ಎನ್ನುವುದಾದರೆ ರೇಣುಕಾಚಾರ್ಯ ಅವರು ಧರ್ಮಸ್ಥಳದ ಮಂಜುನಾಥನ ಮೇಲೆ ಆಣೆ ಮಾಡಲಿ. ನಾನು ಸಹ ಆಣೆ ಮಾಡುತ್ತೇನೆ ಎಂದು ತಿಳಿಸಿದರು. ಚುನಾವಣೆ ಸಮೀಪಿಸುತ್ತಿರುವಾಗ ಫಲಾನುಭವಿಗಳಿಗೆ ಪ್ಯಾಕೇಜ್ ವಿತರಣೆ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ರೇಣುಕಾಚಾರ್ಯ ಏನಾದರೂ ಗೆದ್ದರೆ ಹೋರಾಟಗಾರರು ಉಸಿರಾಡುವುದು ಕಷ್ಟವಾಗುತ್ತದೆ. ರೇಣುಕಾಚಾರ್ಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಧನಂಜಯ ಹರಮಘಟ್ಟ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications