"ಪ್ರಚಾರಕ್ಕಾಗಿ ಇಷ್ಟೆಲ್ಲಾ ಸುಳ್ಳು ಹೇಳುತ್ತಾರಲ್ಲ ರೇಣುಕಾಚಾರ್ಯ"
ದಾವಣಗೆರೆ, ಏಪ್ರಿಲ್ 28: "ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು 3 ದಿನ ಬೆಂಗಳೂರು, 2 ದಿನ ದಾವಣಗೆರೆಯಲ್ಲಿರುತ್ತಾರೆ. ಆದರೆ ಇವರನ್ನು ಯಾವುದೇ ವೈದ್ಯಕೀಯ ಪರೀಕ್ಷೆ ಮಾಡದೇ ಸಂಚರಿಸಲು ಅನುಮತಿ ನೀಡಲಾಗಿದೆ. ಇದರಿಂದಾಗಿ ಕ್ಷೇತ್ರದ ಜನರು ಭಯಗೊಂಡಿದ್ದಾರೆ" ಎಂದು ಮಾಜಿ ಶಾಸಕ ಶಾಂತನಗೌಡ ಆರೋಪಿಸಿದ್ದಾರೆ.
Recommended Video
ನಗರದ ಬಾಪೂಜಿ ಅತಿಥಿ ಗೃಹದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, "ದೇಶವೇ ಲಾಕ್ ಡೌನ್ನಲ್ಲಿದೆ. ಹೊನ್ನಾಳಿ ಶಾಸಕರು ಮಾತ್ರ ಈ ಸಮಯದಲ್ಲೂ ಹಳ್ಳಿ ಹಳ್ಳಿಗಳಲ್ಲಿ ತಿರುಗುತ್ತಿದ್ದಾರೆ. ದಾವಣಗೆರೆ, ಬೆಂಗಳೂರು ಹೀಗೆ ಸಂಚಾರ ಮಾಡುತ್ತಿದ್ದಾರೆ. ಹೊರ ಜಿಲ್ಲೆಗೆ ಹೋಗಿ ಬಂದರೆ ಅವಲೋಕನದಲ್ಲಿಡಬೇಕಾಗುತ್ತದೆ. ಆದರೆ ಶಾಸಕರು ಮಾತ್ರ ಇದ್ಯಾವುದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಇದಲ್ಲದೇ ಕ್ಷೇತ್ರದಲ್ಲಿ ಶಾಸಕರು ಸುಳ್ಳು ಹೇಳಿ ಪ್ರಚಾರ ಪಡೆಯುತ್ತಿದ್ದಾರೆ. ಸ್ಕ್ರೀನಿಂಗ್ ಮಾಡುತ್ತಾರೆ ಎಂದು ಸಬೂಬು ಹೇಳುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಜಿಲ್ಲೆಯಲ್ಲಿ ಹಾಗೂ ತಾಲ್ಲೂಕಿನಲ್ಲಿ ಹೀಗೆ ನಡೆದುಕೊಳ್ಳುತ್ತಿರುವುದು ಬೇಸರ ತಂದಿದೆ" ಎಂದು ಆರೋಪಿಸಿದ್ದಾರೆ.

"ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಇರುವುದರಿಂದ ಬಡವರಿಗೆ ತೊಂದರೆಯಾಗದಂತೆ ದಾನಿಗಳು, ಸಂಘ ಸಂಸ್ಥೆಗಳು ನೀಡಿರುವ ಕಿಟ್ ಗಳನ್ನು ತಮ್ಮದೆಂದು ಹೇಳಿ ಹಂಚುತ್ತಿದ್ದಾರೆ. ಅಷ್ಟೇ ಅಲ್ಲದೇ ಮಾಧ್ಯಮಗಳಲ್ಲಿ 2 ಸಾವಿರ ಜನಕ್ಕೆ ನಿತ್ಯ ಉಪಹಾರ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ 10 ಸಾವಿರ ಆಹಾರ ಕಿಟ್ ನೀಡುತ್ತೇನೆ ಎಂದಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಕಚೇರಿಗೆ ತೆರಳಿ ಕೇಳಿದಾಗ ಸುಳ್ಳು ಎಂದು ತಿಳಿದಿದೆ. ಕೇವಲ ಪ್ರಚಾರಕ್ಕಾಗಿ ಶಾಸಕ ರೇಣುಕಾಚಾರ್ಯ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಇದುವರೆಗೂ ತಮ್ಮ ಅನುದಾನದಿಂದ ಯಾವುದೇ ನೆರವು ನೀಡಿಲ್ಲ" ಎಂದು ಕಿಡಿಕಾರಿದ್ದಾರೆ.
"ಹೊನ್ನಾಳಿ ತಾಲ್ಲೂಕಿನಲ್ಲಿ ಆರೋಗ್ಯ ಇಲಾಖೆಯವರ ಸಮಸ್ಯೆಗೆ ಸ್ಪಂದಿಸಿಲ್ಲ. ರೈತರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿಗಳೇ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಬುದ್ಧಿವಾದ ಹೇಳಿದ್ದಾರೆ. ಇಷ್ಟಾದರೂ ಶಾಸಕರ ವರ್ತನೆಯಲ್ಲಿ ಬದಲಾವಣೆಯಾಗಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications