ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಂಚಮಸಾಲಿ ಸ್ವಾಮೀಜಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಫೆಬ್ರವರಿ 03: "ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಯಾರೂ ಸುಮ್ಮನಿರಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಲು ಬಂದರೆ ನಿಮ್ಮ ಬಂಡವಾಳ ಹೊರಗೆ ತೆಗೆಯುತ್ತೇನೆ" ಎಂದು ದಾವಣಗೆರೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ತಮ್ಮ ವಿರೋಧಿಗಳಿಗೆ ಎಚ್ಚರಿಕೆ ನೀಡಿದರು‌.

ಹರಿಹರದ ವಾಸವಿ ಕಲ್ಯಾಣ ಮಂಟಪದಲ್ಲಿ ತುಮಕೂರು ಸಿದ್ಧಗಂಗಾ ಶ್ರೀ ಹಾಗೂ ಪೇಜಾವರ ಶ್ರೀ ಪುಣ್ಯಸ್ಮರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಂಗವಾಗಿ ಎಚ್.ಶಿವಪ್ಪ ಅಭಿಮಾನಿಗಳ ಬಳಗ ಹಮ್ಮಿಕೊಂಡಿದ್ದ ಸಭೆಯಲ್ಲಿ ಹರಿಹರದ ಮಾಜಿ ಶಾಸಕ ಮಾತನಾಡಿದ ಈ ವಿಡಿಯೋ ಈಗ ವೈರಲ್ ಆಗಿದೆ. "ನನ್ನನ್ನು ಮುಗಿಸಲು ಬಂದರೆ ನಾನು ನಿಮ್ಮನ್ನು ಮುಗಿಸುತ್ತೇನೆ. ನನ್ನನ್ನು ಮುಗಿಸಲು ನಿಮ್ಮಿಂದ ಸಾಧ್ಯವಿಲ್ಲ. ನಿಮ್ಮ ಬಂಡವಾಳವನ್ನು ಇಂಚಿಂಚು ಬಯಲಿಗೆಳೆಯುತ್ತೇನೆ" ಎಂದಿದ್ದಾರೆ ಅವರು. "ಅಲ್ಪಸ್ಪಲ್ಪ ತಿಳಿದೋರು ಕುರ್ಚಿ ಮೇಲೆ ಕೂತು ಹಗುರವಾಗಿ ಮಾತನಾಡಿದರೆ ಅಂಥವರ ನಾಲಿಗೆ ಕಟ್​ ಮಾಡೋ ಶಕ್ತಿ ನನ್ನಲ್ಲಿದೆ" ಎಂದು ಗುಡುಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗಾದರೂ ಕೊಟ್ಟುಕೊಳ್ಳಲಿ: ಶಾಮನೂರುಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗಾದರೂ ಕೊಟ್ಟುಕೊಳ್ಳಲಿ: ಶಾಮನೂರು

"ಹುಲಿ ಸುಮ್ಮನಿದೆ ಎಂದ ಮಾತ್ರಕ್ಕೆ ಅದು ಬಲಹೀನವಾಗಿದೆ ಎಂದರ್ಥವಲ್ಲ. ಮುಂದೆ ಬೇಟೆಗೆ ಸಿದ್ಧವಾಗಿದೆ ಎಂದರ್ಥ. ನಾನು ಯಾವುದೋ ಒಂದು ಸಮಾಜದ ನಾಯಕನಲ್ಲ, ಕಳೆದ ಚುನಾವಣೆಯಲ್ಲಿ ಸೋತಿರಬಹುದು. ಆದರೆ, ರಾಜಕೀಯ ಕಾರಣದಿಂದ ಈ ಫಲಿತಾಂಶ ಬಂದಿದೆ" ಎಂದು ಸಮರ್ಥಿಸಿಕೊಂಡರು.

Former MLA HS Shivashankar warned his opponents In Davanagere

ಹರಿಹರದ ಘಟನೆ ಬಗ್ಗೆ ಸ್ವಾಮಿಜಿಗಳ ಕ್ಷಮೆ ಕೋರಿದ ಯಡಿಯೂರಪ್ಪಹರಿಹರದ ಘಟನೆ ಬಗ್ಗೆ ಸ್ವಾಮಿಜಿಗಳ ಕ್ಷಮೆ ಕೋರಿದ ಯಡಿಯೂರಪ್ಪ

ಜನವರಿಯಲ್ಲಿ ಪಂಚಮಸಾಲಿ ಪೀಠದಲ್ಲಿ ನಡೆದ ಹರ ಜಾತ್ರೆಗೆ ಪಂಚಮಸಾಲಿ ಸಮಾಜದವರೇ ಆದ ಎಚ್ ಎಸ್ ಶಿವಶಂಕರ್ ಅವರನ್ನು ಆಹ್ವಾನ ಮಾಡಿರಲಿಲ್ಲ. ಇದರಿಂದ ಪಂಚಮಸಾಲಿ ಪೀಠದ ಸ್ವಾಮೀಜಿ ವಚನಾನಂದ ಶ್ರೀಗಳಿಗೆ ತಿರುಗೇಟು ನೀಡಿರಬಹುದು ಎನ್ನಲಾಗುತ್ತಿದೆ.

English summary
Former MLA HS Shivashankar warned his opponents at an event in Harihara, Davanagere
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X