ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹರಿಹರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಲ್ಲಿ ಸಿದ್ದರಾಮಯ್ಯರಿಂದ ನಾಡಗೀತೆಗೆ ಅವಮಾನ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಅಕ್ಟೋಬರ್ 13: ಮಾಜಿ ಮುಖ್ಯಮಂತ್ರಿ- ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 'ಬಾಡಿ ಲಾಂಗ್ವೇಜ್' ಭಾನುವಾರ ದಾವಣಗೆರೆಯ ಹರಿಹರ ತಾಲೂಕಿನಲ್ಲಿ ಚರ್ಚೆಗೆ ಗ್ರಾಸವಾಯಿತು. ಕಾರ್ಯಕ್ರಮವೊಂದರಲ್ಲಿ ನಾಡಗೀತೆ ಹಾಡುವ ವೇಳೆ ಉಗುಳುವುದು, ಮೈ- ಕೈ ಅಲ್ಲಾಡಿಸುವ ಮೂಲಕ ಅಗೌರವ ತೋರಿಸಿದ್ದಾರೆ ಎಂಬ ಚರ್ಚೆಗೆ ನಾಂದಿ ಹಾಡಿದ್ದಾರೆ ಸಿದ್ದರಾಮಯ್ಯ.

15 ಕ್ಷೇತ್ರದ ಉಪ ಚುನಾವಣೆ; ಸಿದ್ದರಾಮಯ್ಯ ಟಾರ್ಗೆಟ್ 10 ಕ್ಷೇತ್ರ15 ಕ್ಷೇತ್ರದ ಉಪ ಚುನಾವಣೆ; ಸಿದ್ದರಾಮಯ್ಯ ಟಾರ್ಗೆಟ್ 10 ಕ್ಷೇತ್ರ

ಹರಿಹರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಕ್ರಮದ ವೇಳೆ ಈ ಘಟನೆ ನಡೆಯಿತು. ಕ್ಯಾಂಟೀನ್ ಉದ್ಘಾಟನೆಗಾಗಿ ಬಂದಿದ್ದ ಸಿದ್ದರಾಮಯ್ಯ ಅವರು, ನಾಡಗೀತೆ ಹಾಡುತ್ತಿದ್ದ ವೇಳೆಯಲ್ಲಿ ಬಾಯಲ್ಲಿ ಮೆಲುಕು ಹಾಕುತ್ತಿದ್ದುದನ್ನು ಉಗುಳಿದರು. ಮೈ- ಕೈ ಅಲುಗಾಡಿಸುತ್ತಾ ನಿಂತಿದ್ದರು. ಈ ಘಟನೆ ವಿಡಿಯೋದಲ್ಲಿ ಚಿತ್ರೀಕರಣ ಕೂಡ ಆಗಿದೆ.

 Former CM Siddaramaiah Insult Nada Geethe In Davanagere

ಇನ್ನು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ನಂತರ ಪಲಾವ್ ತಿಂದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಎಸ್. ಎಸ್. ಮಲ್ಲಿಕಾರ್ಜುನ್ ಮತ್ತಿತರರು ಭಾಗವಹಿಸಿದ್ದರು. ಉದ್ಘಾಟನೆ ಕಾರ್ಯಕ್ರಮಕ್ಕಿಂತ ಸಿದ್ದರಾಮಯ್ಯ ಅವರ ಬಾಡಿ ಲಾಂಗ್ವೇಜ್ ಹೆಚ್ಚು ಚರ್ಚೆಗೆ ಒಳಗಾಯಿತು.

English summary
Opposition party leader of Karnataka, former CM Siddaramaiah insulted naada geethe in Davanagere on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X