ದಾವಣಗೆರೆಯಲ್ಲಿ ದುಪ್ಪಟ್ಟಾಯ್ತು ಹೂ ದರ: ದಸರಾಕ್ಕಿಂತ ದೀಪಾವಳಿಗೆ ಹಣ್ಣು ಅಗ್ಗ
ದಾವಣಗೆರೆ ಅಕ್ಟೋಬರ್ 22: ಹಬ್ಬ ಬಂತೆಂದರೆ ಸಾಕು ಎಲ್ಲೆಡೆ ಸಂಭ್ರಮ ಮನೆ ಮಾಡುತ್ತದೆ. ಜೊತೆಗೆ ಹೂವು, ಹಣ್ಣುಗಳ ದರ ಕೇಳಿದರೆ ಯಾಕಾದರೂ ಹಬ್ಬ ಬರುತ್ತೆ ಎಂಬ ಮಾತು ಸಹ ಕೇಳಿ ಬರುತ್ತಿದೆ. ಈ ಬಾರಿ ವರುಣನ ಆರ್ಭಟದಿಂದಾಗಿ ಗ್ರಾಮೀಣ ಭಾಗದಲ್ಲಿನ ಜನರು ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ.
ಒಂದೇ ತಿಂಗಳಿನಲ್ಲಿ ದಸರಾ, ಆಯುಧಪೂಜೆ ಹಾಗೂ ದೀಪಾವಳಿ ಬಂದಿರುವ ಕಾರಣ ಖರ್ಚು ಹೆಚ್ಚಾಗಿದೆ. ಹಬ್ಬಕ್ಕೆ ಇನ್ನು ಮೂರು ದಿನಗಳು ಬಾಕಿ ಇದೆ. ಆಗಲೇ ಹೂವಿನ ದರ ಗಗನಕ್ಕೇರಿದೆ. ನಾಳೆಯಿಂದ ಇನ್ನು ಹೆಚ್ಚಾಗಲಿದೆ.
ಆಯುಧ ಪೂಜೆ ದಿನವಂತೂ ಹೂವಿನ ದರ ಕೇಳಿ ಜಿಲ್ಲೆಯ ಜನರು ಕಂಗಾಲಾಗಿದ್ದರು. ಇನ್ನು ಈಗಾಗಲೇ ದೀಪಾವಳಿ ಸಿದ್ಧತೆ ಕೂಡ ಆರಂಭವಾಗಿದೆ. ಜೊತೆಗೆ ವಸ್ತುಗಳ ಬೆಲೆ ಅದರಲ್ಲೂ ಹೂವಿನ ದರ ಗಗನಕ್ಕೇರುತ್ತಿದೆ.

ದಾವಣಗೆರೆಯಲ್ಲಿ ಹೂವಿನ ಇಂದಿನ ದರವೆಷ್ಟು..?
ಮಾರುಕಟ್ಟೆಯಲ್ಲಿ ಸೇವಂತಿಗೆ ಒಂದು ಮಾರು ಹೂವಿಗೆ 70 ರೂಪಾಯಿ ಇದೆ. ದಿನ ಕಳೆದಂತೆ ದರ ಹೆಚ್ಚಾಗುತ್ತಿದೆ. ಚೆಂಡು ಹೂ, ಗುಲಾಬಿ, ಸೇವಂತಿಗೆ, ಮಲ್ಲಿಗೆ ಸೇರಿದಂತೆ ಎಲ್ಲಾ ಹೂವುಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ದಸರಾ ಹಬ್ಬದ ವೇಳೆ 250ರಿಂದ 300 ರೂಪಾಯಿ ಸೇವಂತಿಗೆ ಹೂವಿನ ದರ ಇತ್ತು. ಇಂದು ಕಡಿಮೆ ಅನಿಸಿದರೂ ದೀಪಾವಳಿ ಹಬ್ಬದ ಸಮಯದಲ್ಲಿ 200 ರೂಪಾಯಿವರೆಗೆ ಹೋಗಬಹುದು ಎಂದು ಹೂವಿನ ವ್ಯಾಪಾರಿಗಳು ಹೇಳಿದ್ದಾರೆ.
ಒಂದು ಹೂವಿನ ಹಾರ ಈಗಲೇ 50 ರಿಂದ 150ರೂಪಾಯಿವರೆಗೆ ಮಾರಾಟ ಮಾಡಲಾಗುತ್ತಿದೆ. ಇದು ಇನ್ನು ಹೆಚ್ಚಳವಾಗಲಿದೆ. ಸೋಮವಾರ ದೀಪಾವಳಿ ಹಬ್ಬ. ಈಗಲೇ ದರಗಳು ದುಪ್ಪಟ್ಟು ಆಗುತ್ತಿದೆ ಎನ್ನುವುದು ಗ್ರಾಹಕರ ಮಾತಾಗಿದೆ.

ತಮ್ಮ ಸಂಕಷ್ಟ ತೋಡಿಕೊಂಡ ಹೂವು ಬೆಳೆಗಾರರು
ಹೂವಿನ ದರ ಏರಿಕೆಗೆ ಪ್ರಮುಖ ಕಾರಣ ಈ ಬಾರಿ ಸುರಿದ ಭಾರಿ ಮಳೆ. ಸೇವಂತಿಗೆ ಸೇರಿದಂತೆ ಬೇರೆ ಬೇರೆ ಹೂವುಗಳು ನೀರಿನಲ್ಲಿ ಹಾಳಾಗಿವೆ. ಬೆಳೆ ಕಡಿಮೆ ಬಂದಿದೆ. ಜೊತೆಗೆ ಬೇಡಿಕೆಗೆ ತಕ್ಕಂತೆ ಪೂರೈಕೆ ಇಲ್ಲ. ಮಾರುಕಟ್ಟೆಗೆ ಹೂವು ಕಡಿಮೆ ಬರುತ್ತಿರುವ ಕಾರಣ ದರ ಹೆಚ್ಚಳವಾಗಿದೆ. ಜನರು ಚೌಕಾಸಿ ವ್ಯಾಪಾರ ಮಾಡುತ್ತಾರೆ. ಕೆಲವರು ದರ ಕೇಳಿ ಇನ್ನು ಕಡಿಮೆಯಾಗಿಲ್ವಾ, ಹೂ ಬೇಡ ಬಿಡಿ ಎಂದು ಮುಂದಕ್ಕೆ ಹೋಗುತ್ತಾರೆ. ಮತ್ತೆ ಕೆಲವರು ಎರಡು ಮಾರು ಹೂವು ಖರೀದಿ ಮಾಡುವವರು ಕೇವಲ ಅರ್ಧ ಮಾರು ಮಾತ್ರ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಹೂವಿನ ವ್ಯಾಪಾರಿಗಳು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.
ಇನ್ನು ದೀಪಗಳ ಹಬ್ಬದಲ್ಲಿ ಲಕ್ಷ್ಮೀಗೆ ವಿಶೇಷ ಪ್ರಾಧಾನ್ಯತೆ. ಪೂಜೆ, ಪುನಸ್ಕಾರ ಮಾಡಲಾಗುತ್ತದೆ. ಹಾಗಾಗಿ ಹೂವು ಬೇಕು. ಈ ಕಾರಣಕ್ಕೆ ದುಬಾರಿ ಆದರೂ ಖರೀದಿ ಮಾಡಬೇಕು. ಹೀಗಾಗಿ ನಮ್ಮ ಜೇಬಿಗೆ ಕತ್ತರಿ ಬಿದ್ದರೂ ಖರೀದಿಸುತ್ತೇವೆ ಎಂದು ಗ್ರಾಹಕರು ಹೇಳಿದ್ದಾರೆ.

ದಸರಾಕ್ಕಿಂತ ದೀಪಾವಳಿಗೆ ಅಗ್ಗ
ಇನ್ನು ಸೇಬು ಹಣ್ಣು ಸೇರಿದಂತೆ ಕಿತ್ತಳೆ, ಮೂಸುಂಬೆ, ದ್ರಾಕ್ಷಿ, ಸೀಬೆಹಣ್ಣು, ಬಾಳೆಹಣ್ಣಿನ ದರ ಸ್ವಲ್ಪ ಜನರ ಕೈಗೆಟುಕುವಂತೆ ಸಿಗುತ್ತಿದೆ. ಸೇಬಿನ ದರ ಒಂದು ಕೆಜಿಗೆ 140 ರೂಪಾಯಿ ಇದೆ. ದಸರಾ ಹಬ್ಬದ ವೇಳೆ 250 ರೂಪಾಯಿ ಇತ್ತು. ಈ ಬಾರಿ ಹೆಚ್ಚಳವಾಗಲ್ಲ. ಯಾಕೆಂದರೆ ಎಲ್ಲೆಡೆಯಿಂದ ಯಥೇಚ್ಛವಾಗಿ ಹಣ್ಣು ಬಂದಿರುವ ಕಾರಣ ಬೆಲೆ ಜಾಸ್ತಿಯಾಗದು. ಹೆಚ್ಚು ಕಡಿಮೆ ಇದೇ ದರ ಇರಲಿದೆ ಎಂದು ದಾವಣಗೆರೆ ಮಾರು ಕಟ್ಟೆಯ ಹಣ್ಣಿನ ವ್ಯಾಪಾರಿಗಳು ಹೇಳಿದ್ದಾರೆ.

ಈ ಬಾರಿ ಸರಳ ದೀಪಾವಳಿ ಆಚರಣೆಗೆ ಒತ್ತು
ದೀಪಾವಳಿ ಹಬ್ಬ ಆಚರಣೆಯನ್ನು ಗ್ರಾಮೀಣ ಭಾಗದಲ್ಲಿ ವೈಭವ, ಸಡಗರ, ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಜನರು ಮಳೆ ಅವಾಂತರದಿಂದ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದಾರೆ. ಮಳೆ ನೀರಿನಲ್ಲಿ ಬೆಳೆ ಕೊಚ್ಚಿ ಹೋದ ಕಾರಣ ಬಹುತೇಕ ರೈತರು ನಷ್ಟದಲ್ಲಿ ಸಿಲುಕಿದ್ದಾರೆ. ಹಾಗಾಗಿ ಸರಳ ದೀಪಾವಳಿಯತ್ತ ಜನರು ಹೆಚ್ಚು ಗಮನ ನೀಡುತ್ತಿದ್ದಾರೆ. ಹೀಗಾಗಿ ಈ ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಸರಳ ದೀಪಾವಳಿ ಆಚರಣೆ ನಡೆಯಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications