ಉಕ್ರೇನ್ನಲ್ಲಿ ಸಿಲುಕಿದ ದಾವಣಗೆರೆಯ ನಾಲ್ವರು ವಿದ್ಯಾರ್ಥಿಗಳು
ದಾವಣಗೆರೆ, ಫೆಬ್ರವರಿ 24; ದಾವಣಗೆರೆಯಿಂದ ಉಕ್ರೇನ್ಗೆ ವಿದ್ಯಾಭ್ಯಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಸಿಲುಕಿ ಹಾಕಿಕೊಂಡಿದ್ದಾರೆ. ಉಕ್ರೇನ್ನಲ್ಲಿರುವ ಎಲ್ಲ ನಾಲ್ವರು ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ.
ನಗರದ ಕೆಟಿಜೆ ನಗರದ ಅಂಜುಮನ್ ಶಾಲೆ ಬಳಿಯ ವಾಸಿಯಾದ ಉಪನ್ಯಾಸಕ ಶೌಖತ್ ಅಲಿ ಎಂಬುವವರ ಪುತ್ರ ಮಹ್ಮದ್ ಅಬೀದ್ ಅಲಿ, ವಿದ್ಯಾರ್ಥಿನಿಯರಾದ ಹಬೀಬಾ, ಮಿಸ್ಬಾ ಹಾಗೂ ಹರಿಹರದ ಸುತನ್ ಎಂಬುವವರು ಉಕ್ರೇನ್ಗೆ ವಿದ್ಯಾಭ್ಯಾಸಕ್ಕೆಂದು ತೆರಳಿದ್ದರು.
ಮಹ್ಮದ್ ಅಬೀಬ್ ಅಲಿ ತಂದೆ ಶೌಖತ್ ಅಲಿ ಮಾತನಾಡಿ, "ಮಹ್ಮದ್ ಅಬೀಬ್ ಅಲಿ ಹೋಗಿ ಆರು ತಿಂಗಳಾಗಿದೆ. ಒಂದು ಸೆಮಿಸ್ಟರ್ ಮುಕ್ತಾಯವಾಗಿದೆ. ಉಕ್ರೇನ್ ಪರಿಸ್ಥಿತಿ ನೋಡಿ ಕಳೆದ ತಿಂಗಳೇ ಮಗನನ್ನು ಕರೆತರುವ ಯೋಜನೆ ಇತ್ತು. ಆದರೆ ವಿಶ್ವವಿದ್ಯಾಲಯದವರು ನಮಗೆ ಏನು ಆಗಲ್ಲ ಎಂಬ ಭರವಸೆ ನೀಡಿದ್ದರು" ಎಂದರು.

"ಹಾಗಾಗಿ ಸುಮ್ಮನಾಗಿದ್ದೆವು. ನಿನ್ನೆ ಯಾರು ಹೋಗುವರು ಹೋಗಬಹುದು ಅಂತಾ ವಿಶ್ವವಿದ್ಯಾಲಯದವರು ಹೇಳಿದ್ದಾರೆ. ಫೆಬ್ರವರಿ 25ಕ್ಕೆ ವಾಪಸ್ ಬರಲು ಟಿಕೆಟ್ ಬುಕ್ ಆಗಿತ್ತು. ಆದರೆ ಪರಿಸ್ಥಿತಿ ಹೀಗಾಗಿದೆ" ಎಂದು ತಿಳಿಸಿದ್ದಾರೆ.
"ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಮಗ ಸುರಕ್ಷಿತವಾಗಿ ಮನೆಗೆ ಬರುತ್ತಾನೆ ಎಂಬ ವಿಶ್ವಾಸವಿದೆ. ವಿದೇಶಾಂಗ ಇಲಾಖೆ ಈ ವಿಚಾರದಲ್ಲಿ ಗಮನ ಹರಿಸಬೇಕಿದೆ" ಎಂದರು.
"ಉಕ್ರೇನ್ನಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದಲು ತೆರಳಿದ್ದ. ಈತನ ಜೊತೆಗೆ ದಾವಣಗೆರೆಯ ಮೂವರು ಇದ್ದಾರೆ. ಅಲ್ಲಿನ ಪರಿಸ್ಥಿತಿ ಕಂಡು ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ ಆದಷ್ಟು ಬೇಗ ಭಾರತಕ್ಕೆ ಸುರಕ್ಷಿತವಾಗಿ ಕರೆತರಬೇಕೆಂದು" ಮನವಿ ಮಾಡಿದರು.
-
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications