ಜಿಎಂಎಸ್-ಎಂಪಿಆರ್ ಮಾತಿನ ಸಮರ: ಸಿದ್ದೇಶ್ವರರ ಆ ಮಾತಿನಿಂದ ಮನಸ್ಸಿಗೆ ನೋವಾಗಿದೆ ಎಂದ ರೇಣುಕಾಚಾರ್ಯ
ದಾವಣಗೆರೆ, ಜುಲೈ 19: ಹೊನ್ನಾಳಿ - ನ್ಯಾಮತಿ ಅವಳಿ ತಾಲೂಕಿನಲ್ಲಿ ನಮ್ಮ ಸಮಾಜದವರು ಬಹಳ ಜನ ಇದ್ದಾರೆ ಎಂಬ ಮಾತು ಹೇಳಿರುವುದು ಮನಸ್ಸಿಗೆ ನೋವು ತಂದಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ.
ಹೊನ್ನಾಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಾಧು ಲಿಂಗಾಯತ ಸಮಾಜದವರು ಹೆಚ್ಚು ಹೊನ್ನಾಳಿ - ನ್ಯಾಮತಿ ತಾಲೂಕಿನಲ್ಲಿ ಇದ್ದು, ನಮ್ಮ ಸಮಾಜದವರು ಹೆಚ್ಚಿದ್ದಾರೆ ಎಂಬುದಾಗಿ ಹೇಳಿದ್ದು ನನಗೆ ನೋವು ತಂದಿದೆ. ಅವಳಿ ತಾಲೂಕಿನಲ್ಲಿ ಎಲ್ಲಾ ಸಮಾಜದವರು ಬಿಜೆಪಿ ಬೆಂಬಲಿಸಿದ್ದಾರೆ. ಮಾತ್ರವಲ್ಲ, ಸಿದ್ದೇಶ್ವರ ಅವರು ಬಿಜೆಪಿಯವರು ಇದ್ದಾರೆ ಎಂದಿದ್ದಾರೆ ಸಂತೋಷಪಡುತ್ತಿದ್ದೆ ಎಂದು ಹೇಳಿದರು.

ಸಿದ್ದೇಶ್ವರ ಅವರು ಜಾತಿ ಆಧಾರದ ಮೇಲೆ ಸ್ಪರ್ಧೆ ಮಾಡುತ್ತೇನೆಂದು ಹೇಳಿದ್ದು ನೋವುಂಟು ಮಾಡಿದೆ. ಸಿದ್ದೇಶಣ್ಣ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರು ಬಹಳ ಜನ ಇದ್ದಾರೆ ಎಂದು ಹೇಳಿದ್ದರೆ ಸ್ವಾಗತಿಸುತ್ತಿದ್ದೆ. ಆದರೆ ಸಮಾಜ ಎಂದು ಬಳಸಿದ್ದು ಮನಸಿಗೆ ನೋವುಂಟು ಮಾಡಿದೆ. ನಾನು ಲೋಕಸಭೆ ಚುನಾವಣೆ ಸಂಬಂಧ ಪಕ್ಷ ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ತಲೆ ಬಾಗುತ್ತೇನೆ ಎಂದು ತಿಳಿಸಿದರು.
ನಾನು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಆರಂಭದಲ್ಲಿ ಹೇಳಿದ್ದೆ. ಆದ್ರೆ, ಕಾರ್ಯಕರ್ತರು, ಮುಖಂಡರು ಒತ್ತಾಯ ಮಾಡಿದ್ದರಿಂದ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆಂದು ಹೇಳಿದ್ದೇನೆ. ಸಿದ್ದೇಶಣ್ಣ ಹಾಗೂ ನನ್ನ ನಡುವೆ ಯಾವುದೇ ಸಂಘರ್ಷ ಇಲ್ಲ. ಸಿದ್ದೇಶಣ್ಣ ಹಿರಿಯರು, ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುವುದಾದರೆ ಸ್ವಾಗತಿಸುತ್ತೇನೆ. ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಸರ್ವ ಧರ್ಮದವರು ನಮಗೆ ಮತ ನೀಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಮಹಾಘಟ ಬಂಧನನ್ನಲ್ಲಿ ಇಂಡಿಯಾ ಎಂದು ನಾಮಕರಣ ಮಾಡಿದ್ದಾರೆ. ನಿನ್ನೆ ಸೇರಿದವರಿಗೆ ಯಾವುದೇ ಸಿದ್ಧಾಂತ ಇಲ್ಲ, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಒಂದಾಗಿದ್ದಾರೆ. ಹುಲಿ ಎಂದಿಗೂ ಹುಲ್ಲು ತಿನ್ನೋಲ್ಲಾ, ನರೇಂದ್ರ ಮೋದಿಯವರು ಹುಲಿ. ಭ್ರಷ್ಟಾಚಾರ ಮುಕ್ತ ಆಡಳಿತ ನರೇಂದ್ರ ಮೋದಿಯವರು ನೀಡಿದ್ದಾರೆ. ಮೋಜು ಮಸ್ತಿಗಾಗಿ 26 ಪಕ್ಷಗಳು ಮಹಾಘಟ್ ಬಂಧನ್ ಕಟ್ಟಿಕೊಂಡಿದ್ದಾರೆ. ಮೋದಿಯವರು ಮೂರನೇ ಬಾರಿಗೆ ಮತ್ತೆ ದೇಶದ ಪ್ರಧಾನ ಮಂತ್ರಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾತು ಮುಂದುವರಿಸಿದ ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ದೇವಸ್ಥಾನದಲ್ಲಿ ಪೂಜೆ ಮಾಡಲು ಅನುಮತಿ ಪಡೆಯಬೇಕು ಎಂದು ಹೇಳಿದೆ. ಆದರೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಯಾವ ದೊಣ್ಣೆನಾಯ್ಕನ ಅಪ್ಪಣೆ ಬೇಕಾಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications